Homeಕರ್ನಾಟಕತಮ್ಮ ಮಾತಿನ ಫಲವನ್ನು ಬಿ. ಸಿ. ಪಾಟೀಲ್ ಶೀಘ್ರದಲ್ಲೇ ಅನುಭವಿಸಲಿದ್ದಾರೆ: ಕುರುಬೂರು ಶಾಂತಕುಮಾರ್‌‌

ತಮ್ಮ ಮಾತಿನ ಫಲವನ್ನು ಬಿ. ಸಿ. ಪಾಟೀಲ್ ಶೀಘ್ರದಲ್ಲೇ ಅನುಭವಿಸಲಿದ್ದಾರೆ: ಕುರುಬೂರು ಶಾಂತಕುಮಾರ್‌‌

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ಶಾಂತಿಯುತ ಹೋರಾಟ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಆದರೆ, ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿದೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿಷಾಧ ವ್ಯಕ್ತಪಡಿಸಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್​, ” ಸಮಾಜಘಾತುಕ ವ್ಯಕ್ತಿಗಳಿಂದ ರೈತರ ಹೆಸರಿಗೆ ಮಸಿಯಾಗಿದೆ. ಹೀಗಾಗಿ ದೆಹಲಿ‌ ಘಟನೆ ಬಗ್ಗೆ ಸರ್ವೋಚ್ಚನ್ಯಾಯಾಲದ ನ್ಯಾಯಾಧೀಶರಿಂದ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, “60 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾನಿರತ ರೈತರ ಹೆಸರಿಗೆ ಮಸಿ ಬಳಿಯಲು ಸರ್ಕಾರ ಷಡ್ಯಂತ್ರ ರಚಿಸಿದೆ. ಆದರೆ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಘಟನೆ ದುರಾದೃಷ್ಠಕರ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ‌ ಬೇರೆ ಬಾವುಟ ಹಾರಿಸಿದ್ದು ಪಂಜಾಬಿನ ನಟ ದೀಪ್ ಸಿಧು. ದೀಪ್ ಸಿಧು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ. ಅಲ್ಲದೇ ಬಾವುಟ ಹಾರಿಸಿದ್ದು ನಾನೆ ಎಂದು ದೀಪ್ ಸಿಧು ಒಪ್ಪಿಕೊಂಡಿದ್ದಾನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

“ಇದು ರೈತರ ಹೆಸರಿಗೆ ಕಳಂಕ ತರಲು ನಡೆಸಿದ ಷಡ್ಯಂತ್ರ. ಇಂತಹ ಸಮಾಜಘಾತುಕ ವ್ಯಕ್ತಿಗಳ ಮೇಲೆ ಮೊಕದ್ದಮೆ ದಾಖಲಿಸಿ ಜೀವಾವಧಿ ಶಿಕ್ಷೆ ನೀಡಬೇಕು. ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಈ ವಿಚಾರ ಬೇಹುಗಾರಿಕೆ ಸಂಸ್ಥೆ ಮೂಲಕ ಕೇಂದ್ರ ಸರ್ಕಾರಕ್ಕೆ ತಿಳಿದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಸಿದ್ದು ಯಾಕೆ..? ಇದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕು” ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

“ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧದ ರೈತ ಹೋರಾಟ ಮುಂದುವರೆಯಲಿದೆ ಎಂದು ಹೇಳಿರುವ ಅವರು, “ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮುಂದುವರೆಯುತ್ತೆ. ಗಲಭೆಯಿಂದ ಹೋರಾಟಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ರೈತರನ್ನು ಮನೆಯಲ್ಲಿ ಕೂಡಿಹಾಕಿ ಈ ಕಾಯ್ದೆಯನ್ನು ತಂದಿದ್ದಾರೆ. ರೈತರ ಜೊತೆ ನಾಟಕೀಯವಾಗಿ 11 ಸಭೆ ನಡೆಸಿದ್ದಾರೆ‌. 145 ರೈತರು ಚಳುವಳಿ ಮೂಲಕ ಪ್ರಾಣ ಕಳೆದುಕೊಂಡಾಗ ರೈತರ ಬಗ್ಗೆ ಕನಿಕರ ಇರಲಿಲ್ವಾ?’’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

“ಇದು ಇಡೀ ರೈತ ಕುಲವನ್ನೇ ನಾಶ ಮಾಡುವ ಸಂಚು. ಈ ಕಾಯ್ದೆಗಳ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ. ಇದೇ ಜ.30 ರಂದು ಉಪವಾಸ ನಿರಸನ ದಿನ ನಡೆಸಲು ತೀರ್ಮಾನಿಸಿದ್ದೇವೆ. ದೆಹಲಿಯ ಎಲ್ಲಾ ಗಡಿಭಾಗದಲ್ಲೂ ಉಪವಾಸ ನಿರಶನ ದಿನ ಆಚರಣೆ ಮಾಡಲಾಗುತ್ತದೆ. ನಾವು ಸಹ ರಾಜ್ಯದಿಂದ ತಂಡ ತಂಡವಾಗಿ ಚಳುವಳಿಗೆ ಹೋಗಲು ಚಿಂತನೆ ನಡೆಸಿದ್ದೇವೆ” ಎಂದು ಶಾಂತ ಕುಮಾರ್‌ ಹೇಳಿದ್ದಾರೆ.

ಇದೇ ವೇಳೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮೇಲೆ ಶಾಂತಕುಮಾರ್‌ ಹರಿಹಾಯ್ದಿದ್ದಾರೆ. “ಬಿ.ಸಿ. ಪಾಟೀಲ್ ಕೃಷಿ ಸಚಿವರಲ್ಲ. ಅವರೊಬ್ಬ ಸಿನಮಾ ಸಚಿವರು. ಎಷ್ಟೇ ಆಗಲಿ ಅವರು ಸಿನಿಮಾ ಕ್ಷೇತ್ರದಿಂದ ಬಂದವರಲ್ಲವೇ. ಅದಕ್ಕಾಗಿ ರೈತ ಹೋರಾಟದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಭತ್ತ ನಾಟಿ ಮಾಡುತ್ತಾ, ಜೋಳದ ತೆನೆ ಹೊತ್ತು ರೈತನೆಂದು ಫೋಸ್ ಕೊಡ್ತಾರೆ. ಅವರು ಕೃಷಿ ಸಚಿವರಾಗಲು ನಾಲಯಕ್. ಅವರ ಮಾತಿನ ಫಲವನ್ನು ಶೀಘ್ರದಲ್ಲೆ ಅವರು ಅನುಭವಿಸಲಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಯ ಭಾಷಣ ಬಹಿಷ್ಕರಿಸಲಿರುವ 16 ಪ್ರಮುಖ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...