Homeಮುಖಪುಟಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ - ಯಾರು ಈ ದೀಪ್ ಸಿಧು?

ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ದೀಪ್ ಸಿಧು ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

- Advertisement -
- Advertisement -

ರೈತರ ಒಂದು ಗುಂಪನ್ನು ದಾರಿ ತಪ್ಪಿಸಿದ ಮತ್ತು ಹಿಂಸೆಗೆ ಪ್ರಚೋದಿಸಿದ ಅರೋಪ ಎದುರಿಸುತ್ತಿರುವ ದೀಪ್ ಸಿಧು ಹಿನ್ನೆಲೆಯೇನು?

2019 ರಲ್ಲಿ ಬಿಜೆಪಿ ಸಂಸದ ಮತ್ತು ನಟ ಸನ್ನಿ ಡಿಯೋಲ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಪಂಜಾಬಿ ನಟ ದೀಪ್ ಸಿಧು ಪ್ರವರ್ಧಮಾನಕ್ಕೆ ಬಂದ. ಕಿಸಾನ್ ಸಂಯುಕ್ತ್ ಮೋರ್ಚಾ ಸೇರಿದಂತೆ ಕೆಲವು ಮಾಧ್ಯಮಗಳು, ಕೆಂಪುಕೋಟೆ ಹಿಂಸಾಚಾರಕ್ಕೆ ದೀಪ್ ಸಿದು ಮೂಲ ಕಾರಣ ಎಂದಿವೆ.

ಪಂಜಾಬಿ ಮುಕ್ತ್ಸಾರ್ ಜಿಲ್ಲೆಯ ಈ ನಟ 2018 ರ ’ಜೋರ್ ದಸ್ ನಂಬ್ರಿಯಾ’ ಸಿನಿಮಾದ ಮೂಲಕ ಸ್ಟಾರ್ ಎನಿಸಿಕೊಂಡ. ಈತ ಸನ್ನಿ ಡಿಯೋಲ್ ಆಪ್ತನೇ ಆಗಿದ್ದ. ಆದರೆ ಇತ್ತೀಚೆಗೆ ಡಿಸೆಂಬರ್‌ನಿಂದ ಸನ್ನಿ ಡಿಯೋಲ್, ತಾವು ಮತ್ತು ತಮ್ಮ ಕುಟುಂಬ ಈತನ ಜೊತೆ ಸದ್ಯ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಹೇಳುತ್ತ ಬಂದಿದ್ದಾರೆ. ನಿನ್ನೆಯ ಘಟನೆ ನಂತರವೂ ಡಿಯೋಲ್ ಆತನ ಸಂಪರ್ಕ ಈಗ ಇಲ್ಲ, ಆತನನ್ನು ದೂರವಿಟ್ಟಿದ್ದೇವೆ ಎಂಬುದಾಗಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

ಪಂಜಾಬಿನಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆಗಳು ಆರಂಭಗೊಂಡಾಗ ಇತರ ಕೆಲವು ನಟರು ಮತ್ತು ಗಾಯಕರೊಂದಿಗೆ ಸೇರಿ ಕೃಷಿ ಕಾಯ್ದೆ ವಿರುದ್ಧ ಯುವಕರನ್ನು ಸೇರಿಸಲು ದೀಪ್ ಸಿಧು ನೆರವಾಗಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 25 ರಂದು ಕೃಷಿ ಕಾಯ್ದೆ ವಿರೋಧಿಸಿ ಬಂದ್ ನಡೆಸಿದಾಗ ಮೊದಲ ಸಲ ದೀಪ್ ಸಿಧು ಚಳವಳಿಯಲ್ಲಿ ಕಾಣಿಸಿಕೊಂಡಿದ್ದ. ಈತ, ಕೆಲವು ಕಲಾವಿದರು ಹರಿಯಾಣ-ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅದು ನಿರೀಕ್ಷೆಗಿಂತ ಹೆಚ್ಚು ಯಶಸ್ವಿಯಾದ ನಂತರ, ದೀಪ್ ಸಿಧು ಅಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.

