ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್ಎಲ್ಡಿ)ದ ಶಾಸಕ ಅಭಯ್ ಸಿಂಗ್ ಚೌಟಾಲ ರಾಜೀನಾಮೆ ನೀಡಿದ್ದು, ರೈತರನ್ನು ಬೆಂಬಲಿಸಿ ರಾಜೀನಾಮೆ ನೀಡುತ್ತಿರುವವರ ಸಾಲಿಗೆ ಇವರು ಹೊಸ ಸೇರ್ಪಡೆ.
ಈ ಕುರಿತು ಸ್ವತಃ ಶಾಸಕರೆ ಟ್ವೀಟ್ ಮಾಡಿದ್ದು, “ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ. ಪ್ರತಿಪಕ್ಷದಲ್ಲಿ ಕುಳಿತಿರುವ ಇತರ ಎಲ್ಲ ನಾಯಕರು ಮತ್ತು ರೈತರ ಮಕ್ಕಳು ಎನಿಸಿಕೊಂಡವರು ರೈತನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ…
मुझे कुर्सी नहीं मेरे देश का किसान खुशहाल चाहिए! सरकार द्वारा लागू इन काले कानूनों के खिलाफ मेने अपना इस्तीफा दे दिया है।
मैं विपक्ष में बैठे अन्य सभी नेताओं ओर किसान पुत्रों से निवेदन करता हूँ कि वो इस संघर्ष की लड़ाई में किसान के साथ खड़े हों ||#FarmerProtests #किसान_आंदोलन pic.twitter.com/cBKUC4LKp7— Abhay Singh Chautala (@AbhaySChautala) January 27, 2021
ಇದನ್ನೂ ಓದಿ: ರೈತ ಹೋರಾಟವನ್ನು ದಿಕ್ಕುತಪ್ಪಿಸಲು ತನ್ನ ಕುತಂತ್ರ ಬಳಸಿದ ಬಿಜೆಪಿ!?
ಚೌಟಾಲ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ ಎಂದು ಹರಿಯಾಣ ವಿಧಾನಸಭೆ ಸ್ಪೀಕರ್ ಜ್ಞಾನ್ಚಂದ್ ಗುಪ್ತಾ ತಿಳಿಸಿದ್ದಾರೆ.
ರೈತರ ಬೇಡಿಕೆಗಳು ಈಡೇರದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಚೌಟಾಲ ಹೇಳಿದ್ದಾರೆ.
ಇವರು ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರ ಪುತ್ರರಾಗಿದ್ದು, 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಐಎನ್ಎಲ್ಡಿ ಪಕ್ಷದಿಂದ ಆಯ್ಕೆಯಾದ ಏಕೈಕ ಶಾಸಕರಾಗಿದ್ದಾರೆ.
ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್ಪ್ರೆಸ್’ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