Homeಕರ್ನಾಟಕಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ ಬರಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆ ನೀವೇ ಕಳೆದುಕೊಳ್ಳುತ್ತೀರಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಆಕ್ರೋಶ ವ್ಯಕ್ತಪಡಿಸಿದರು. ಅವರು ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆದ ಟ್ರಾಕ್ಟರ್‌ ರ್‍ಯಾಲಿಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

“ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ ಮತ್ತು ಖಾಲಿಸ್ತಾನಿಗಳ ಬೆಂಬಲ ಇದೆ ಎಂದು ಬೊಬ್ಬೆ ಇಡುತ್ತಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಎಂದು ಕರೆಯುವ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಎಂದು ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನುವ ಜನರು ಆಡುವ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರಲು ಕಾರಣ ರೈತರೆ ಆಗಿದ್ದಾರೆ. ಉತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ” ಎಂದು ಕೃಷಿ ಸಚಿವ ಬಿ. ಸಿ. ಪಾಟಿಲ್ ಅವರ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರು ಜನಗಣರಾಜ್ಯೋತ್ಸವ: ರೈತ ಹೋರಾಟದ ಚಿತ್ರ ಸುದ್ದಿಗಳು

“ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತನಾಲು ತಿಳಿದಿಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿಯ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆಯನ್ನು ನೀವೇ ಕಳೆದುಕೊಳ್ಳುತ್ತೀರಿ” ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇಂದು ದೇಶದಾದ್ಯಂತ ನಡೆದ ರೈತ ಹೋರಾಟದ ಬಗ್ಗೆ ಕೊಪ್ಪಳದಲ್ಲಿ ಹೇಳಿಕೆ ನೀಡಿದ್ದ ಸಚಿವ ಬಿ.ಸಿ. ಪಾಟೀಲ್, “ಇದು ರೈತರ ಪ್ರತಿಭಟನೆಯಲ್ಲ ಬದಲಿಗೆ ಭಯೋತ್ಪಾದಕರ ಕೃತ್ಯ. ಇದರ ಹಿಂದೆ ಖಾಲಿಸ್ತಾನಿಗಳು ಮತ್ತು ಕಾಂಗ್ರೆಸ್​ ಕೈವಾಡವಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೃಷಿ ಸಚಿವ ಬಿ.ಸಿ ಪಾಟಿಲ್ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ನೋಡಿ

ಸಚಿವರ ಈ ಹೇಳಿಕೆಗೆ ರಾಜ್ಯದ ವಿವಿಧ ರೈತ ಸಂಘಟನೆಗಳು ಇಂದು ಒಂದಾಗಿ ಸಂಯುಕ್ತ ಹೋರಾಟ ಕರ್ನಾಟಕ ಹೆಸರಿನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಮಾವೇಶದಲ್ಲಿ ಕಿಡಿಕಾರಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​, “ರೈತ ಹೋರಾಟಗಾರರು ಸ್ವಾಭಿಮಾನಿಗಳು. ಆದರೆ, ಕೆಲ ಬಿಜೆಪಿ ನಾಯಕರು ರೈತರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ರೈತ ಹೋರಾಟಗಾರರಿಗೆ ಖಾಲಿಸ್ತಾನಿಗಳ ಮತ್ತು ಪಾಕಿಸ್ತಾನಿಗಳ ಸಹಾಯವಿದೆ ಎಂದು ಆಧಾರವಿಲ್ಲದೆ ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

“ನಮ್ಮದೇ ಅನ್ನ ತಿಂದು ನಮ್ಮನ್ನೇ ಭಯೋತ್ಪಾದಕರು ಎಂದು ಹೀಯಾಳಿಸುತ್ತೀರಾ? ಮಾಜಿ ಪ್ರಧಾನಿ ದಿವಂಗತ ಇಂದಿರ ಗಾಂಧಿಯೂ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈಗ ಅದನ್ನೇ ನರೇಂದ್ರ ಮೋದಿಯೂ ಮಾಡ್ತುದ್ದಾರೆ. ರೈತರ ಕತ್ತು ಹಿಡಿದು ಹೊರಗೆ ತಳ್ಳೋ ದೃಶ್ಯಗಳನ್ನು ನಾವಿಂದು ನೋಡುತ್ತಿದ್ದೇವೆ. ಮೋದಿಯವರ ಮಂಕಿಬಾತ್ ನಲ್ಲಿ‌ ಒಂದು ಮಾತಾದಾರೂ ರೈತರ ಬಗ್ಗೆ ಮಾತಾಡಿದ್ದಾರಾ..?” ಎಂದು ಕೋಡಿಹಳ್ಳಿ ಚಂದ್ರಶೇಕರ್​ ಕಿಡಿಕಾರಿದರು.