ರಿಂಗ್‌ರೋಡಿನಲ್ಲೇ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದ ಕಿಸಾನ್ ಮಜ್ದೂರ್ ಸಮಿತಿಯನ್ನು ಬೆಂಬಲಿಸಿದ ದೀಪ್ ಸಿಧು, ರೈತರ ಒಂದು ಗುಂಪನ್ನು ಕೆಂಪುಕೋಟೆಯತ್ತ ತಿರುಗಿಸಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಧ್ವಜ ಹಾರಿಸುವ ಸಂದರ್ಭದಲ್ಲಿ ಮತ್ತು ಹಿಂಸಾಚಾರ ನಡೆದಾಗ ಈತ ಅಲ್ಲಿಯೇ ಇದ್ದುದಕ್ಕೆ ಅನೇಕ ವಿಡಿಯೋ, ಫೋಟೊ ಲಭ್ಯ ಇವೆ. ಸ್ವತ: ಆತನೇ ಧ್ವಜ ಹಾರಿಸಿದ್ದನ್ನು ಒಪ್ಪಿಕೊಂಡು ಪೋಸ್ಟ್ ಹಾಕಿದ್ದಾನೆ. ಆದರೆ ಹಿಂಸಾಚಾರಕ್ಕೆ ಪ್ರಚೋದಿಸಿಲ್ಲ ಎನ್ನುತ್ತಿದ್ದಾನೆ.

ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ಮಂಗಳವಾರದ ಘಟನೆಯ ನಂತರ ಅಂದೇ ರಾತ್ರಿ ಈತ ಸಿಂಘು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹೋದಾಗ, ನೂರಾರು ರೈತರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.

ಜ. 25 ರಂದು ಈತ ಮತ್ತು ಈಗ ರಾಜಕಾರಣಿಯಾಗಿ ಬದಲಾಗಿರುವ ಕ್ರಿಮಿನಲ್ ಒಬ್ಬ, ಸಂಜೆ 6 ರಿಂದ 11 ಗಂಟೆಯವರೆಗೆ ಸಿಂಘು ಗಡಿಯ ಮುಖ್ಯ ವೇದಿಕೆ ಆಕ್ರಮಿಸಿಕೊಂಡು ರಿಂಗ್ ರೋಡಿನಲ್ಲಿಯೆ ರ್‍ಯಾಲಿ ಮಾಡೋಣ ಎಂದು ರೈತರನ್ನು ಪ್ರಚೋದಿಸಿದ್ದರು ಎನ್ನಲಾಗಿದೆ.

ದೀಪ್ ತನ್ನ ಭಾಷಣಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಸಿಖ್ ಪ್ರತ್ಯೇಕವಾದಿ ಚಳವಳಿ ನಾಯಕನಾಗಿದ್ದ ಭಿಂದ್ರನ್‌ವಾಲೆಯನ್ನು ಉಲ್ಲೇಖಿಸುತ್ತಿದ್ದನಂತೆ. ರಾಜ್ಯಗಳಿಗೆ ಹೆಚ್ಚಿನ ಹಕ್ಕು ಬೇಕು ಎನ್ನುವುದರ ಸುತ್ತ ಆಕರ್ಷಕವಾಗಿ ಮಾತಾಡುತ್ತಾನೆ. ಜೊತೆಗೆ ಪ್ರಧಾನಿಯೊಂದಿಗೆ ಫೋಟೊ ತೆಗೆಸಿಕೊಳ್ಳುವಷ್ಟರ ಮಟ್ಟಿಗೆ ಬಿಜೆಪಿ ನಾಯಕತ್ವಕ್ಕೆ ಹತ್ತಿರವಾಗಿದ್ದ.


ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ ಎಂಬುದು ಸಾಬೀತಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...