Homeಕರ್ನಾಟಕದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌'ಗಳ ದುಸ್ಥಿತಿ

ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

- Advertisement -
- Advertisement -

ಪ್ರೊಎಂ.ಡಿ.ನಂಜುಂಡಸ್ವಾಮಿ ಯವರಿರುವ ತನಕ (ಮತ್ತು ಬಹುಶಃ ಈಗಲೂ) ರೈತಸಂಘದ ದೊಡ್ಡ ಹೋರಾಟಗಳ ಪೋಸ್ಟರ್‌ನಲ್ಲಿ ಗಾಂಧಿಯವರ ಚಿತ್ರ ಕಡ್ಡಾಯವಾಗಿ ಇರುತ್ತಿತ್ತು. ಒಂದು ವೇಳೆ ಆ ಹೋರಾಟವು ಯಾವುದೋ ಸರ್ಕಾರಿ ನಿಯಮದ ವಿರುದ್ಧವಿದ್ದರೆ, ಪೋಸ್ಟರ್‌ನಲ್ಲಿನ ಗಾಂಧಿ ಆ ನಿಯಮದ ಪ್ರತಿಯನ್ನು ಹರಿದು ಹಾಕುತ್ತಿರುವ ಚಿತ್ರ ಬರೆಸಲಾಗುತ್ತಿತ್ತು. ಒಮ್ಮೊಮ್ಮೆ ಗಾಂಧಿ ಕೋಲು ತೆಗೆದುಕೊಂಡು ಅಟ್ಟಿಸಿಕೊಂಡೂ ಹೋಗುತ್ತಿದ್ದರು. ಅದೇನೇ ಇದ್ದರೂ, ರೈತಸಂಘ ಅನುಸರಿಸುವುದು ಗಾಂಧಿಯವರ ಅಹಿಂಸಾ ಮಾರ್ಗದ ಹೋರಾಟ ಎಂದೇ ಹೇಳುತ್ತಿತ್ತು.

ಅಧಿಕಾರಿಗಳನ್ನು ಕೂಡಿ ಹಾಕುವುದು, ಊರೊಳಗೆ ಬಿಡದಂತೆ ತಡೆಯುವುದು ಇತ್ಯಾದಿಗಳು ರೈತಸಂಘದ ಹೋರಾಟದ ಭಾಗವಾಗಿತ್ತು. ಅಷ್ಟೇಕೆ ಕೆಂಟುಕಿ ಚಿಕನ್ ಅಂಗಡಿಗೆ ನುಗ್ಗಿ ಅದನ್ನು ಧ್ವಂಸಗೊಳಿಸಿದ್ದು, ಮೊನ್ಸಾಂಟೊ ಬೀಜ ಬಿತ್ತಿದ್ದ ಹೊಲಕ್ಕೆ ನುಗ್ಗಿ ನಾಶ ಮಾಡಿದ್ದು ಇತ್ಯಾದಿ ಸಾಂಕೇತಿಕ ಕ್ರಮಗಳನ್ನೂ ರೈತಸಂಘ ಕೈಗೊಂಡಿತ್ತು. ಆದರೆ, ಈ ಎಲ್ಲಾ ಕಾರ್ಯಾಚರಣೆಗಳಲ್ಲಿ ಮನುಷ್ಯರಿಗೆ ದೈಹಿಕ ಹಿಂಸೆ ಕೊಡುವ ಕೆಲಸವನ್ನು ರೈತಸಂಘ ಮಾಡುತ್ತಿರಲಿಲ್ಲ. ಆದರೆ ಆಸ್ತಿನಾಶ ಅಥವಾ ಕಾನೂನುಭಂಗವನ್ನು ಹಿಂಸೆಯೆಂದು ಬಗೆದಿರಲಿಲ್ಲ. ಹಾಗೆ ನೋಡಿದರೆ ಕಾಯ್ದೆ ಭಂಗವನ್ನು ಸ್ವತಃ ಗಾಂಧಿಯವರು ಹೋರಾಟದ ಒಂದು ವಿಧಾನವಾಗಿಯೂ ಬಳಸಿದ್ದರು.