“ಈ ಸರ್ವಾಧಿಕಾರಿಯ ಧೋರಣೆ ಇನ್ನು ಮುಂದೆ ನಡೆಯುವುದಿಲ್ಲ ಮೋದಿಯವರೇ. ಸ್ವಲ್ಪ ಹದ್ದುಬಸ್ತಿನಲ್ಲಿ ಇರೋದು ನಿಮಗೆ ಒಳ್ಳೆಯದು. ಈಸ್ಟ್ ಇಂಡಿಯಾ ಕಂಪೆನಿಯಿಂದ ದೇಶದವನ್ನು ವಾಪಾಸ್ ಪಡೆಯಲು ಬಹಳ ಹೋರಾಟ ನಡೆದಿದೆ. ಈಗ ನೀವು ತಿರುಗಿ ಕಾರ್ಪೋರೇಟ್ ಕಂಪೆನಿಗಳಿಗೆ ವಾಪಾಸ್ ಕೊಡಲು ಹೊರಟಿದ್ದೀರಾ..? ಮೋದಿಯವರೇ ಈ ದೇಶ ನಿಮ್ಮ ಅಪ್ಪನದ್ದಲ್ಲ… ನಮ್ಮ ಅಪ್ಪಂದಿರು ದುಡಿದು ಬೆವರು ಹರಿಸಿದ ದೇಶ ಇದು. ಹೀಗಾಗಿ ನಿಮ್ಮ ಹಿಟ್ಲರ್ ಆಡಳಿತವನ್ನು ನಿಲ್ಲಿಸಿ. ಇಲ್ಲದಿದ್ದರೆ, ಅನುಭವಿಸುತ್ತೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

ಗೋಹತ್ಯೆ ಕಾಯ್ದೆ ವಿರುದ್ಧವೂ ಆಕ್ರೋಶ ಹೊರಹಾಕಿರುವ ಕೋಡಿಹಳ್ಳಿ ಚಂದ್ರಶೇಖರ್, “ಜಾನುವಾರು ಹತ್ಯೆ ಕಾಯ್ದೆಗಳನ್ನು ತಂದಿದ್ದಾರೆ. ನಾವು ಹಸು ಹತ್ತುಗಳನ್ನು ಪೂಜೆ ಮಾಡುವವರೇ. ಆದರೆ, ಅದನ್ನು ಹತ್ಯೆ ಮಾಡಬೇಡಿ ಅಂದ್ರೆ ನಮ್ಮ ಜೀವನ ಏನಾಗಬೇಡ..? ಹಸುಗಳ ಪೋಷಣೆ ಮಾಡ್ತೀವಿ, ಅದಕ್ಕೆ ಮುಲಾಮು ಹಚ್ಚ್ತೀವಿ, ಅದನ್ನೆ ನೋಡಿಕೊಳ್ತೀವಿ. ಹಾಗಾಗಿ ನಿಮ್ಮ ಗೋ ಹತ್ಯೆ ನಿಷೇಧ ಅನ್ನೋದೆಲ್ಲಾ ಬೇಡ. ವಿಧಾನಸೌದದಲ್ಲಿ ಕೂತು ಕಾನೂನು ಪಾಸ್ ಮಾಡಿದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

“ದೆಹಲಿಯಲ್ಲಿ ರೈತರು ಜಗತ್ತಿನ ಇತಿಹಾಸದಲ್ಲಿ ಮರೆಯಾಗದೆ ಉಳಿಯುವಂತಹ ದಾಖಲೆ ಮಾಡಿದ್ದಾರೆ. ಲಕ್ಷಾಂತರ ಟ್ರಾಕ್ಟರ್‌‌ಗಳನ್ನು ತಂದು ಚಳುವಳಿ ಮಾಡಿದ್ದಾರೆ. ಇದು ರೈತರ ಇತಿಹಾಸದಲ್ಲೇ ಅತಿ ದೊಡ್ಡ ಹೋರಾಟ. ದೆಹಲಿಯಲ್ಲಿ ಅಹಿತಕರ ಘಟನೆ ನಡೆದಿದೆ. ದೆಹಲಿಯಲ್ಲಿ ರೈತರು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಅಂತ ಸುದ್ದಿ ಹಬ್ಬಿದೆ. ಆದರೆ, ತಾಳ್ಮೆಗೆ ಇತಿಮಿತಿ ಅನ್ನೋದು ಇರುತ್ತದೆ.

ಆದರೆ ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತರ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ. ಕಾನೂನುಗಳನ್ನು ಅಮಾನಾತು ಮಾಡಿದ್ದೇವೆ ಅಂತ ಹೇಳಿ. ಆಗ ಎಲ್ಲವೂ ತಣ್ಣಗಾಗಲಿದೆ, ಇಲ್ಲದಿದ್ದರೆ ಈ ರೈತ ಹೋರಾಟ ನಿಲ್ಲುವುದಿಲ್ಲ” ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದನ್ನೇ ಬಿಜೆಪಿ ಯವರು ಮಾಡಿದ್ದರೆ ಈ ಮಾತುಗಳನ್ನು ಹೇಳಲು ಇವನಿಗೆ ಸಾದ್ಯವಿತ್ತಾ?
    ಇವನು ರಾಜಕೀಯ ಪ್ರವೇಶಿಸಿದ್ದೇ ಕಾಂಗ್ರೆಸ್ ಮೂಲಕ ಅಲ್ವಾ?
    ಆವತ್ತು ಹೇಳಿಲ್ಲ ಕಾಂಗ್ರೆಸ್ ಬಯೋತ್ಪಾದಕರಿಗೆ ಸಪೋರ್ಟ್ ಮಾಡುತ್ತದೆ ಎಂದು.
    ಇಂತಹವರ ಹೇಳಿಕೆಗಳೇ ರೈತರು ರೊಚ್ಚಿಗೆಳಲು ಕಾರಣ.
    ಇಂತವರನ್ನು ಮೊದಲು ಬಂಧಿಸುವ ಕಾರ್ಯ ಪೋಲೀಸರು ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನ ಹಟ್ಟಾಲಾ ಪಾರಾದಲ್ಲಿರುವ ಅವರ...

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...