Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...