ಗಾಂಧಿಯವರ ಹಿಂಸೆ ಅಥವಾ ಅಹಿಂಸೆಯ ಮಾನದಂಡಗಳೇ ಸರಿಯೆಂದೋ, ಅವನ್ನೇ ಸಾರ್ವತ್ರಿಕವಾಗಿ ಮತ್ತು ಸಾರ್ವಕಾಲಿಕವಾಗಿ ಅವುಗಳನ್ನು ಮಾನದಂಡಗಳನ್ನಾಗಿಟ್ಟುಕೊಳ್ಳಬೇಕೆಂದೋ ಅಲ್ಲ. ಆದರೆ ಹಿಂಸೆ ಅಥವಾ ಅಹಿಂಸೆಯ ಚರ್ಚೆ ಬಂದಾಗ ಈ ದೇಶದಲ್ಲಿ ಗಾಂಧಿಯವರ ಮಾರ್ಗವನ್ನು ಒಂದು ಮಾನದಂಡವಾಗಿ ಬಳಸಿರುವುದರಿಂದ ಇವನ್ನು ಉಲ್ಲೇಖಿಸಲಾಗಿದೆ.

ಬಹಳ ಮುಖ್ಯವಾಗಿ ಗಾಂಧಿಯವರ ಹಿಂಸೆ-ಅಹಿಂಸೆ ಚರ್ಚೆಯಲ್ಲಿ ಹಿಂಸೆಯ ವ್ಯಾಖ್ಯಾನವನ್ನು ಸೀಮಿತಗೊಳಿಸುವುದನ್ನು ಕೆಲವರು ವಿರೋಧಿಸುತ್ತಾರೆ. ಶ್ರೀಮಂತಿಕೆ-ಅಧಿಕಾರದ ಅಡಿಯಲ್ಲಿ ನಲುಗುವ ದುಡಿಯುವ ಸಮುದಾಯ, ಜಾತಿ ಶೋಷಣೆಯಿಂದ ನಲುಗುವ ಶೋಷಿತ ಜಾತಿಗಳು, ಗಂಡಾಳ್ವಿಕೆಯಲ್ಲಿ ಹಿಂಡಲ್ಪಡುವ ಮಹಿಳೆ ಇವರೆಲ್ಲರೂ ಸ್ಟ್ರಕ್ಚರಲ್ ಹಿಂಸೆಯಿಂದಲೇ ನೋವುಣ್ಣುವುದಿಲ್ಲವೇ? ಕೆಲವೊಮ್ಮೆ ಇಂತಹವರಿಗೆ ತಕ್ಷಣದಲ್ಲೇ ತಿರುಗೇಟು ನೀಡಬೇಕಾಗಿ ಬರುವ ಅನಿವಾರ್ಯತೆ ಇರುವುದಿಲ್ಲವೇ? ಅಂತಹ ಹೊತ್ತಿನಲ್ಲಿ ನೀವು ಅವರಿಗೆ ಅಹಿಂಸೆಯನ್ನು ಬೋಧಿಸುವುದೇ ಹಿಂಸೆಯಾಗುತ್ತದೆ ಎಂಬುದು ಹಿಂಸೆ-ಅಹಿಂಸೆಯ ಕುರಿತು ಗಾಂಧಿ ವಿಚಾರಧಾರೆಗಿರುವ ಪ್ರಮುಖ ತಕರಾರು.

