Homeಮುಖಪುಟರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ

- Advertisement -
- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ರೈತರನ್ನು, ಖಾಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು, ಭಯೋತ್ಪಾದಕ ಸಂಘಟನೆಗಳಿಂದ ಪ್ರಭಾವಿತವಾಗಿದ್ದಾರೆ ಎಂದು ಮುಂತಾಗಿ ಬಿಂಬಿಸುತ್ತಿವೆ. ಇದುವರೆಗೂ ಕೇವಲ ಹೀಗೆಯೇ ಬಿಂಬಿಸುತ್ತಿದ್ದ ಮುಖ್ಯವಾಹಿನಿಯ ಮಾಧ್ಯಮಗಳು ಈಗ ಮೌನ ಮುರಿದು, ತಮ್ಮ ಬಹುಮುಖ್ಯ ಚರ್ಚೆಗಳನ್ನು ರೈತರ ಪ್ರತಿಭಟನೆಯ ಮೇಲೆ ಕೇಂದ್ರೀಕರಿಸಿವೆ. ಈ ಮೂಲಕ “ರೈತ ಪ್ರತಿಭಟನೆಯು ರಾಜಕೀಯ ಪ್ರೇರಿತ ಮತ್ತು ಭಯೋತ್ಪಾದಕರ ಕೈವಾಡವಿದೆ” ಎನ್ನುತ್ತಾ ಕೂಗಾಡುತ್ತಿದ್ದಾರೆ. ಇದು ಆಶ್ಚರ್ಯಕರವಲ್ಲದಿದ್ದರೂ ಆಸಕ್ತಿದಾಯಕವಾಗಿದೆ.

ಎಲ್ಲರಿಗೂ ತಿಳಿದಿರುವಂತೆ, ಕೆಲವು ಸಿಖ್ಖರು ಸಿಖ್ ಧರ್ಮದ ಧ್ವಜ ‘ನಿಶಾನ್ ಸಾಹೀಬ್’ಅನ್ನು ಕೆಂಪುಕೋಟೆಯಲ್ಲಿ ಹಾರಿಸಿದ್ದಾರೆ. ಆದರೆ ಇದು ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಸಲುವಾಗಿ ಬಿಜೆಪಿ ಕೈಗೊಂಡ ತಂತ್ರ ಎಂಬುದು ಶೀಘ್ರವೇ ತಿಳಿದುಬಂದಿದೆ. ಈ ಘಟನೆಯಲ್ಲಿ ಚರ್ಚೆಗೊಳಪಡುತ್ತಿರುವ ಪ್ರಮುಖ ವ್ಯಕ್ತಿ ದೀಪ್ ಸಿಧು.

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ಇಷ್ಟುದೊಡ್ಡ ಪ್ರತಿಭಟನೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿರಲಿಲ್ಲ. ಈ ಕಾನೂನುಗಳು ಕಾರ್ಪೊರೇಟ್‌ಗಳ ಪರ ಮತ್ತು ರೈತರ ವಿರೋಧಿಯಾಗಿದೆ ಎಂಬುದು ಪ್ರತಿಭಟನಾ ನಿರತ ರೈತರ ವಾದವಾಗಿದೆ. ಹಾಗಾಗಿಯೇ ಕಳೆದ 2 ತಿಂಗಳಿನಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ಇದರ ಭಾಗವಾಗಿ 72 ನೇ ಗಣರಾಜ್ಯೋತ್ಸವವನ್ನು ರೈತ ಗಣರಾಜ್ಯೋತ್ಸವವೆಂದು ಆಚರಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೆಹಲಿ ಪೊಲೀಸರು ನೀಡಿದ ಉದ್ದೇಶಿತ ಮಾರ್ಗದಲ್ಲಿಯೇ ಮೆರವಣಿಗೆ ನಡೆಸುವುದಾಗಿ ರೈತರು ಒಪ್ಪಿಕೊಂಡು ರ್ಯಾಲಿಯನ್ನೂ ನಡೆಸಿದರು. ಆದರೆ ರೈತರ ಒಂದು ಗುಂಪು ಮಾತ್ರ ನಿಗದಿತ ಸಮಯಕ್ಕೂ ಮೊದಲೇ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್ ಪೆರೇಡ್ ನಡೆಸಿತು. ಇದು ಕೊನೆಗೆ ಹಿಂಸಾತ್ಮಕ ರೂಪ ಪಡೆದು ಕೆಂಪುಕೋಟೆಯಲ್ಲಿ ಸಿಖ್ ಧರ್ಮದ ಧ್ವಜ ಹಾರಿಸುವಲ್ಲಿಗೆ ಕೊನೆಯಾಯಿತು. ಆದರೆ ವಿಪರ್ಯಾಸವೆಂದರೆ, ಈ ಧ್ವಜವನ್ನು (ಜಗತ್ತಿನಾಧ್ಯಂತ ಇರುವ ಪ್ರತಿಯೊಂದು ಗುರುದ್ವಾರಗಳ ಮೇಲೆ ಹಾರಿಸಲಾಗಿರುವ) ಬಿಜೆಪಿ ಪ್ರಣೀತ ಮಾಧ್ಯಮಗಳು ಖಾಲಿಸ್ತಾನ್ ಚಳುವಳಿಯ ಧ್ವಜ ಎಂದು ಬಿಂಬಿಸಿದವು.

