Homeಮುಖಪುಟರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

ರಾಹುಲ್ ಗಾಂಧಿ ಮೇಲಿನ ಪ್ರತಿ ಜೋಕಿಗೆ ಬಿಜೆಪಿ ಐಟಿ ಸೆಲ್ ನೂರು ರೂ ಕೊಡುತ್ತೆ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |
ನಾನು ಕಳೆದ ತಿಂಗಳು ಮಂಗಳೂರಿನ ಒಂದು ಪುಸ್ತಕದ ಮಳಿಗೆಯಲ್ಲಿ ನನಗೆ ಬೇಕಾಗಿದ್ದ ಒಂದು ಪುಸ್ತಕ ಹುಡುಕುತ್ತಿದ್ದೆ. ಅಲ್ಲಿ ನನಗೆ ಒಬ್ಬ ಹಳೆಯ ಪರಿಚಿತರು ಸಿಕ್ಕಿದರು. ಅವರು ನನ್ನ ಜತೆ ಮಾತನಾಡುತ್ತಾ, ನಿಮ್ಮ ಹತ್ತಿರ ಯಾವುದಾದರೂ ಉತ್ತಮ ಸರ್ದಾರ್ಜಿ ಜೋಕ್ ಪುಸ್ತಕಗಳು ಇದ್ದರೆ ಕೊಡಿ ಎಂದು ಹೇಳಿದರು. 55 ವರ್ಷ ದಾಟಿದ ಅವರಿಗೆ ಜೋಕ್ ಪುಸ್ತಕಗಳ ಬಗ್ಗೆ ಯಾಕೆ ಒಮ್ಮೆಲೇ ಆಸಕ್ತಿ ಹುಟ್ಟಿತು ಎಂದು ನನಗೆ ಆಶ್ಚರ್ಯವಾಯಿತು. ಹಾಗಾಗಿ ನಾನು ಅವರಲ್ಲಿ ಕೇಳಿದೆ- ನಿಮಗೆ ಈ ಇಳಿ ವಯಸ್ಸಿನಲ್ಲಿ ಜೋಕುಗಳ ಪುಸ್ತಕ ಯಾಕೆ ಬೇಕಾಯಿತು ಎಂದು.

ಆಗ ಅವರು ಮುಜುಗರ ಪಡುತ್ತಾ -ನಾನು ಬಿ‌ಜೆ‌ಪಿ ಐ‌ಟಿ ಸೆಲ್ ನಲ್ಲಿ ಕೆಲಸ ಮಾಡುತ್ತಿದ್ದೇನೆ, ಅವರು ಕಳುಹಿಸುವ ಪೋಸ್ಟ್ ಗಳನ್ನು ಸಾಮಾಜಿಕ ಮೀಡಿಯಾದಲ್ಲಿ ಯಥಾವತ್ ಕಾಪಿ ಪೇಸ್ಟ್ ಫಾರ್ವರ್ಡ್ ಮಾಡುವುದೇ ನನ್ನ ಕೆಲಸ. ಒಂದು ಪೋಸ್ಟ್ ಗೆ ರೂ.3/- ಕೊಡುತ್ತಾರೆ. ಯೂಟೂಬ್ ನಲ್ಲಿ ರಾಜಕೀಯ ವಿಡಿಯೋಗಳ ಕೆಳಗೆ ಹಾಕುವ ಹೊಲಸು ಬೈಗುಳಗಳ ಕಾಮೆಂಟಿಗೂ ನಮಗೆ ಹಣ ಸಿಗುತ್ತದೆ. ಮೋದಿಗೆ ತನ್ನ ಭಕ್ತರು ಎದುರಾಳಿಗಳಿಗೆ ಕೊಡುವ ಹೊಲಸು ಬೈಗುಳ ಓದುವುದೆಂದರೆ ತುಂಬಾ ಇಷ್ಟವಂತೆ, ಅವರು ದಿನದ 12 ಗಂಟೆ ಸಾಮಾಜಿಕ ಮೀಡಿಯಾ ಜಾಲಾಡುವುದರಲ್ಲಿಯೇ ಕಳೆಯುತ್ತಾರೆ ಎಂದು ಅವರು ನನಗೆ ಹೇಳಿದರು. (ಇದನ್ನೇ ಅವರ ಭಕ್ತರು ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎಂದು ಬಡಾಯಿ ಕೊಚ್ಚುವುದು).