ವಾಸ್ತವದಲ್ಲಿ ಅಂತಹ ಯಾವ ಹಿಂಸೆಯನ್ನೂ ಮಾಡದೇ 60 ದಿನಗಳಿಂದ ಅತ್ಯಂತ ಶುದ್ಧ ಗಾಂಧಿ ಮಾರ್ಗದಲ್ಲಿ ದೆಹಲಿಯ ಹೊರಗೆ ಸತ್ಯಾಗ್ರಹವನ್ನು ನಡೆಸಿದ ಧೀಮಂತ ರೈತ ಸಮುದಾಯದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಇಂದು ಮಾಡಲಾಯಿತು. ಲಕ್ಷಾಂತರ ಜನರು ನಾವು ಊಹಿಸಿಕೊಳ್ಳಲಾಗದ ಚಳಿಯಲ್ಲಿ, ಮನೆಯಿಂದ ದೂರ ಉಳಿದು, ಸಂಪಾದನೆಯಿಂದ ದೂರ ಉಳಿದು ಎರಡು ತಿಂಗಳು ಬೀದಿಯಲ್ಲಿ ಕಳೆದಿದ್ದು ಸತ್ಯಾಗ್ರಹದ ಭಾಗವಾಗಿ. ’ಸ್ವತಂತ್ರ ಭಾರತದಲ್ಲಿ ಪ್ರಜೆಗಳು ಹೀಗೆ ಮಾಡಬೇಕಾಗಿ ಬಂದಿದ್ದು ಪ್ರಭುತ್ವದ ಕ್ರೌರ್ಯದಿಂದಲ್ಲದೇ ಮತ್ತೇನು? ಇದರ ಬಗ್ಗೆ ದನಿಯೆತ್ತಿದ ಮಾತ್ರಕ್ಕೆ ರಾಜ್‌ದೀಪ್ ಸರದೇಸಾಯಿ, ಬರ್ಖಾದತ್‌ಗಳಿಗೆ ’ಆಕ್ರೋಶ ಭರಿತ’ ರೈತರು ಬ್ಯಾರಿಕೇಡ್‌ಗಳನ್ನು ಕಿತ್ತು ದೆಹಲಿಯ ಕಡೆಗೆ ಹೊರಟಿದ್ದು ಅಂತಹ ದೊಡ್ಡ ಸಮಸ್ಯೆಯಾಗಿ ಏಕೆ ಕಂಡಿತು? ತಮ್ಮ ತಮ್ಮ ಸುಖಾಸೀನ ಬದುಕಿನಿಂದ ಇದರ ಕುರಿತು ಸಲೀಸು ಕಾಮೆಂಟ್ ಮಾಡುವ ಧಾರ್ಷ್ಟ್ಯ ಎಲ್ಲಿಂದ ಬಂದಿತು ಎಂಬ ಪ್ರಶ್ನೆ ಸಹಜವಾಗಿಯೇ ಏಳುತ್ತದೆ.

PC : India Today

ಅರ್ನಾಬ್ ಗೋಸ್ವಾಮಿಯಂತಹ ಮನುಷ್ಯರೇ ಅಲ್ಲದ ಪತ್ರಕರ್ತ ವೇಷಧಾರಿಗಳು ಒಂದು ವೇಳೆ ಈ ವಿಚಾರದಲ್ಲಿ ಕೂಗಾಡಬಹುದು ಎಂಬ ಭಯ ಇರುವುದೇ ಆದಲ್ಲಿ, ಅದಕ್ಕೆ ಪ್ರತಿಯಾಗಿ ಆಡಬಹುದಾದ ಮಾತುಗಳು ಮೇಲೆ ಹೆಸರಿಸಿದ ಪತ್ರಕರ್ತರಲ್ಲಿ ಇರುವುದಿಲ್ಲ. ಏಕೆಂದರೆ ರೈತ ಕಾರ್ಮಿಕರೇ ಮೊದಲಾದ ಶೋಷಿತರು ದೀನರಾಗಿ ಪ್ರಭುತ್ವದ ಗುಂಡಿಗೆ ಎದೆಯೊಡ್ಡಿ ಮನಕರಗಿಸಬೇಕೇ ಹೊರತು, ಹಕ್ಕನ್ನು ಕೇಳುವುದು ಇವರಿಗೂ ಸಹನೆಯ ಸಂಗತಿಯಲ್ಲ.

