Homeಮುಖಪುಟಟ್ರಾಕ್ಟರ್‌ ರ್‍ಯಾಲಿಯ ಅಹಿತಕರ ಘಟನೆಯಲ್ಲಿ ಕೇಜ್ರಿವಾಲ್ ಕೈವಾಡ: BJP ಸಂಸದ ಗೌತಮ್ ಗಂಭೀರ್‌ ಆರೋಪ

ಟ್ರಾಕ್ಟರ್‌ ರ್‍ಯಾಲಿಯ ಅಹಿತಕರ ಘಟನೆಯಲ್ಲಿ ಕೇಜ್ರಿವಾಲ್ ಕೈವಾಡ: BJP ಸಂಸದ ಗೌತಮ್ ಗಂಭೀರ್‌ ಆರೋಪ

- Advertisement -
- Advertisement -

ರೈತರ ಗಣರಾಜ್ಯೋತ್ಸವ ಆಚರಣೆಯಲ್ಲಿ ಕೆಂಪುಕೋಟೆ ಬಳಿ ನಡೆದ ಅಹಿತಕರ ಘಟನೆಗೆ ಕಾರಣರಾದವರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೈಜೋಡಿಸಿದ್ದಾರೆ ಎಂದು ಬಿಜೆಪಿ ಸಂಸದ ಮಾಜಿ ಕ್ರಿಕೆಟಿಗ ಗೌತಮ್ ಗಂಬೀರ್​ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಶಾಂತಿಯುತವಾಗಿ ಹೋರಾಟ ನಡೆಸಿದ್ದಾರೆ. ಆದರೆ, ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತು.

ಈ ಘಟನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರಿರುವ ಗೌತಮ್​ ಗಂಭೀರ್​, “ರೈತ ಹೋರಾಟಕ್ಕೆ ಪಂಜಾಬ್​ ರಾಜ್ಯದಲ್ಲಿ ಬಹುದೊಡ್ಡ ಬೆಂಬಲ ಇದೆ. ಹೀಗಾಗಿ ಪಂಜಾಬ್‌ನಲ್ಲಿ ಆಮ್​ ಆದ್ಮಿ ಪಕ್ಷವನ್ನು ಬೆಳೆಸುವ ಸಲುವಾಗಿ, ಅರವಿಂದ ಕೇಜ್ರಿವಾಲ್​ ಈ ಅಹಿತಕರ ಘಟನೆಯಲ್ಲಿ ಪಾಲ್ಗೊಂಡವರ ಜೊತೆ ಕೈಜೋಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

ಪಂಜಾಬ್​ ರಾಜ್ಯದಲ್ಲಿ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದು, ಪ್ರಮುಖ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ.

ಗುರುವಾರ ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ, “ಜನವರಿ 26 ರಂದು ನಡೆದದ್ದು ದುರದೃಷ್ಟಕರ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ ಆ ಘಟನೆಯಿಂದ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ಆತಂಕಗಳು ಇನ್ನೂ ಅಸ್ತಿತ್ವದಲ್ಲಿವೆ, ಆದ್ದರಿಂದ ನಾವೆಲ್ಲರೂ ರೈತರನ್ನು ಶಾಂತಿಯುತವಾಗಿ ಬೆಂಬಲಿಸಬೇಕು” ಎಂದು ಕರೆ ನೀಡಿದ್ದರು.

ಇದನ್ನೂ ಓದಿ: ರೈತ ಹೋರಾಟ: ಪಾರ್ಲಿಮೆಂಟ್ ಚಲೋ ಮೂಂದೂಡಿಕೆ – ಜ.30ಕ್ಕೆ ಉಪವಾಸ ಸತ್ಯಾಗ್ರಹ

ದೆಹಲಿ ರೈತರ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿನ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಯೋಗೇಂದ್ರ ಯಾದವ್ ಸೇರಿದಂತೆ ಸುಮಾರು 20 ರೈತ ಮುಖಂಡರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಯೋಗೇಂದ್ರ ಯಾದವ್, ಬಲ್‌ದೇವ್ ಸಂಗ್ ಸಿರ್ಸಾ, ಬಲ್‌ಬೀರ್ ಎಸ್ ರಾಜೇವಾಲ್ ಸೇರಿದಂತೆ 20 ರೈತ ಮುಖಂಡರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ 3 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ನೋಟಿಸ್ ನೀಡಲಾಗಿದೆ” ಎಂದು ವರದಿಯಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...