ಅವರಿಗೆ ಜೋಕ್ ಪುಸ್ತಕಗಳು ಬೇಕಿರುವುದಕ್ಕೆ ಕಾರಣ ಅವುಗಳಲ್ಲಿಯ ಜೋಕುಗಳನ್ನು ಸ್ವಲ್ಪ ಬದಲಾವಣೆ ಮಾಡಿ ಅವು ರಾಹುಲ್ ಗಾಂಧಿಗೆ ಅನ್ವಯ ಆಗುವಂತೆ ತಿರುಚಿ ಬಿ‌ಜೆ‌ಪಿ ಐ‌ಟಿ ಸೆಲ್ ಗೆ ಕಳುಹಿಸಿದರೆ ಒಂದು ಒಳ್ಳೆಯ ಜೋಕಿಗೆ ಕನಿಷ್ಠ ರೂ. 100/- ಕೊಡುತ್ತಾರೆ, ಹೊಸತರದ ಉತ್ತಮ ಜೋಕ್ ಆಗಿದ್ದರೆ ರೂ 200/- ಸಹಾ ಕೊಡುತ್ತಾರಂತೆ. ಅದಕ್ಕಾಗಿ ಅವರು ಜೋಕ್ ಪುಸ್ತಕಗಳನ್ನು ಹುಡುಕುತ್ತಿದ್ದದ್ದು.

ರಾಹುಲ್ ಗಾಂಧಿ ಕ್ಯಾಂಬ್ರೀಡ್ಜ್ ನಲ್ಲಿ ಎಂ.ಫಿಲ್ ಮಾಡಿದ್ದಾರೆ, ಜತೆಗೆ ಬಿಜ್ನೆಸ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಾ ಮಾಡಿದ್ದಾರೆ. ಲಂಡನ್ ನಲ್ಲಿ ಒಂದು ಟೆಕ್ ಕಂಪನಿಯಲ್ಲಿ ಡೈರೆಕ್ಟರ್ ಸಹಾ ಆಗಿದ್ದರು. ಅವರನ್ನು ಲೇವಡಿ ಮಾಡುವಷ್ಟು ಯೋಗ್ಯತೆ ಪಿ‌ಯೂ‌ಸಿಯಲ್ಲಿ ಮೂರು ಸಾರಿ ಫೇಲಾಗಿ ಶಾಲೆ ಅರ್ಧಕ್ಕೆ ಬಿಟ್ಟಿರುವ ಸ್ವತಃ ನಿಮಗೆ ಅಥವಾ ನಿಮ್ಮ ಅರೆಸಾಕ್ಷರ ಮೋದಿಗೆ ಇದೆಯೇ? ಗುಜರಾತಿ ಮಾಧ್ಯಮ ಶಾಲೆಯಲ್ಲಿ ಕೇವಲ ಎಂಟನೇ ಕ್ಲಾಸ್ ವರೆಗೆ ಮಾತ್ರ ಕಲಿತಿರುವ ಮೋದಿಗೆ ಸರಿಯಾಗಿ ಇಂಗ್ಲೀಷ್ ಸಹಾ ಮಾತನಾಡಲು ಬರುವುದಿಲ್ಲ, ಆದರೂ ನೀವು ಅವಿದ್ಯಾವಂತ ಮೋದಿಗಾಗಿ ವಿದ್ಯಾವಂತ ರಾಹುಲ್ ಗಾಂಧಿಯನ್ನು ಲೇವಡಿ ಮಾಡುವುದು ಸರಿಯೇ? ಎಂದು ನಾನು ಕೇಳಿದೆ.