ಹಾಗೆಯೇ ಶಶಿತರೂರ್‌ನಂತಹ ಒಬ್ಬ ’ಲಿಬರಲ್ ವ್ಯಕ್ತಿಗೆ, ಕೆಂಪು ಕೋಟೆಯ ಮುಂದಿನ ಧ್ವಜಸ್ತಂಭವೊಂದರಲ್ಲಿ ಬೇರೊಂದು ಧ್ವಜ ಹಾರಿದಾಕ್ಷಣ (ಅದನ್ನು ಹಾರಿಸಲು ಕಾರಣರಾದವರು ರೈತ ಚಳವಳಿಯ ಶೇ.99ರಷ್ಟು ಜನರನ್ನು ಪ್ರತಿನಿಧಿಸುವುದಿಲ್ಲ; ಅವರು ಸಂಚುಕೋರರೂ ಆಗಿರಬಹುದೆಂಬ ಅನುಮಾನಗಳು ಎದ್ದಿವೆ) ಕೂಡಲೇ ಖಂಡಿಸಬೇಕೆನಿಸುತ್ತದೆ. ದೆಹಲಿಯ ಸುತ್ತಮುತ್ತ ಎಂದೂ ಹಾರದಷ್ಟು ಸಂಖ್ಯೆಯ ಭಾರತದ ತ್ರಿವರ್ಣಧ್ವಜಗಳನ್ನು ಈ ರೈತರು ಕಟ್ಟಿಕೊಂಡು ಪರೇಡ್ ಹೊರಟಿದ್ದರು. ಇದನ್ನು ಬಿಟ್ಟರೆ ಆ ರೀತಿ ರಾಷ್ಟ್ರಧ್ವಜಗಳು ಕಂಡಿದ್ದು ಸಿಎಎ/ಎನ್‌ಆರ್‌ಸಿ ವಿರುದ್ಧದ ಆಂದೋಲನದಲ್ಲಿ! ಹೀಗಿರುವಾಗ ಇದ್ದಕ್ಕಿದ್ದಂತೆ ರಾಷ್ಟ್ರಧ್ವಜದ ಕುರಿತು ರೈತರಿಗೆ ತಿಳಿಸಿಕೊಡಲು ಹೋಗುವ ಆತುರ ಅವರದ್ದು. ಇಷ್ಟಕ್ಕೂ ದೇಶದ ಮರ್ಯಾದೆಯು ಬಾವುಟದಲ್ಲಿ ಇಲ್ಲ ಎಂಬುದು ಅರ್ಥವಾಗದಷ್ಟು ಮತಿಹೀನರೇ ಇವರು?

ಚಳವಳಿಯೊಂದನ್ನು ಕಟ್ಟುವುದು, ಸರ್ಕಾರದ ವಿರುದ್ಧ ನಿಲ್ಲುವುದು ಸುಲಭದ ಸಂಗತಿಯಲ್ಲ. ಅದರಲ್ಲೂ ಬಿಜೆಪಿಯಂತಹ ಪಕ್ಷದ ನೇತೃತ್ವದ, ಮೋದಿ-ಶಾರಂತಹ ಸರ್ವಾಧಿಕಾರಿಗಳ ನಾಯಕತ್ವದ ಎದುರು ಹೋರಾಟ ಕಟ್ಟುವುದು ಇನ್ನೂ ಕಷ್ಟ. ಮಾಧ್ಯಮಗಳು ಜನರ ದನಿಯಾಗದೇ ಆಳುವವರ ಬೇಟೆ ನಾಯಿಗಳಾದಾಗಂತೂ ಅಸಾಧ್ಯ. ಒಂದು ವೇಳೆ ಏನೋ ಒಂದು ದಿನದ ಹೋರಾಟ ಹೇಗೋ ಕಷ್ಟಪಟ್ಟು ಮಾಡಿ ಹೋಗಿಯೂ ಬಿಡಬಹುದು. ಆದರೆ ಲಕ್ಷಾಂತರ ಜನರನ್ನು ತಿಂಗಳುಗಟ್ಟಲೆ ಒಂದು ಕಡೆ ಇಟ್ಟುಕೊಂಡು ಚಳವಳಿ ಕಟ್ಟುವುದರ ಹಿಂದಿನ ಪರಿಶ್ರಮ ಮತ್ತು ಪ್ರಬುದ್ಧತೆಯನ್ನು ಕೇವಲ ವಿಶ್ಲೇಷಣೆಯ ಮುಖಾಂತರ ಅರಿತುಕೊಳ್ಳುವುದು ಅಸಾಧ್ಯ. ಅದು ಪ್ರತಿನಿತ್ಯ ಹೊಂದಿಸಬೇಕಾದ ರೊಟ್ಟಿ ಮತ್ತು ಇತರ ವ್ಯವಸ್ಥೆಗಳ ವಿಚಾರವಷ್ಟೇ ಅಲ್ಲ; ನೂರೆಂಟು ಬಗೆಯ ವ್ಯಕ್ತಿಗಳು ಮತ್ತು ವ್ಯಕ್ತಿತ್ವಗಳನ್ನು ನಿಭಾಯಿಸಬೇಕಾದ ಸವಾಲು. ಅದರಲ್ಲೂ ಇಲ್ಲಿ ಒಂದೇ ಸಂಘಟನೆಯಿಲ್ಲ; ಇರುವ ಇಡೀ ಜನಸಮೂಹವು ರೆಜಿಮೆಂಟೇಷನ್‌ಗೆ ಒಳಪಟ್ಟ ಸೈನಿಕರಲ್ಲ. ಅದರ ನೈತಿಕ ಶಕ್ತಿ ಕುಗ್ಗದಂತೆ, ವಿವಿಧ ಬಣ ಹಾಗೂ ಬಣ್ಣಗಳ ನಾಯಕರನ್ನೂ ಸಂಭಾಳಿಸಿಕೊಂಡು ಹೋಗುವುದು ಏನೋ ಒಂದು ಮಟ್ಟಿಗೆ ಸಾಧ್ಯವಾದರೆ ಅದೊಂದು ಪವಾಡ.

