Homeಮುಖಪುಟಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಒತ್ತಾಯಿಸಿದ್ದು, ಈ ಗಡಿ ವಿವಾದವನ್ನು ಗೆಲ್ಲುವವರೆಗೆ ವಿಶ್ರಮಿಸುವುದಿಲ್ಲ ಎಂದೂ ಘೋಷಿಸಿದ್ದಾರೆ.

ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತ ದೀಪಕ್ ಪವಾರ್ ಸಂಪಾದಕತ್ವದ ‘ಮಹಾರಾಷ್ಟ್ರ-ಕರ್ನಾಟಕ ಸೀಮಾವಾದ: ಸಂಘರ್ಷ ಆನಿ ಸಂಕಲ್ಪ’ ಎಂಬ 530 ಪುಟಗಳ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಠಾಕ್ರೆ, “ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ಸೇರಿಸಲು ಹೋರಾಟದ ಅಗತ್ಯವಿದೆ. ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ನಿಂದ ಅಂತಿಮ ತೀರ್ಪು ಬರುವವರೆಗೂ ಮರಾಠಿ ಭಾಷಿಗರು ಹೆಚ್ಚಿರುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಸುಪ್ರೀಂಕೋರ್ಟ್‌ನಲ್ಲಿ ಗಡಿ ವಿವಾದದ ಇತ್ಯರ್ಥ ಬಾಕಿ ಇರುವಂತೆಯೇ ಕರ್ನಾಟಕವು ಬೆಳಗಾಂವ್‌ನ ಹೆಸರು ಬದಲಿಸಿ ಅದನ್ನು ದ್ವಿತೀಯ ರಾಜಧಾನಿ ಎಂದು ಘೋಷಿಸಿದೆ. ಅಲ್ಲಿ ವಿಧಾನಸಭೆ ಕಟ್ಟಡ ನಿರ್ಮಿಸಿ ಒಂದು ಅಧಿವೇಶನವನ್ನೂ ನಡೆಸಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸ್ವಾರ್ಥ ರಾಜಕೀಯ ಹಿತಾಸಕ್ತಿಯ ಕಾರಣಕ್ಕಾಗಿ ಮರಾಠಿ ಹೋರಾಟವನ್ನು ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

“ಈ ಹಿಂದೆ ಎಂಇಎಸ್‌ನ ಕನಿಷ್ಠ 6 ಶಾಸಕರಿದ್ದರು. ಬೆಳಗಾವಿಯ ಮೇಯರ್ ಕೂಡಾ ಮರಾಠಿ ಭಾಷಿಗರೇ ಆಗಿದ್ದರು. ಎಂಇಎಸ್ ಅನ್ನು ದುರ್ಬಲಗೊಳಿಸಲು ಶಿವಸೇನೆ ಬಯಸದ ಕಾರಣ ನಾವು ಬೆಳಗಾವಿಯಲ್ಲಿ ರಾಜಕೀಯ ಕಣಕ್ಕೆ ಇಳಿದಿಲ್ಲ. ಈಗ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಅವಧಿಯಲ್ಲಿ ಗಡಿ ವಿವಾದ ಬಗೆಹರಿಯದಿದ್ದರೆ ವಿವಾದ ಮುಂದೆಂದೂ ಇತ್ಯರ್ಥವಾಗದು. ಕರ್ನಾಟಕದಲ್ಲಿ ಯಾವುದೇ ಪಕ್ಷದ ಸರಕಾರವಿರಲಿ, ಅವರ ಉದ್ದೇಶ ಒಂದೇ, ಮರಾಠಿ ಭಾಷಿಕರ ಮತ್ತು ಭಾಷೆಯ ವಿರುದ್ಧ ದೌರ್ಜನ್ಯ ನಡೆಸುವುದು. ಆದ್ದರಿಂದ ಮರಾಠಿ ಜನತೆ ಕೂಡಾ ಒಗ್ಗೂಡಬೇಕು” ಎಂದು ಕರೆ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ, “ಜನರನ್ನು ಕೆರಳಿಸುವುದು ಮತ್ತು ದಾರಿ ತಪ್ಪಿಸುವುದು ಶಿವಸೇನೆಯ ಕಾರ್ಯಸೂಚಿಯಾಗಿದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...