ಅದಕ್ಕೆ ಅವರು – ಹೌದು ನೀವು ಹೇಳುವುದು ಸರಿ. ರಾಹುಲ್ ಗಾಂಧಿ ಮೋದಿಗಿಂತ ಹೆಚ್ಚು ವಿದ್ಯಾವಂತ, ಬುದ್ದಿವಂತ ಮತ್ತು ಸಂಭಾವಿತ, ಆದರೆ ಸತತ ಲೇವಡಿ ಅಪಹಾಸ್ಯಗಳ ಮೂಲಕ ಅವರೊಬ್ಬ ಪೆದ್ದ ಮಂದಬುದ್ದಿಯವ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಲೇ ಇರಬೇಕು, ಇದರಿಂದ ಹೊಸ ಪೀಳಿಗೆಯ ಯುವ ಮತದಾರರು ಅವರನ್ನು ಹಗುರವಾಗಿ ಪರಿಗಣಿಸುತ್ತಾರೆ ಹಾಗೂ ಅವರಿಗೆ ಹೆಚ್ಚು ಮಹತ್ವ ಮತ್ತು ಗೌರವ ಕೊಡುವುದಿಲ್ಲ, ಕೊನೆಗೆ ಇದು ಕಾಂಗ್ರೆಸ್ಸಿಗೆ ನೆಗೆಟಿವ್ ವೋಟ್ ಆಗಿ ಪರಿಣಮಿಸುತ್ತದೆ ಎಂಬುದು ನಮ್ಮ ಬಿ‌ಜೆ‌ಪಿ ಪ್ರಚಾರ ವಿಭಾಗದವರ ಮನೋವೈಜ್ನಾನಿಕ ರಣತಂತ್ರ ವಾಗಿದೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟರು. ಅದಕ್ಕಾಗಿಯೇ ಬಿ‌ಜೆ‌ಪಿ ಐ‌ಟಿ ಸೆಲ್ ನವರೇ ರಾಹುಲ್ ಗಾಂಧಿಗೆ ‘ಪಪ್ಪು’ ಚೋಟಾ ಭೀಮ್ ಎಂದು ಅಡ್ಡ ಹೆಸರಿಟ್ಟು ಲೇವಡಿ ಶುರು ಮಾಡಿದ್ದು, ಅದನ್ನೇ ನಾವೂ ಅನುಸರಿಸಬೇಕು ಎಂದು ನಮಗೆ ಆದೇಶವಿದೆ ಎಂದು ಆ ಮಿತ್ರರು ನನಗೆ ಹೇಳಿದರು.

ಅರೆಸಾಕ್ಷರ ಮೋದಿಗೆ “ರಾಜಕೀಯ ತಂತ್ರಗಾರಿಕೆ” ಗೊತ್ತಿದೆಯೇ ವಿನಹ ನಮ್ಮ ಬೃಹತ್ ದೇಶದ ಆರ್ಥಿಕತೆಯ ಬಗ್ಗೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲ, ಅವರು ಗುಜರಾತ್ ಮುಖ್ಯ ಮಂತ್ರಿ ಆಗುವುದಕ್ಕೇ ಮೊದಲು ಒಂದು ಪಂಚಾಯತ್ ಸದಸ್ಯನಾಗಿಯೂ ಜನ ಸೇವೆ ಮಾಡಿಲ್ಲ. ಕೇವಲ ಆಗಿನ ಗುಜರಾತ್ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ಸುರೇಶ್ ಮೆಹತಾ, ಮತ್ತು ಮಾಧವ ಸಿಂಹ್ ಸೋಲಂಕಿ ಇವರುಗಳ ಬೆನ್ನಿಗೆ ಮೋದಿ ಇರಿಯುತ್ತಾ ಬಂದು 2001 ರಲ್ಲಿ ನೇರವಾಗಿ ಮುಖ್ಯಮಂತ್ರಿ ಖುರ್ಚಿ ಕಬಳಿಸಿದ್ದು. ಮತ್ತೂ ನಂತರ ಅದನ್ನು ಉಳಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕರಾಳ ಗೋಧ್ರಾಕಾಂಡ ರಚಿಸಿದ್ದು ಅಷ್ಟೇ. ಸ್ವಲ್ಪವೂ ಆರ್ಥಿಕ ತಜ್ನತೆ ಇಲ್ಲದರಿಂದಾಗಿಯೇ ಮೋದಿ ಪೆದ್ದು ಪೆದ್ದಾಗಿ ನೋಟು ರದ್ದತಿ ಮಾಡಿ ಇಡೀ ದೇಶದ ಆರ್ಥಿಕತೆಗೆ ಮಾರಣಾಂತಿಕ ಪೆಟ್ಟು ಕೊಟ್ಟಿದ್ದು ನಿಜ ಎಂದು ಆ ಸರ್ದಾರ್ಜಿ ಜೋಕುಪ್ರಿಯರು ಒಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...