Homeಮುಖಪುಟಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

‘ಪಿಕ್ಷರ್ ಅಭಿ ಬಾಕಿ ಹೈ : 26ಕ್ಕೆ ಏನಾಗುತ್ತೋ ನಮ್ಮ ಕೈಲಿಲ್ಲ, ಅದು ದೇವರಾಟ’ ಎಂದು ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ ದೀಪ್ ಸಿಧು ವಾರ ಮೊದಲೇ ಹೇಳಿದ್ದ.

- Advertisement -
- Advertisement -

ಜನವರಿ 20 ರಂದು, ಗಣರಾಜ್ಯೋತ್ಸವಕ್ಕೆ ಒಂದು ವಾರ ಮೊದಲು, ದೆಹಲಿ ಪೊಲೀಸರು ಮತ್ತು ಕೃಷಿ ಸಂಘಗಳು ಟ್ರ‍್ಯಾಕ್ಟರ್ ಪೆರೇಡ್‌ನ ಭದ್ರತಾ ನಿಯಮಗಳ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭ. ಆಗ ದೀಪ್ ಸಿಧು, ಫೇಸ್‌ಬುಕ್‌ನಲ್ಲಿ ಲೈವ್‌ಸ್ಟ್ರೀಮ್‌ಗೆ ಹೋಗಿ, ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರನ್ನು ಉದ್ದೇಶಿಸಿ ಹೇಳಿದ್ದ: “ಪಿಕ್ಷರ್ ತೋ ಅಭಿ ಬಾಕಿ ಹೈ ದೋಸ್ತ್” ಎಂದು.

ಜನವರಿ 23 ರಂದು, ಪಂಜಾಬಿ ಭಾಷೆಯಲ್ಲಿದ್ದ ವೆಬ್ ಚಾನೆಲ್ ಸಂದರ್ಶನವನ್ನು ಹಂಚಿಕೊಂಡ. ಅದರಲ್ಲಿ “ಜನವರಿ 26 ರಂದು ಏನಾಗಬಹುದು ಎಂಬುದನ್ನು ನಾವು ಯೋಜಿಸಲು ಸಾಧ್ಯವಿಲ್ಲ. ಇದು ನಮ್ಮ ಲೆಕ್ಕಾಚಾರವನ್ನು ಮೀರಿದ್ದು. ಇದು ಅನಿರೀಕ್ಷಿತವಾದುದು. ಇದು ಸರ್ವಶಕ್ತನಿಗೆ ಬಿಟ್ಟಿದ್ದು. ಜನವರಿ 26 ರಂದು ಏನಾಗುತ್ತದೆ ಎಂದು ನಾವು ಮನುಷ್ಯರು ಏನನ್ನೂ ಹೇಳಲಾರೆವು” ಎಂದಿದ್ದ.

ಪ್ರತಿಭಟನೆಯೊಳಕ್ಕೆ ನುಸುಳಿದಾಗಿನಿಂದ ಈತ ಇಂತಹ ಪ್ರಚೋದನಾಕಾರಿ ಕೆಲಸಗಳನ್ನೇ ಮಾಡುತ್ತ ಬಂದಿದ್ದಾನೆ. ಇದೀಗ ಆತನ ಹಳೆಯ ಪೋಸ್ಟ್‌ಗಳು, ಸಂದಶಗಳಲ್ಲಿ ಗೊತ್ತಾಗುತ್ತಿದೆ,  ಈತ ಸದಾ ಯುವಕರ ಗುಂಪುಗಳನ್ನು ಪ್ರಚೊದಿಸುತ್ತ ಬಂದಿದ್ದಾನೆ ಎಂದು.

ಜನವರಿ 19 ರಂದು, ಸಿಧು ಬಿಕೆಯು (ಹರಿಯಾಣ) ಅಧ್ಯಕ್ಷ ಗುರ್ನಮ್ ಸಿಂಗ್ ಚದುನಿ ಮತ್ತು ತನ್ನನ್ನು ಸಮರ್ಥಿಸಿಕೊಂಡಿದ್ದ. ಎಸ್‌ಕೆಎಂ ಸದಸ್ಯರಾದ ಬಿಕೆಯುನ ಚದುನಿ ಅವರು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ರೈತ ಸಂಘಗಳು ಆರೋಪಿಸಿದ್ದವು. ಆಗ ಚದುನಿ ಪರ ಮಾತನಾಡಿದ್ದ ದೀಪ್ ಸಿಧು, ರಾಜಕೀಯ ಪಕ್ಷಗಳ ಜೊತೆ ಮಾತಾಡಿದರೇನು ತಪ್ಪು ಎಂದು ಸಮರ್ಥೀಸಿಕೊಂಡು ಸಂದೇಶಗಳನ್ನು ಹಾಕಿದ್ದ.

ಜ.25ರಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯನ್ನು ಬೆಂಬಲಿಸಿ, ನಿಗದಿಯಾಗದ ಬೇರೆ ಮಾರ್ಗದಲ್ಲಿ ರ‍್ಯಾಲಿ ಮಾಡಲು ಬಯಸುವವರು, ಕಿಸಾನ್ ಮಜ್ದೂರ್ ಸಮಿತಿಯ ರ‍್ಯಾಲಿಯ ಜೊತೆ ಬನ್ನಿ ಎಂದು ರೈತರನ್ನು ನೇರವಾಗಿ ಪ್ರಚೋದಿಸುತ್ತಿದ್ದ.

ಹಲವು ಸಲ ಹಲವಾರು ರೈತ ನಾಯಕರು ಮತ್ತು ಸಾಮಾನ್ಯ ರೈತರು ಈತನ ಪ್ರಚೋದನಕಾರಿ ಮಾತುಗಳಿಗೆ ಆಕ್ಷೇಪ ಎತ್ತಿದ್ದರು. ಹಾಗಾಗಿ ಆತನನ್ನು ಹೋರಾಟದಿಂದ ಊರ ಇಟ್ಟಿದ್ದರು. ಪಂಜಾಬ್‌ನಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದಾಗ ಆತನಿಗೆ ಚೀಮಾರಿ ಹಾಕಿದ್ದರು. ಆತ ಸಿಂಘುವಿನಿಂದ ಸ್ವಲ್ಪ ದೂರದಲ್ಲಿ ಹೋರಾಟ ಹಮ್ಮಿಕೊಂಡಿದ್ದ.


ಇದನ್ನೂ ಓದಿ; ಯಾವುದೇ ಆತಂಕವಿಲ್ಲ, ಶಾಂತಿಯುತ ದಿಟ್ಟ ಹೋರಾಟ ಮುಂದುವರೆದಿದೆ: ರೈತ ಮುಖಂಡರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...