Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ...

ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

"ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭ-ಆದಾಯದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ"

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗವು ಭಾರತದ ಅತಿ ಶ್ರೀಮಂತರು ಮತ್ತು ಕೋಟ್ಯಾಂತರ ಕಾರ್ಮಿಕರ ನಡುವಿನ ಆದಾಯದ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಬಹುಸಂಖ್ಯಾತ ಜನರು ಧೀರ್ಘಕಾಲದ ನಿರುದ್ಯೋಗಿಗಳಾಗಿದ್ದಾರೆ. ಅಲ್ಲದೆ, ಲಾಭ/ಆದಾಯವಿಲ್ಲದ ಜನರು ಮೂಲಭೂತ ಸೌಕರ್ಯಗಳಾದ ಆರೋಗ್ಯವನ್ನು ಪಡೆಯಲೂ ಸಹ ಎಣಗಾಡುತ್ತಿದ್ದಾರೆ ಎಂದು ಆಕ್ಸ್‌ಫಾಂ (Oxfam) ವರದಿಯಲ್ಲಿ ತಿಳಿಸಿದೆ.

ಸೋಮವಾರ, ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ವರದಿ ಮಂಡಿಸಿರುವ ಆಕ್ಸ್‌ಫಾಂ, “ಲಾಕ್‌ಡೌನ್ ಸಮಯದಲ್ಲಿ ದೇಶದ ಬಿಲಿಯನೇರ್‌ಗಳ ಸಂಪತ್ತು ಅಂದಾಜು ಶೇ.35 ರಷ್ಟು ಹೆಚ್ಚಾಗಿದೆ. ಆದರೆ, ಶೇ. 84 ರಷ್ಟು ಕುಟುಂಬಗಳು ವಿವಿಧ ರೀತಿಯ ನಷ್ಟವನ್ನು ಅನುಭವಿಸುತ್ತಿವೆ. ಅಲ್ಲದೆ, 2020ರ ಏಪ್ರಿಲ್ ತಿಂಗಳಿನಲ್ಲಿ ಪ್ರತಿ ಗಂಟೆಗೆ 1.7 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ವರದಿಯಲ್ಲಿ ಹೇಳಿದೆ.

ಮಾರ್ಚ್ 2020 ರಿಂದ ಲಾಕ್‌ಡೌನ್ ಜಾರಿಗೊಳಿಸಿದ ನಂತರ, ಭಾರತದ ಅಗ್ರ 100 ಬಿಲಿಯನೇರ್‌ಗಳಿಗೆ ದೊರೆಕಿರುವ ಲಾಭದ ಪ್ರಮಾಣವು 138 ಮಿಲಿಯನ್ ಬಡ ಜನರಿಗೆ ತಲಾ 94,045 ರೂ ಚೆಕ್ ನೀಡುವಷ್ಟು ಹೆಚ್ಚಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

“ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಯಲ್ಲಿ ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ) ಗಳಿಸಿದ ಆದಾಯವನ್ನು ಒಬ್ಬ ಕೌಶಲ್ಯರಹಿತ ಕೆಲಸಗಾರನು ಗಳಿಸಲು 10,000 ವರ್ಷಗಳು ಬೇಕಾಗುತ್ತವೆ. ಅಲ್ಲದೆ, ಅಂಬಾನಿ ಒಂದು ಸೆಕೆಂಡ್‌ನಲ್ಲಿ ಸಂಪಾದಿಸಿದ್ದನ್ನು ಈ ಕೆಲಸಗಾರ ಸಂಪಾದಿಸಲು ಮೂರು ವರ್ಷಗಳು ಬೇಕಾಗುತ್ತವೆ ಎಂದು ವರದಿ ಹೇಳಿದೆ.

ಆಗಸ್ಟ್ ತಿಂಗಳಿನಲ್ಲಿ ಅಂಬಾನಿಯನ್ನು ವಿಶ್ವದ ನಾಲ್ಕನೇ ದೊಡ್ಡ ಶ್ರೀಮಂತ ವ್ಯಕ್ತಿ ಎಂದು ಘೋಷಿಸಲಾಗಿತ್ತು. ಇದೇ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡು, ಹಣ, ಆಹಾರ ಮತ್ತು ಆಶ್ರಯವಿಲ್ಲದೆ ಎಣಗಾಡಿದ್ದಾರೆ. ಸಾವಿರಾರು ಕಿಲೋಮೀಟರ್‌ಗಳ ಪ್ರಯಾಣವನ್ನು ಪುರುಷರು, ಮಹಿಳೆಯರು ಮತ್ತು ಮಕ್ಕಳು ನಡೆದುಕೊಂಡೇ ಕ್ರಮಿಸಿದ ದುರಂತ ದೃಶ್ಯಗಳು, ಸಾವಿರಾರು ಸಾವುಗಳು ದೇಶದ ಪ್ರಜ್ಞೆಯನ್ನು ಕಲಕಿದವು. ಆದರೆ, ಈ ಸಾವುಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಘೋಷಿಸಿತ್ತು!

