Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...