ಅಂತಹ ಪವಾಡವನ್ನು ಸಂಯುಕ್ತ ಕಿಸಾನ್ ಮೋರ್ಚಾದವರು ಮಾಡಿದ್ದಾರೆ. ಅದರ ಪ್ರಮುಖ ನೇತಾರರೊಬ್ಬರು ಹೇಳಿದಂತೆ, ’ವಿಚಾರಗಳ ಕುರಿತು ದಿನವಿಡೀ ಕಿತ್ತಾಡುತ್ತೇವೆ, ಅಂತಿಮವಾಗಿ ಸರ್ವಸಮ್ಮತ ತೀರ್ಮಾನಕ್ಕೆ ಬರುತ್ತೇವೆ’. ಇಂತಹ ಪವಾಡವನ್ನು ಸಾಧ್ಯವಾಗಿಸಿದ್ದು ನಾಯಕರು ಮಾತ್ರವಲ್ಲಾ, ಲಕ್ಷ ಲಕ್ಷ ಸಂಖ್ಯೆಯ ಸಾಮಾನ್ಯ ಜನರೂ ಸಹಾ. ಇಂತಹದೊಂದು ಅಪೂರ್ವ, ಧೀಮಂತ ಚಳವಳಿಯ ಕುರಿತು ’ಹೀಗೆ ಮಾಡಬೇಕಿತ್ತು, ಹಾಗೆ ಮಾಡಬೇಕಿತ್ತು’ ಎಂಬ ತೀರ್ಪುಗಳನ್ನು ವಿವಿಧ ಬಣ್ಣ, ಶ್ರೇಣಿಯ ಜನರು ನೀಡುವುದು ರೇಜಿಗೆ ಹುಟ್ಟಿಸುತ್ತದೆ. ಮಲದಲ್ಲೇ ಮುಳುಗೇಳುವ ತುತ್ತೂರಿ ಮಾಧ್ಯಮಗಳು ಮತ್ತು ಗುಲಾಮೀ ಮನಸ್ಥಿತಿಯ ಭಕ್ತರಿಂದ ಅಂತಹ ನಿರೀಕ್ಷೆಯಿಲ್ಲವೇ ಇಲ್ಲ. ಆದರೆ ಚಳವಳಿಯ ಕುರಿತಂತೆ ಕಾಳಜಿ ಮತ್ತು ಸದಾಶಯವುಳ್ಳವರೂ ಈ ಪರಿ ಜಡ್ಜ್‌ಮೆಂಟಲ್ ಆಗಿರುವುದು ಒಳ್ಳೆಯ ಲಕ್ಷಣವಲ್ಲ.

