Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...