Homeಮುಖಪುಟ10 ಲಕ್ಷ ರೂ. ‘ಶಾಂತಿ ಉಲ್ಲಂಘನೆ' ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ...

10 ಲಕ್ಷ ರೂ. ‘ಶಾಂತಿ ಉಲ್ಲಂಘನೆ’ ಬಾಂಡ್ ನೀಡಲು ರೈತರಿಗೆ ನೋಟಿಸ್! ಯುಪಿ ಸರ್ಕಾರಕ್ಕೆ ವಿವರಣೆ ಕೇಳಿದ ನ್ಯಾಯಾಲಯ

ಈ "ಶಾಂತಿ ಉಲ್ಲಂಘನೆ" ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂದು ಫೆ. 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯ ಹಿಂದಿನ ದಿನ ಉತ್ತರಪ್ರದೇಶ ಸರ್ಕಾರವು ಅಲ್ಲಿನ ರೈತರಿಗೆ ‘ವಿಚಿತ್ರ’ ನೋಟಿಸ್‌ಗಳನ್ನು ನೀಡಿದೆ. ‘ರೈತರು ಶಾಂತಿ ಉಲ್ಲಂಘನೆಯ ಮಾಡುವ ಸಾಧ್ಯತೆ’ ಇರುವುದರಿಂದ, 50 ಸಾವಿರದಿಂದ 10 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ “ಶಾಂತಿ ಉಲ್ಲಂಘನೆ” ನೋಟಿಸ್‌ಗಳನ್ನು ಬಡ ರೈತರಿಗೆ ಹೇಗೆ ನೀಡಲಾಗಿದೆ ಎಂಬುದನ್ನು ಫೆಬ್ರವರಿ 2 ರೊಳಗೆ ವಿವರಿಸಲು ಅಲಹಾಬಾದ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ.

ರಾಜಧಾನಿ ಲಕ್ನೋದಿಂದ 80 ಕಿ.ಮೀ ದೂರದಲ್ಲಿರುವ ಸೀತಾಪುರ ಜಿಲ್ಲೆಯ ಟ್ರಾಕ್ಟರ್ ಮಾಲೀಕತ್ವದ ರೈತರಿಗೆ ಜನವರಿ 19 ರಂದು ನೋಟಿಸ್ ನೀಡಲಾಗಿದೆ. ರೂ 50,000 ದಿಂದ ಗರಿಷ್ಠ ರೂ. 10 ಲಕ್ಷದವರೆಗಿನ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಲು ಮತ್ತು ಅದೇ ಮೊತ್ತದ ಶ್ಯೂರಿಟಿಗಳನ್ನು ನೀಡಬೇಕು ಎಂದು ನೊಟಿಸ್‌ನಲ್ಲಿ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ “ರೈತರು ಕಾನೂನು ಸುವ್ಯವಸ್ಥೆಯನ್ನು ಉಲ್ಲಂಘಿಸಬಹುದೆಂಬ ಆತಂಕದಲ್ಲಿ’ ಈ ನೋಟಿಸ್‌ಗಳನ್ನು ನೀಡಲಾಗಿದೆ.

ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ಧುರು ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಆಲಿಸಿತು. “ರಾಜ್ಯ ಸರ್ಕಾರದ ಅಧಿಕಾರಿಗಳು ಹೊರಡಿಸಿದ ನೋಟಿಸ್ ಆಧಾರ ರಹಿತವಾದುದು ಮಾತ್ರವಲ್ಲದೆ, ಒಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಏಕೆಂದರೆ ಪೊಲೀಸರು ತಮ್ಮ ಮನೆಗಳನ್ನು ಸುತ್ತುವರೆದಿರುವ ಕಾರಣ ರೈತರು ತಮ್ಮ ಮನೆಗಳಿಂದ ಹೊರಬರಲು ಇದು ಅವಕಾಶವನ್ನು ನಿರಾಕರಿಸುತ್ತದೆ’ ಎಂದು ದ್ವಿಸದಸ್ಯ ಪೀಠಕ್ಕೆ ಅರ್ಜಿದಾರರು ದೂರಿದ್ದರು.

‘ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಗಳ ಮೌಲ್ಯ ತುಂಬ ಜಾಸ್ತಿಯಿದೆ ಮತ್ತು ಬಡ ರೈತರಿಂದ ಅದನ್ನು ಭರಿಸಲು ಸಾಧ್ಯವಿಲ್ಲ, ಅದೂ ಕೇವಲ ಸ್ಥಳೀಯ ಪೊಲೀಸ್ ಸಿಬ್ಬಂದಿಯ ವರದಿಯ ಆಧಾರದ ಮೇಲೆ ಮತ್ತು ರೈತರಿಗೆ ಪ್ರತಿಕ್ರಿಯಿಸಲು ಯಾವುದೇ ಅವಕಾಶವನ್ನು ನೀಡದೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದರು.

ಉಪ ವಿಭಾಗಾಧಿಕಾರಿ ಜಾರಿ ಮಾಡಿದ್ದ ಅಂತಹ ನೋಟಿಸ್ ಒಂದನ್ನು ಎನ್‌ಡಿಟಿವಿ ಪರಿಶೀಲಿಸಿದೆ. ಅದರಲ್ಲಿ, “ಕೃಷಿ ಮಸೂದೆಗಳ ವಿರುದ್ಧದ ಪ್ರತಿಭಟನೆಯ ವಿಷಯವಾಗಿ ಜನರ ನಡುವೆ ಆಂತರಿಕ ಸಂಘರ್ಷವಿದೆ, ಉದ್ವಿಗ್ನತೆ ಇದೆ. ಈ ಕಾರಣದಿಂದಾಗಿ, ಶಾಂತಿಯ ಉಲ್ಲಂಘನೆಯಾಗಬಹುದು. ಆದ್ದರಿಂದ, ನೋಟಿಸ್‌ಗಳ ಮೂಲಕ ಎರಡೂ ಬದಿಗಳನ್ನು ಹತೋಟಿಯಲ್ಲಿಡಲು ಇದು ಅವಶ್ಯಕ. ತಪ್ಪು ಮಾಡಿದರೆ ಬಂಧಿಸಲು ಅವಶ್ಯಕ” ಎಂದು ಬರೆಯಲಾಗಿದೆ.

10 ರೈತರಿಗೆ ಈ ನೋಟಿಸ್ ನೀಡಲಾಗಿದ್ದು, ಎರಡು ದಿನಗಳಲ್ಲಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಲು ಮತ್ತು ವೈಯಕ್ತಿಕ ಬಾಂಡ್‌ಗಳಿಗೆ ತಾವೇಕೆ ಸಹಿ ಹಾಕುವುದಿಲ್ಲ ಎಂಬುದನ್ನು ವಿವರಿಸುವಂತೆಯೂ ಅದರಲ್ಲಿ ಸೂಚಿಸಲಾಗಿದೆ.


ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...