Homeಮುಖಪುಟರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ರೈತರನ್ನು, ಖಾಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕ ಸಂಘಟನೆಗಳಿಂದ ಪ್ರಭಾವಿತವಾಗಿದ್ದಾರೆ ಎಂದು ಮುಂತಾಗಿ ಬಿಂಬಿಸುತ್ತಿವೆ. ಇದುವರೆಗೂ ಕೇವಲ ಹೀಗೆಯೇ ಬಿಂಬಿಸುತ್ತಿದ್ದ ಮುಖ್ಯವಾಹಿನಿಯ ಮಾಧ್ಯಮಗಳು ಈಗ ಮೌನ ಮುರಿದು, ತಮ್ಮ ಬಹುಮುಖ್ಯ ಚರ್ಚೆಗಳನ್ನು ರೈತರ ಪ್ರತಿಭಟನೆಯ ಮೇಲೆ ಕೇಂದ್ರೀಕರಿಸಿವೆ. ಈ ಮೂಲಕ “ರೈತ ಪ್ರತಿಭಟನೆಯು ರಾಜಕೀಯ ಪ್ರೇರಿತ ಮತ್ತು ಭಯೋತ್ಪಾದಕರ ಕೈವಾಡವಿದೆ” ಎನ್ನುತ್ತಾ ಕೂಗಾಡುತ್ತಿದ್ದಾರೆ. ಇದು ಆಶ್ಚರ್ಯಕರವಲ್ಲದಿದ್ದರೂ ಆಸಕ್ತಿದಾಯಕವಾಗಿದೆ.

ಎಲ್ಲರಿಗೂ ತಿಳಿದಿರುವಂತೆ, ಕೆಲವು ಸಿಖ್ಖರು ಸಿಖ್ ಧರ್ಮದ ಧ್ವಜ ‘ನಿಶಾನ್ ಸಾಹೀಬ್’ಅನ್ನು ಕೆಂಪುಕೋಟೆಯಲ್ಲಿ ಹಾರಿಸಿದ್ದಾರೆ. ಆದರೆ ಇದು ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಸಲುವಾಗಿ ಬಿಜೆಪಿ ಕೈಗೊಂಡ ತಂತ್ರ ಎಂಬುದು ಶೀಘ್ರವೇ ತಿಳಿದುಬಂದಿದೆ. ಈ ಘಟನೆಯಲ್ಲಿ ಚರ್ಚೆಗೊಳಪಡುತ್ತಿರುವ ಪ್ರಮುಖ ವ್ಯಕ್ತಿ ದೀಪ್ ಸಿಧು.

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ಇಷ್ಟುದೊಡ್ಡ ಪ್ರತಿಭಟನೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿರಲಿಲ್ಲ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರ ಮತ್ತು ರೈತರ ವಿರೋಧಿಯಾಗಿದೆ ಎಂಬುದು ಪ್ರತಿಭಟನಾ ನಿರತ ರೈತರ ವಾದವಾಗಿದೆ. ಹಾಗಾಗಿಯೇ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಇದರ ಭಾಗವಾಗಿ 72 ನೇ ಗಣರಾಜ್ಯೋತ್ಸವವನ್ನು ರೈತ ಗಣರಾಜ್ಯೋತ್ಸವವೆಂದು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೆಹಲಿ ಪೊಲೀಸರು ನೀಡಿದ ಉದ್ದೇಶಿತ ಮಾರ್ಗದಲ್ಲಿಯೇ ಮೆರವಣಿಗೆ ನಡೆಸುವುದಾಗಿ ರೈತರು ಒಪ್ಪಿಕೊಂಡು ರ್ಯಾಲಿಯನ್ನೂ ನಡೆಸಿದರು. ಆದರೆ ರೈತರ ಒಂದು ಗುಂಪು ಮಾತ್ರ ನಿಗದಿತ ಸಮಯಕ್ಕೂ ಮೊದಲೇ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್ ಪೆರೇಡ್ ನಡೆಸಿತು. ಇದು ಕೊನೆಗೆ ಹಿಂಸಾತ್ಮಕ ರೂಪ ಪಡೆದು ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸುವಲ್ಲಿಗೆ ಕೊನೆಯಾಯಿತು. ಆದರೆ ವಿಪರ್ಯಾಸವೆಂದರೆ, ಈ ಧ್ವಜವನ್ನು (ಜಗತ್ತಿನಾಧ್ಯಂತ ಇರುವ ಪ್ರತಿಯೊಂದು ಗುರುದ್ವಾರಗಳ ಮೇಲೆ ಹಾರಿಸಲಾಗಿರುವ) ಬಿಜೆಪಿ ಪ್ರಣೀತ ಮಾಧ್ಯಮಗಳು ಖಾಲಿಸ್ತಾನ್ ಚಳುವಳಿಯ ಧ್ವಜ ಎಂದು ಬಿಂಬಿಸಿದವು.