ಟೈಮ್ಸ್‌ ನೌ ಸುದ್ದಿ ಸಂಸ್ಥೆಯು, “Farmers’ stir: Intel reports suggest ISI gave Rs 5 cr to Babbar…” (ರೈತರ ಪ್ರತಿಭಟನೆಗೆ ಐಎಸ್‌ಐ ಉಗ್ರ ಸಂಘಟನೆ 5 ಕೋಟಿ ನೀಡಿದೆ)” ಎಂದು ಸುಳ್ಳು ವರದಿಯೊಂದನ್ನು ಮಾಡಿತ್ತು. ಆದರೆ ಈ ಸುದ್ದಿಯನ್ನು ಈಗಾಗಲೇ ಡಿಲೀಟ್ ಮಾಡಿದೆ. ಇದರ ಲಿಂಕ್ ಇಲ್ಲಿದೆ. ಇದರ ಸ್ಕ್ರೀನ್‌ಶಾಟ್ ಅನ್ನು ಈ ಕೆಳಗೆ ನೀಡಲಾಗಿದೆ.

ರೈತ ಹೋರಾಟವನ್ನು ದಿಕ್ಕುತಪ್ಪಿಸಲು ಮೂರೂ ಬಿಟ್ಟ ಮಾಧ್ಯಮಗಳು ಮಾಡುತ್ತಿರುವ ನಾಚಿಕೆಗೇಡಿನ ಕೆಲಸಕ್ಕೆ ಇದೇ ಪುರಾವೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಕೆಂಪುಕೋಟೆಯ ಸುತ್ತಲೂ ನಿಯೋಜಿಸಲಾಗಿರುವ ಭಾರೀ ಪೊಲೀಸ್‌ ಪಡೆಯು, ಸಿಧು ಮತ್ತು ಅವನ 50-60 ಜನರ ಗುಂಪನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಮತ್ತೊಂದೆಡೆ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಮಾಧ್ಯಮಗಳು ಗುರಿಮಾಡಿಕೊಂಡಿದೆ ಎಂದು ದೆಹಲಿಯಲ್ಲಿರುವ ನಾನು ಗೌರಿ (ಕನ್ನಡ) ಮತ್ತು ಗೌರಿ ಲಂಕೇಶ್ ನ್ಯೂಸ್ (ಇಂಗ್ಲಿಷ್) ತಂಡ ವರದಿ ಮಾಡಿದೆ.

ಯಾವುದೇ ಘಟನೆಯನ್ನು ಕೋಮುವಾದೀಕರಣಗೊಳಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ನ ಭಾಗವಾಗಿರುವ ಬಿಜೆಪಿಯ ವಿಶಿಷ್ಟ ಲಕ್ಷಣವಾಗಿದೆ. ಒಬ್ಬರ ಗಮನವನ್ನು ವಾಸ್ತವ ಸಮಸ್ಯೆಯಿಂದ ಬೇರೆಡೆಗೆ ವಿಷಯಾಂತರ ಮಾಡಲು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುತ್ತದೆ. ಬಿಜೆಪಿಯ ಈ ಪ್ರವೃತ್ತಿಯನ್ನು ಕರ್ನಾಟಕದದ ಪರ್ಯಾಯ ಕಾನೂನು ವೇದಿಕೆ ತನ್ನ ವರದಿಯಲ್ಲಿ ದಾಖಲಿಸಿದೆ.

ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ ಇದುವರೆಗೂ ನಡೆದಿರುವ ಹೆಚ್ಚಿನ ಕೋಮು ಗಲಭೆಗಳನ್ನು, ‘ಮಸೀದಿಯ ಆವರಣದಲ್ಲಿ ಸತ್ತ ಹಂದಿಯನ್ನು ಎಸೆಯುವುದು, ದೇವಸ್ಥಾನಗಳ ಮೇಲೆ ಪಾಕಿಸ್ತಾನದ ಹಸಿರುವ ಧ್ವಜವನ್ನು ಹಾರಿಸುವುದು’ ಮುಂತಾದ ಕುತಂತ್ರಗಳನ್ನು ಮಾಡಿ ಪ್ರಚೋದಿಸಿದೆ. ಹಾಗಾಗಿ ದೀಪ್ ಸಿಧು ಮತ್ತು ಅವನ ಗುಂಪು ಮಾಡಿರುವ ಕೃತ್ಯವು ಈ ಸಂಘಪರಿವಾರದ ಅನೈತಿಕ ತಂತ್ರದ ಭಾಗವಾಗಿದೆ. ದೆಹಲಿ ಪೊಲೀಸರು ಬಿಜೆಪಿ ಮತ್ತು ಅದರ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳ ಜೊತೆ ಶಾಮೀಲಾಗಿದೆ ಎಂಬುದು ಇದರಿಂದ ತಿಳಿದುಬರುತ್ತದೆ.

ಕೃಪೆ: ಗೌರಿ ಲಂಕೇಶ್ ನ್ಯೂಸ್


ಇದನ್ನೂ ಓದಿ: 10 ರೈತ ನಾಯಕರ ಮೇಲೆ FIR: ಧ್ವಜ ಹಾರಿಸಿದ ದೀಪ್ ಸಿಧು ಹೆಸರು ಕೈಬಿಟ್ಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...