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಒಂದು ಗಂಟೆಗೆ ₹ 90 ಕೋಟಿ ಗಳಿಸಿದರು. ಅದೇ ಸಮಯದಲ್ಲಿ ದೇಶದ ಸುಮಾರು 24% ಜನರು ತಿಂಗಳಿಗೆ 3,000 ರೂ.ಗಳಿಗಿಂತ ಕಡಿಮೆ ಆದಾಯವನ್ನು ಗಳಿಸಿದ್ದಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನ ಪರಿಣಾಮವು ಸ್ಪಷ್ಟವಾಗುತ್ತಿದ್ದಂತೆ, ಸರ್ಕಾರವು ಸುಮಾರು 20 ಲಕ್ಷ ಕೋಟಿ ಮೌಲ್ಯದ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿತು. ಪ್ರಧಾನಿ ನರೇಂದ್ರ ಮೋದಿ ಇದನ್ನು ಅವರ “ಆತ್ಮ-ನಿರ್ಭಾರ ಭಾರತ್ (ಸ್ವಾವಲಂಭಿ ಭಾರತ)” ದೂರದೃಷ್ಟಿಯ ಮೂಲಾಧಾರವೆಂದು ಶ್ಲಾಘಿಸಿದರು. ಆದರೆ, ಇದರ ಉಪಯೋಗವಾಗಿರುವುದು ಮಾತ್ರ ಕಾಣುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಅದೇ ವರದಿಯಲ್ಲಿರುವ ಜಾಗತಿಕ ಆವೃತ್ತಿಯು ಸಾಂಕ್ರಾಮಿಕ ರೋಗದ ಸಮಯದಲ್ಲಿ ವಿಶ್ವದಾದ್ಯಂತ ಆದಾಯದ ಅಸಮಾನತೆಗಳಲ್ಲಿನ ಅಂತರವನ್ನು ವಿವರಿಸಿದೆ ಎಂದು ದಿ ಹಿಂದು ವರದಿ ಮಾಡಿದೆ.

ಇಂತಹ ಅಸಮಾನತೆಗಳನ್ನು ಪರಿಹರಿಸಲು ಆಕ್ಸ್‌ಫ್ಯಾಮ್ ಭಾರತ ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದೆ. ಅದರಲ್ಲಿ ಮುಖ್ಯವಾಗಿ, ತಕ್ಷಣವೇ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕು ಮತ್ತು ಇದನ್ನು ತಕ್ಷವೇ ಜಾರಿಗೆ ತರಬೇಕು ಎಂದು ಸೂಚಿಸಿದೆ.

50 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸುವವರ ಮೇಲೆ 2% ಹೆಚ್ಚುವರಿ ತೆರಿಗೆ ಶುಲ್ಕ ವಿಧಿಸಬೇಕು ಮತ್ತು ಸಾಂಕ್ರಾಮಿಕ ಸಮಯದಲ್ಲಿ windfall ಲಾಭಗಳಿಸುವ ಕಂಪನಿಗಳ ಮೇಲೆ ತಾತ್ಕಾಲಿಕ ತೆರಿಗೆಯನ್ನು ಜಾರಿಗೆ ತರಬೇಕು ಎಂದು ಅದು ಸರ್ಕಾರಕ್ಕೆ ಸೂಚಿಸಿದೆ.

“ಇದು ಉತ್ತಮ ಭವಿಷ್ಯವನ್ನು ನಿರ್ಮಿಸಲು ಭಾರತ ಸರ್ಕಾರವು ನಿರ್ದಿಷ್ಟ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಸಮಯ. ಹೆಚ್ಚು ನಾಗರಿಕರು ಸಮಾನ ಮತ್ತು ನ್ಯಾಯಯುತ ಭವಿಷ್ಯವನ್ನು ಬಯಸುತ್ತಾರೆ” ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...