Homeಮುಖಪುಟದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿಯಾಗಿದೆ. ಲಕ್ಷಾಂತರ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿ ಪ್ರವೇಶಿಸಿದ ರೈತರು ಶಾಂತಿಯುತ ಪರೇಡ್‌ ನಡೆಸಿ ಕೇಂದ್ರ ಸರ್ಕಾರವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿಯಾಗಿದ್ದು, ಶೇ. 99 ಶಾಂತಿಯುತವಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನೂ ಅರ್ಧದಷ್ಟು ಮಾತ್ರ ಟ್ರ್ಯಾಕ್ಟರ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದು ಇನ್ನು ಲಕ್ಷಾಂತರ ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸುತ್ತಲೇ ಇವೆ. ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅಲ್ಲದೇ ರೈತರ ಐತಿಹಾಸಿಕ ಪರೇಡ್ ನೋಡಲು ಸಾವಿರಾರು ಜನ ರಸ್ತೆಬದಿಗಳನ್ನು ಸೇರಿದ್ದು ರೈತರಿಗೆ ಜೈಕಾರ ಕೂಗಿದ್ದಾರೆ.

ಇನ್ನು ರೈತ ಸಂಘಟನೆಗಳ ಕೆಲವು ಗುಂಪು ಕೆಂಪುಕೋಟೆ ತಲುಪಿ ಅಲ್ಲಿ ರೈತ ಧ್ವಜಗಳನ್ನು ಹಾರಿಸಿದ್ದಾರೆ. ಟ್ರ್ಯಾಕ್ಟರ್ ಮತ್ತು ಪೊಲೀಸರ ಘರ್ಷಣೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದಾನೆ. ಈ ಕುರಿತು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದೆ.

“ಇಂದಿನ ರೈತ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಅಭೂತಪೂರ್ವವಾಗಿ ಭಾಗವಹಿಸಿದ್ದಕ್ಕಾಗಿ ರೈತರಿಗೆ ಧನ್ಯವಾದಗಳು. ಇಂದು ನಡೆದ ಅನಪೇಕ್ಷಿತ ಮತ್ತು ಸ್ವೀಕಾರಾರ್ಹವಲ್ಲದ ಘಟನೆಗಳನ್ನು ನಾವು ಖಂಡಿಸುತ್ತೇವೆ ಮತ್ತು ವಿಷಾದಿಸುತ್ತೇವೆ ಮತ್ತು ಅಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವವರಿಂದ ನಮ್ಮನ್ನು ಬೇರ್ಪಡಿಸುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ನಮ್ಮ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ಮಾರ್ಗವನ್ನು ಉಲ್ಲಂಘಿಸಿದ್ದಾರೆ ಮತ್ತು ಖಂಡನೀಯ ಕೃತ್ಯಗಳಲ್ಲಿ ತೊಡಗಿದ್ದಾರೆ. ಕೆಲ ಸಮಾಜ ವಿರೋಧಿ ಶಕ್ತಿಗಳು ಒಳನುಗ್ಗಿ ಶಾಂತಿಗೆಡಿಸಿರುವುದು ಸರಿಯಲ್ಲ. ಶಾಂತಿ ನಮ್ಮ ದೊಡ್ಡ ಶಕ್ತಿ,  ಯಾವುದೇ ನಿಯಮ ಉಲ್ಲಂಘನೆಯು ಚಳವಳಿಗೆ ನೋವುಂಟು ಮಾಡುತ್ತದೆ ಎಂದು ನಾವು ಯಾವಾಗಲೂ ಭಾವಿಸಿದ್ದೇವೆ ಎಂದು ಮೋರ್ಚಾ ಹೇಳಿದೆ.

ಆದರೆ 6 ತಿಂಗಳಿಗಿಂತ ಹೆಚ್ಚು ಕಾಲ ನಡೆಯುತ್ತಿರುವ ಈ ಸುದೀರ್ಘ ಹೋರಾಟ, ಮತ್ತು ದೆಹಲಿ ಗಡಿಯಲ್ಲಿ 60 ದಿನಗಳಿಗಿಂತಲೂ ಹೆಚ್ಚು ನಡೆಯುತ್ತಿರುವ ಪ್ರತಿಭಟನೆ ಕೂಡ ಇವತ್ತಿನ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ರೈತರು ದೂರಿದ್ದಾರೆ.

ಶಿಸ್ತನ್ನು ಉಲ್ಲಂಘಿಸಿದ ಅಂತಹ ಎಲ್ಲ ಅಂಶಗಳಿಂದ ನಾವು ನಮ್ಮನ್ನು ಬೇರ್ಪಡಿಸುತ್ತೇವೆ. ಮೆರವಣಿಗೆಯ ಮಾರ್ಗಗಳನ್ನು ಅನುಸರಿಸಬೇಕೆಂದು ಎಲ್ಲರಲ್ಲಿಯೂ ಬಲವಾಗಿ ಮನವಿ ಮಾಡುತ್ತೇವೆ ಮತ್ತು ಯಾವುದೇ ಹಿಂಸಾತ್ಮಕ ಕ್ರಮ ಅಥವಾ ರಾಷ್ಟ್ರೀಯ ಚಿಹ್ನೆಗಳು ಮತ್ತು ಘನತೆಗೆ ಕಳಂಕ ತರುವಂತಹ ಯಾವುದನ್ನೂ ಮಾಡಬಾರದು. ಅಂತಹ ಯಾವುದೇ ಕೃತ್ಯಗಳಿಂದ ದೂರವಿರಲು ನಾವು ಎಲ್ಲರಿಗೂ ಮನವಿ ಮಾಡುತ್ತೇವೆ. ಕೆಲವು ವಿಷಾದನೀಯ ಉಲ್ಲಂಘನೆಗಳ ಹೊರತಾಗಿ, ಯೋಜನೆಯ ಪ್ರಕಾರ ಮೆರವಣಿಗೆಗಳು ಶಾಂತಿಯುತವಾಗಿ ನಡೆಯುತ್ತಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...