ಎಲ್ಲಕ್ಕಿಂತ ಮುಖ್ಯವಾಗಿ ಒಂದು ವೇಳೆ ಚಳವಳಿನಿರತ ರೈತರೇ ಅರಾಜಕವಾಗಿ ಬೀದಿಗಿಳಿದಿದ್ದರೂ, ಈ ಸಂದರ್ಭದ ಹಿನ್ನೆಲೆಯನ್ನರಿತುಕೊಂಡು ಅದಕ್ಕೆ ಕಾರಣವಾದ ಸರ್ಕಾರವನ್ನು ಗುರಿ ಮಾಡಬೇಕಾದ್ದು ಸರಿಯಾದದ್ದು. ಸಿಎಎ ವಿರೋಧಿ ಹೋರಾಟದಲ್ಲಿ ಹೇಗೋ ಹಾಗೆ, ಇಲ್ಲೂ ಸಹಾ ಅಪಾರವಾದ ತಾಳ್ಮೆ, ಸಹನೆ ಹಾಗೂ ಪ್ರಬುದ್ಧತೆಯನ್ನು ರೈತ ಚಳವಳಿಯು ಪ್ರದರ್ಶಿಸಿದೆ. ಮಿಲಿಟೆಂಟ್ ಚಳವಳಿಯ ಹಿನ್ನೆಲೆಯುಳ್ಳ ಪಂಜಾಬಿನ ಜನರು ಈ ವಿಚಾರದಲ್ಲಿ ತೋರಿರುವ ಸಂಯಮವೇ ಅನನ್ಯವಾದದ್ದು. ಅಂತೆಯೇ ಸರ್ಕಾರದ ಮನುಷ್ಯ ವಿರೋಧಿತನವೂ ಎದ್ದು ತೋರುವಂಥಾದ್ದೇ ಆಗಿತ್ತು.

ಒಂದೇ ಮಾತಲ್ಲಿ ಹೇಳುವುದಾದರೆ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದರ ಮುಖಾಂತರವೇ ಹಿಂಸೆ ಮತ್ತು ಅರಾಜಕತೆಯನ್ನು ಹುಟ್ಟಿಹಾಕಿತ್ತು. ರೈತರು ಅದನ್ನು ತಾಳ್ಮೆ ಮತ್ತು ವಿವೇಕದಿಂದ ಎದುರಿಸಿದರು. ಹೆಜ್ಜೆ ಹೆಜ್ಜೆಗೂ ಸರ್ಕಾರವು ಹಿಂಸೆಯನ್ನು ಹೆಚ್ಚಿಸುತ್ತಾ ಹೋಗಿತ್ತು. ರೈತರು ತಮ್ಮ ವಿಶಿಷ್ಟ ಪ್ರಬುದ್ಧತೆಯಿಂದ ಅದನ್ನು ಎದುರುಗೊಂಡರು. ಉಳಿದಂತೆ ಆಗಬಹುದಾದ ಸಣ್ಣ ಪುಟ್ಟ ಅವಘಡಗಳೆಲ್ಲಾ ಕೇವಲ ಕೊಲ್ಯಾಟರೆಲ್ ಡ್ಯಾಮೇಜ್. ಅದನ್ನೇ ಧ್ಯಾನಿಸದೇ, ಒಟ್ಟಾರೆ ಒಳಿತಿನ ಕಡೆಗೆ ನಡೆಯುವುದಾದರೆ, ನಮ್ಮ ಕೈಲಾದಷ್ಟು ಜೊತೆಗೂಡುವ ಕೆಲಸ ಮಾಡುವುದೇ ಇಂದು ಎಲ್ಲಾ ಪ್ರಜಾತಂತ್ರವಾದಿಗಳ ಕರ್ತವ್ಯವಾಗಿದೆ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದ ಗುಂಪನ್ನು ಕೆಂಪುಕೋಟೆಯವರೆಗೆ ಹೋಗಲು ಪೊಲೀಸರು ಬಿಟ್ಟಿದ್ದೇಕೆ? – ರೈತ ಮುಖಂಡರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...