Homeಮುಖಪುಟಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ.

- Advertisement -
- Advertisement -

ಉತ್ತರ ಕರ್ನಾಟಕದ ಪ್ರಸಿದ್ದ ಅಲೈ ಕುಣಿತವನ್ನಾಧರಿಸಿದ “ಅಲೈದೇವ್ರು” ಎಂಬ ನಾಟಕವನ್ನು ಬೆಂಗಳೂರಿನ ವಿಶ್ವರಂಗ ಥಿಯೇಟರ್ ತಂಡವು ರವಿವಾರ ಸಂಜೆ 4.30ಕ್ಕೆ ಮತ್ತು 7.30ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಪ್ರದರ್ಶಿಸಲು ಮುಂದಾಗಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ 35ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಕಲಾವಿದರು ಎರಡು ತಿಂಗಳು ಅಭ್ಯಾಸ ಮಾಡಿದ್ದಾರೆ.

ಅಲೈಹಬ್ಬ ಹಿಂದೂ ಮುಸ್ಲಿಂಮರು ಸೇರಿ ಆಚರಿಸುವ ತಲೆಮಾರುಗಳ ಸೌಹಾರ್ದದ ಹಬ್ಬ. ಜನಪದ ಲಯದ ಕುಣಿತ, ಅಹೋರಾತ್ರಿ ಹಾಡಲ್ಪಡುವ ರಿವಾಯತ್ ಪದಗಳ ಸಾಹಿತ್ಯ, ಹಲಗೆಯ ನಾದದ ಸಂಗೀತ, ಹೀಗೆ ಹಲವಾರು ಕಲೆಗಳ ಸಂಗಮವಾದ ಗ್ರಾಮೀಣ ಭಾಗದ ಶ್ರಮಿಕ ವರ್ಗದವರಿಂದ ಈ ಹಬ್ಬ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಕೆಲವು ಉತ್ತರ ಕರ್ನಾಟಕದಲ್ಲಿ ಕೆಲವು ಹಳ್ಳಿಗಳಲ್ಲಿ ಮುಸ್ಲಿಂ ಕುಟುಂಬಗಳು ಇರದಿದ್ದರೂ ಕೂಡ ಹಿಂದೂಗಳೇ ಈ ಹಬ್ಬವನ್ನು ತಿಂಗಳಾನುಗಟ್ಟಲೇ ಆಚರಿಸುತ್ತಾರೆ.

ಆದರೆ ಇತ್ತೀಚಿಗೆ ಕೆಲವು ಧಾರ್ಮಿಕ ಮೂಲಭೂತವಾದಿ ಸಂಘಟನೆಗಳ ಶಾಖೆಗಳು ಹಳ್ಳಿಗಳಲ್ಲೂ ತೆರೆಯಲ್ಪಡುತ್ತಿದ್ದು, ಈ ಶಾಖೆಗಳ ನಂಜಿನ ಕರಿನೆರಳೂ ಶ್ರಾವಣ, ಸಂಕ್ರಾಂತಿ, ಅಲೈಹಬ್ಬದಂತ ಗ್ರಾಮೀಣ ಹಬ್ಬಗಳ ಮೇಲೂ ಆವರಿಸಿ ಹಬ್ಬದ ವಾತಾವರಣ ಮುರುಟುತ್ತಿದೆ. ಮೊದಲೆಲ್ಲ ಹಗಲ್ಲೆಲ್ಲ ದುಡಿದು ರಾತ್ರಿಯಾಗುತ್ತಿದ್ದಂತೆ, ಶ್ರಾವಣದ ಭಜನಾ ಮ್ಯಾಳಕ್ಕೆ, ಅಲೈಹಬ್ಬದ ಹೆಜ್ಜಿ ಕುಣ್ತದ ಅಂಗಳಕ್ಕೆ ಹೋಗುತ್ತಿದ್ದ ಹಳ್ಳಿ ಯುವಕರು ಈಗ ರಾತ್ರಿಯಾಗುತ್ತಿದ್ದಂತೆ ದಿಲ್ಲಿಯಿಂದ ಹೇರಲ್ಪಡುತ್ತಿರುವ ಏಕ ಸಂಸ್ಕೃತಿಯ ಭೈಟಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇಂಥ ಪಲ್ಲಟಗೊಂಡ ವರ್ತಮಾನಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನು ಅಲೈದೇವ್ರು ನಾಟಕ ಮಾಡುತ್ತದೆ.