ಟೈಮ್ಸ್‌ ನೌ ಸುದ್ದಿ ಸಂಸ್ಥೆಯು, “Farmers’ stir: Intel reports suggest ISI gave Rs 5 cr to Babbar…” (ರೈತರ ಪ್ರತಿಭಟನೆಗೆ ಐಎಸ್‌ಐ ಉಗ್ರ ಸಂಘಟನೆ 5 ಕೋಟಿ ನೀಡಿದೆ)” ಎಂದು ಸುಳ್ಳು ವರದಿಯೊಂದನ್ನು ಮಾಡಿತ್ತು. ಆದರೆ ಈ ಸುದ್ದಿಯನ್ನು ಈಗಾಗಲೇ ಡಿಲೀಟ್ ಮಾಡಿದೆ. ಇದರ ಲಿಂಕ್ ಇಲ್ಲಿದೆ. ಇದರ ಸ್ಕ್ರೀನ್‌ಶಾಟ್ ಅನ್ನು ಈ ಕೆಳಗೆ ನೀಡಲಾಗಿದೆ.

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಮೂರೂ ಬಿಟ್ಟ ಮಾಧ್ಯಮಗಳು ಮಾಡುತ್ತಿರುವ ನಾಚಿಕೆಗೇಡಿನ ಕೆಲಸಕ್ಕೆ ಇದೇ ಪುರಾವೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಮತ್ತೊಂದೆಡೆ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಮಾಧ್ಯಮಗಳು ಗುರಿಮಾಡಿಕೊಂಡಿದೆ ಎಂದು ದೆಹಲಿಯಲ್ಲಿರುವ ನಾನು ಗೌರಿ (ಕನ್ನಡ) ಮತ್ತು ಗೌರಿ ಲಂಕೇಶ್ ನ್ಯೂಸ್ (ಇಂಗ್ಲಿಷ್) ತಂಡ ವರದಿ ಮಾಡಿದೆ.

ಯಾವುದೇ ಘಟನೆಯನ್ನು ಕೋಮುವಾದೀಕರಣಗೊಳಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಭಾಗವಾಗಿರುವ ಬಿಜೆಪಿಯ ವಿಶಿಷ್ಟ ಲಕ್ಷಣವಾಗಿದೆ. ಒಬ್ಬರ ಗಮನವನ್ನು ವಾಸ್ತವ ಸಮಸ್ಯೆಯಿಂದ ಬೇರೆಡೆಗೆ ವಿಷಯಾಂತರ ಮಾಡಲು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುತ್ತದೆ. ಬಿಜೆಪಿಯ ಈ ಪ್ರವೃತ್ತಿಯನ್ನು ಕರ್ನಾಟಕದದ ಪರ್ಯಾಯ ಕಾನೂನು ವೇದಿಕೆ ತನ್ನ ವರದಿಯಲ್ಲಿ ದಾಖಲಿಸಿದೆ.

ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ ಇದುವರೆಗೂ ನಡೆದಿರುವ ಹೆಚ್ಚಿನ ಕೋಮು ಗಲಭೆಗಳನ್ನು, ‘ಮಸೀದಿಯ ಆವರಣದಲ್ಲಿ ಸತ್ತ ಹಂದಿಯನ್ನು ಎಸೆಯುವುದು, ದೇವಸ್ಥಾನಗಳ ಮೇಲೆ ಪಾಕಿಸ್ತಾನದ ಹಸಿರುವ ಧ್ವಜವನ್ನು ಹಾರಿಸುವುದು’ ಮುಂತಾದ ಕುತಂತ್ರಗಳನ್ನು ಮಾಡಿ ಪ್ರಚೋದಿಸಿದೆ. ಹಾಗಾಗಿ ದೀಪ್ ಸಿಧು ಮತ್ತು ಅವನ ಗುಂಪು ಮಾಡಿರುವ ಕೃತ್ಯವು ಈ ಸಂಘಪರಿವಾರದ ಅನೈತಿಕ ತಂತ್ರದ ಭಾಗವಾಗಿದೆ. ದೆಹಲಿ ಪೊಲೀಸರು ಬಿಜೆಪಿ ಮತ್ತು ಅದರ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳ ಜೊತೆ ಶಾಮೀಲಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ.

ಕೃಪೆ: ಗೌರಿ ಲಂಕೇಶ್ ನ್ಯೂಸ್


ಇದನ್ನೂ ಓದಿ: 10 ರೈತ ನಾಯಕರ ಮೇಲೆ FIR: ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈಬಿಟ್ಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...