Homeಮುಖಪುಟಟ್ರಾಕ್ಟರ್‌‌ ಪರೇಡ್: 22 ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಟ್ರಾಕ್ಟರ್‌‌ ಪರೇಡ್: 22 ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಪ್ರತಿಭಟನಾ ನಿರತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್‌ ಕೂಡಾ ನಡೆಸಿದ್ದರು.

- Advertisement -
- Advertisement -

ಮಂಗಳವಾರ ಗಣರಾಜ್ಯೋತ್ಸವದಂದು ನಡೆದ ದೆಹಲಿಯ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಪೊಲೀಸರು ಮತ್ತು ರೈತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈವರೆಗೆ ಕನಿಷ್ಠ 22 ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎನ್ನಲಾಗುತ್ತಿದ್ದು, ಶಂಕಿತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ವರದಿ ತಿಳಿಸಿದೆ.

ದೆಹಲಿ ಪೊಲೀಸ್ ವಕ್ತಾರ ಅನಿಲ್ ಮಿತ್ತಲ್, “ರಾಜಧಾನಿಯಾದ್ಯಂತದ ಪೊಲೀಸ್ ಠಾಣೆಗಳಲ್ಲಿ ಭಾರತೀಯ ದಂಡ ಸಂಹಿತೆ ವಿಭಾಗಗಳ ಅಡಿಯಲ್ಲಿ ಗಲಭೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಸೇರಿದಂತೆ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಎಫ್‌‌ಐಆ‌‌ರ್‌‌ಗಳನ್ನು ನೋಂದಾಯಿಸುವ ಸಾಧ್ಯತೆಯಿದೆ ಎನ್ನಲಾಗಿದ್ದು, “ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಧ್ವಜ ಹಾರಾಟ – ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಮತ್ತು ಮಾಧ್ಯಮಗಳು: ಭಾರಿ ಆಕ್ರೋಶ

ಮೂರು ಕರಾಳ ಕೃಷಿ ಕಾನೂನುಗಳ ವಿರೋಧಿಸಿ ಪ್ರತಿಭಟಿಸಿ ದೇಶದಾದ್ಯಂತ ಟ್ರಾಕ್ಟರ್‌ ರ್‍ಯಾಲಿಗಳು ನಡೆದಿದ್ದವು. ಆದರೆ ದೆಹಲಿಯ ರ್‍ಯಾಲಿಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರೈತರ ಗುಂಪೊಂದು ದೆಹಲಿಯ ಕೆಂಪು ಕೋಟೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರಾಕ್ಟರುಗಳನ್ನು ಓಡಿಸಿದ್ದು ಗೊಂದಲಕ್ಕೆ ಕಾರಣವಾಗಿದೆ.

ಪ್ರತಿಭಟನಾ ನಿರತ ರೈತರು ಕಾನೂನುಗಳನ್ನು ವಿರೋಧಿಸಿ 62 ನೇ ದಿನದಂದು ದೆಹಲಿಯ ಮೂರು ಗೊತ್ತುಪಡಿಸಿದ ಮಾರ್ಗಗಳ ಮೂಲಕ ರ್‍ಯಾಲಿಯಲ್ಲಿ ತೆರಳಬೇಕಾಗಿತ್ತು. ಗಾಜಿಪುರದ ಪ್ರತಿಭಟನಾ ಸ್ಥಳದಿಂದ ಒಂದು ಗುಂಪು ಬೇರೆಯೆ ಮಾರ್ಗ ಹಿಡಿದು ಗೊಂದಲವನ್ನು ಸೃಷ್ಟಿಸಿತು. ಸಿಂಗು ಗಡಿಯ ಮತ್ತೊಂದು ಗುಂಪು ಕೆಂಪು ಕೋಟೆಗೆ ನುಗ್ಗಿ ಸಿಖ್ಖರ ನಿಶಾನ್ ಸಾಹಿಬ್ ಮತ್ತು ರೈತರ ಧ್ವಜವನ್ನು ಹಾರಿಸಿದ್ದರು. ಈ ಹೊತ್ತು ರಾಷ್ಟ್ರಧ್ವಜವು ಸಾಮಾನ್ಯವಾಗಿ ಹಾರಾಡುತ್ತಿರುವ ಅದೇ ಸ್ಥಳದಲ್ಲಿ ಎತ್ತರದಲ್ಲಿ ಹಾರಾಡುತ್ತಿತ್ತು ಮತ್ತು ಅದಕ್ಕೆ ಯಾವುದೆ ಅಗೌರವ ಮತ್ತು ಹಾನಿಯನ್ನು ರೈತರು ಉಂಟು ಮಾಡಿಲ್ಲ.

ಪ್ರತಿಭಟನಾ ನಿರತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದರು ಮತ್ತು ಹಲವಾರು ಕಡೆಗಳಲ್ಲಿ ಲಾಠಿ ಚಾರ್ಜ್‌ ಕೂಡಾ ನಡೆಸಲಾಗಿತ್ತು.

ಇದನ್ನೂ ಓದಿ: ಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...