Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...