ಬಹುತ್ವದ ಬೇರುಗಳಿರುವ ಹಳ್ಳಿಯೊಂದರಲ್ಲಿ ರೈತರು, ದನಗಾಹಿಗಳು, ಕುರಿಗಾಹಿಗಳನ್ನು ಒಳಗೊಂಡ ಶ್ರಮಿಕವರ್ಗದ ಗುಂಪು ಈ ಅಲೈಹಬ್ಬಕ್ಕಾಗಿ ಹೆಜ್ಜಿ ಕಲಿಯತೊಡಗುತ್ತದೆ. ಓದು ಬರಹ ಗೊತ್ತಿಲ್ಲದ, ಯಾವ ಧರ್ಮದ ನಂಜನ್ನೂ ಮೈಗಂಟಿಸಿಕೊಳ್ಳದ ಜನಪದ ಸಂಸ್ಕೃತಿಯೇ ತಮ್ಮ ಧರ್ಮವೆಂದು ನಂಬಿದವರು ಇವರು. ಇನ್ನೊಂದು ಯುವಕರ ಗುಂಪು ಈ ಹಬ್ಬ ನಮ್ಮ ಧರ್ಮದವರದ್ದಲ್ಲ, ಊರಲ್ಲಿ ಸಾಬಿಗಳ ಹಬ್ಬ ಮಾಡಕ್ಕೆ ನಾವು ಅವಕಾಶ ಕೊಡಲ್ಲ ಎಂದು ಪಣ ತೊಡುತ್ತದೆ. ಅದೇ ಸಮಯದಲ್ಲಿ ಪೇಟೆಯಿಂದ ಬರುವ ಮುಸ್ಲಿಮರ ಗುಂಪು ಕೂಡ ಹನುಮಪ್ಪನ ಜಾತ್ರೆ, ದುರ್ಗವ್ವನ ಜಾತ್ರೆಯಂತೆ ಕುಣಿದು ಕುಪ್ಪಳಿಸುತ್ತಾ ಮಾಡುವ ಈ ಅಲೈಹಬ್ಬ ನಮ್ಮ ಧರ್ಮದಲ್ಲ. ನಮ್ಮ ದೇವರು ನಿರಾಕಾರ. ದಯವಿಟ್ಟು ಈ ಹಬ್ಬ ಮಾಡಬೇಡಿ ಅಂತ ಅವರೂ ವಿರೋಧಿಸುತ್ತಾರೆ. ಹೀಗೆ ಎರಡೂ ಧರ್ಮಗಳ ಮೂಲಭೂತವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ದಿನಗಳಲ್ಲೇ ಹಿಂದೂ ಮುಸ್ಲಿಂ ಪ್ರೇಮ ಪ್ರಕರಣ, ಗೋಸಾಗಾಟ ಪ್ರಕರಣಗಳು ನಡೆದು ಉರಿಯೋ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗುತ್ತದೆ. ಹೀಗೆ ಜನರ ಜನಪದ ಹಬ್ಬ ಮತ್ತು ಪ್ರಭುತ್ವದ ಅಸೂಕ್ಷ್ಮಗಳು ಕಲಬೆರಕೆಗೊಂಡು ಊರೆಂಬೋ ಊರು ದಿಕ್ಕುಗಾಣದೇ ಪರದಾಡುವ ವರ್ತಮಾನವನ್ನು ಈ ನಾಟಕ ಪ್ರತಿಬಿಂಬಿಸುತ್ತದೆ.

ಇಂದಿನ ಹಳ್ಳಿಗಳ ವಾಸ್ತವ ಬದುಕನ್ನು ತೆರೆದಿಡುವ ಅಲೈದೇವ್ರು ನಾಟಕ ಈ ಭಾನುವಾರ ಎರಡು ಪ್ರದರ್ಶನಗಳನ್ನು ಕಾಣುತ್ತಿದೆ. ಬುಕ್ ಮೈ ಶೋನಲ್ಲಿ ಬುಕ್ ಮಾಡಬಹುದು ಅಥವಾ ಟಿಕೆಟ್‌ಗಾಗಿ 9916863637 ಸಂಪರ್ಕಿಸಬಹುದು.


ಇದನ್ನೂ ಓದಿ: ‘ಹಿಂಡೆಕುಳ್ಳು’ ಕಥಾಸಂಕಲನ ವಿಮರ್ಶೆ: ಆಯ್ದ ಚಿತ್ರ ಕಟ್ಟಿಕೊಡುವ ಜಾಣ್ಮೆಯ ಕಥನ ಶೈಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...