Homeಮುಖಪುಟಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ’ ಎಂದು ಸಕಾರಕ್ಕೆ ಸುಪ್ರಿಂಕೋರ್ಟ್ ಚಾಟಿ ಬೀಸಿದೆ.

- Advertisement -
- Advertisement -

ಜನರನ್ನು ಹಿಂಸಾಚಾರಕ್ಕೆ ಪ್ರೇರೇಪಿಸುವ ದೂರದರ್ಶನ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಸಕ್ರಿಯವಾಗಿ ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸರ್ಕಾರಕ್ಕೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಚೋದನೆಯ ತಡೆಗಟ್ಟುವಿಕೆ ಒಂದು ಪ್ರಮುಖ ಭಾಗವಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನನ್ನೂ ಮಾಡಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಈ ವಿಷಯದ ಬಗ್ಗೆ ಹಲವಾರು ವಿವಾದಗಳು ಘಟಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಮಾತನ್ನು ಹೇಳಿದೆ.

“ನ್ಯಾಯಯುತ ಮತ್ತು ಸತ್ಯವಾದ ವರದಿಗಾರಿಕೆ ಒಂದು ಸಮಸ್ಯೆಯಲ್ಲ. ಇತರರನ್ನು ಕೆರಳಿಸುವ ರೀತಿಯಲ್ಲಿ ಅದನ್ನು ಯೋಜಿಸಿದಾಗ ಅದು ಒಂದು ಸಮಸ್ಯೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ಕಳೆದ ವರ್ಷ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯ ಕುರಿತ ಮಾಧ್ಯಮ ಪ್ರಸಾರಕ್ಕೆ ಸಂಬಂಧಿಸಿದಂತೆ ಜಮಿಯತ್ ಉಲೆಮಾ-ಐ-ಹಿಂದ್, ಪೀಸ್ ಪಾರ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಲಯವು, ಸರ್ಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಬ್ರಾಡ್‌ಕಾಸ್ಟಿಂಗ್ ಅಸೋಸಿಯೇಷ್‌ನಗಳಿಗೆ ನೋಟಿಸ್ ನೀಡಿದೆ. ತಬ್ಲೀಘೀ ಜಮಾಅತ್‌ ಸಭೆಯನ್ನು ಮಾಧ್ಯಮಗಳ ಒಂದು ಭಾಗವು ಕೋಮುವಾದೀಕರಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

’ಇಂತಹ ಕೆಲವು ಸಂದರ್ಭಗಳಲ್ಲಿ ಪ್ರಸಾರವನ್ನು ನಿಲ್ಲಿಸಿದೆ’ ಎಂದು ಕೇಂದ್ರ ವಾದಿಸಿದಾಗ, ಮುಖ್ಯ ನ್ಯಾಯಮೂರ್ತಿ ಬೊಬ್ಡೆ, ’ಜನರನ್ನು ಪ್ರಚೋದಿಸುವ ಪರಿಣಾಮವನ್ನು ಹೊಂದಿರುವ ಕಾರ್ಯಕ್ರಮಗಳಿವೆ ಎಂಬುದು ನಿಜ. ನೀವು (ಸರ್ಕಾರ) ಇದರ ಬಗ್ಗೆ ಏನನ್ನೂ ಮಾಡುವುದಿಲ್ಲ. ಅದು ಎರಡೂ ರೀತಿಯಲ್ಲಿ ಸಂಭವಿಸಬಹುದು. ಪ್ರಚೋದನೆಯು ಎರಡೂ ಸಮುದಾಯದ ವಿರುದ್ಧವಾಗಿರಬಹುದು’ ಎಂದು ತಿಳಿಸಿದರು.

ಪ್ರತಿಭಟನಾಕಾರ ರೈತರು ನಡೆಸಿದ ಟ್ರ್ಯಾಕ್ಟರ್ ರ್‍ಯಾಲಿಯ ಹಿಂಸಾಚಾರದ ನಂತರ ಗಣರಾಜ್ಯೋತ್ಸವದಂದು ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ, “ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್‌ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ. ಇವು ಎಲ್ಲೆಡೆ ಉದ್ಭವಿಸಬಹುದಾದ ಸಮಸ್ಯೆಗಳು” ಎಂದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆಯನ್ನು ಸರ್ಕಾರ ಪರಿಷ್ಕರಿಸಬೇಕೆಂದು ನ್ಯಾಯಾಲಯ ಬಯಸಿದೆ ಎಂದು ನ್ಯಾಯಾಲಯ ಹೇಳಿದೆ. “ಕಾನೂನಿನಲ್ಲಿ ಕೇವಲ ಒಂದು ಸಾಲು ಸೇರಿಸುವುದರಿಂದ ಇದನ್ನು ಮಾಡಬಹುದು” ಎಂದು ನ್ಯಾಯಾಧೀಶರು ಹೇಳಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ಸಂದರ್ಭಗಳಲ್ಲಿ ಅಂತಹ ಟೆಲಿವಿಷನ್ ಚಾನೆಲ್ ವಿರುದ್ಧ ಕ್ರಮ ಕೈಗೊಂಡಿದ್ದು, ನ್ಯಾಯಾಲಯದ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸುತ್ತೇವೆ ಎಂದರು.

“ಸರ್ಕಾರದ ಅಧಿಕಾರವನ್ನು ಎಷ್ಟು ಪ್ರಕರಣಗಳಲ್ಲಿ ಬಳಸಲಾಗಿದೆ ಎಂಬುದರ ಕುರಿತು ನಾವು ವಿವರಗಳನ್ನು ನೀಡಬಹುದು. ಆದರೆ ಲೈವ್ ಚಾಟ್ ಶೋನಲ್ಲಿ ಯಾವುದೇ ನಿಯಂತ್ರಣವಿಲ್ಲ, ಯಾರಾದರೂ ಪ್ರಚೋದನತ್ಮಕವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಒಂದು ತಂಡ ರಚಿಸಲಾಗಿದೆ, ಇದು ಮೇಲ್ವಿಚಾರಣೆ ನಡೆಸುತ್ತಿದೆ ಮತ್ತು ಕ್ರಮ ಕೈಗೊಂಡಿದೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರಸಾರವನ್ನು ನಿಲ್ಲಿಸಿದ್ದೇವೆ “ಎಂದು ತುಷಾರ್ ಮೆಹ್ತಾ ಹೇಳಿದರು.

ಇದನ್ನೂ ಓದಿ: ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...