Homeಮುಖಪುಟಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ’ ಎಂದು ಸಕಾರಕ್ಕೆ ಸುಪ್ರಿಂಕೋರ್ಟ್ ಚಾಟಿ ಬೀಸಿದೆ.

- Advertisement -
- Advertisement -

ಜನರನ್ನು ಹಿಂಸಾಚಾರಕ್ಕೆ ಪ್ರೇರೇಪಿಸುವ ದೂರದರ್ಶನ ಕಾರ್ಯಕ್ರಮಗಳು ಮತ್ತು ಸುದ್ದಿಗಳನ್ನು ಸಕ್ರಿಯವಾಗಿ ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸರ್ಕಾರಕ್ಕೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಬಿಗಿಗೊಳಿಸುವಂತೆ ಸೂಚಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪ್ರಚೋದನೆಯ ತಡೆಗಟ್ಟುವಿಕೆ ಒಂದು ಪ್ರಮುಖ ಭಾಗವಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನನ್ನೂ ಮಾಡಿಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಈ ವಿಷಯದ ಬಗ್ಗೆ ಹಲವಾರು ವಿವಾದಗಳು ಘಟಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಮಾತನ್ನು ಹೇಳಿದೆ.

“ನ್ಯಾಯಯುತ ಮತ್ತು ಸತ್ಯವಾದ ವರದಿಗಾರಿಕೆ ಒಂದು ಸಮಸ್ಯೆಯಲ್ಲ. ಇತರರನ್ನು ಕೆರಳಿಸುವ ರೀತಿಯಲ್ಲಿ ಅದನ್ನು ಯೋಜಿಸಿದಾಗ ಅದು ಒಂದು ಸಮಸ್ಯೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ಕಳೆದ ವರ್ಷ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯ ಕುರಿತ ಮಾಧ್ಯಮ ಪ್ರಸಾರಕ್ಕೆ ಸಂಬಂಧಿಸಿದಂತೆ ಜಮಿಯತ್ ಉಲೆಮಾ-ಐ-ಹಿಂದ್, ಪೀಸ್ ಪಾರ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಲಯವು, ಸರ್ಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಬ್ರಾಡ್‌ಕಾಸ್ಟಿಂಗ್ ಅಸೋಸಿಯೇಷ್‌ನಗಳಿಗೆ ನೋಟಿಸ್ ನೀಡಿದೆ. ತಬ್ಲೀಘೀ ಜಮಾಅತ್‌ ಸಭೆಯನ್ನು ಮಾಧ್ಯಮಗಳ ಒಂದು ಭಾಗವು ಕೋಮುವಾದೀಕರಿಸಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

’ಇಂತಹ ಕೆಲವು ಸಂದರ್ಭಗಳಲ್ಲಿ ಪ್ರಸಾರವನ್ನು ನಿಲ್ಲಿಸಿದೆ’ ಎಂದು ಕೇಂದ್ರ ವಾದಿಸಿದಾಗ, ಮುಖ್ಯ ನ್ಯಾಯಮೂರ್ತಿ ಬೊಬ್ಡೆ, ’ಜನರನ್ನು ಪ್ರಚೋದಿಸುವ ಪರಿಣಾಮವನ್ನು ಹೊಂದಿರುವ ಕಾರ್ಯಕ್ರಮಗಳಿವೆ ಎಂಬುದು ನಿಜ. ನೀವು (ಸರ್ಕಾರ) ಇದರ ಬಗ್ಗೆ ಏನನ್ನೂ ಮಾಡುವುದಿಲ್ಲ. ಅದು ಎರಡೂ ರೀತಿಯಲ್ಲಿ ಸಂಭವಿಸಬಹುದು. ಪ್ರಚೋದನೆಯು ಎರಡೂ ಸಮುದಾಯದ ವಿರುದ್ಧವಾಗಿರಬಹುದು’ ಎಂದು ತಿಳಿಸಿದರು.

ಪ್ರತಿಭಟನಾಕಾರ ರೈತರು ನಡೆಸಿದ ಟ್ರ್ಯಾಕ್ಟರ್ ರ್‍ಯಾಲಿಯ ಹಿಂಸಾಚಾರದ ನಂತರ ಗಣರಾಜ್ಯೋತ್ಸವದಂದು ಇಂಟರ್ನೆಟ್ ಸ್ಥಗಿತಗೊಳಿಸಿದ ಬಗ್ಗೆ ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ, “ರೈತರ ರ್‍ಯಾಲಿಯಿಂದಾಗಿ ನೀವು ಇಂಟರ್ನೆಟ್‌ ಅನ್ನು ಸ್ಥಗಿತಗೊಳಿಸಿದ್ದೀರಿ. ನಿಮ್ಮ ಗಮನ/ಆದ್ಯತೆ ರೈತರ ಮೇಲೆ ಇಲ್ಲ, ಆದರೆ ನೀವು ಇಂಟರ್ನೆಟ್ ಮೊಬೈಲ್ ಅನ್ನು ಸ್ಥಗಿತ ಮಾಡಿದ್ದಿರಿ. ಇವು ಎಲ್ಲೆಡೆ ಉದ್ಭವಿಸಬಹುದಾದ ಸಮಸ್ಯೆಗಳು” ಎಂದರು.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆಯನ್ನು ಸರ್ಕಾರ ಪರಿಷ್ಕರಿಸಬೇಕೆಂದು ನ್ಯಾಯಾಲಯ ಬಯಸಿದೆ ಎಂದು ನ್ಯಾಯಾಲಯ ಹೇಳಿದೆ. “ಕಾನೂನಿನಲ್ಲಿ ಕೇವಲ ಒಂದು ಸಾಲು ಸೇರಿಸುವುದರಿಂದ ಇದನ್ನು ಮಾಡಬಹುದು” ಎಂದು ನ್ಯಾಯಾಧೀಶರು ಹೇಳಿದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ಸಂದರ್ಭಗಳಲ್ಲಿ ಅಂತಹ ಟೆಲಿವಿಷನ್ ಚಾನೆಲ್ ವಿರುದ್ಧ ಕ್ರಮ ಕೈಗೊಂಡಿದ್ದು, ನ್ಯಾಯಾಲಯದ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸುತ್ತೇವೆ ಎಂದರು.

“ಸರ್ಕಾರದ ಅಧಿಕಾರವನ್ನು ಎಷ್ಟು ಪ್ರಕರಣಗಳಲ್ಲಿ ಬಳಸಲಾಗಿದೆ ಎಂಬುದರ ಕುರಿತು ನಾವು ವಿವರಗಳನ್ನು ನೀಡಬಹುದು. ಆದರೆ ಲೈವ್ ಚಾಟ್ ಶೋನಲ್ಲಿ ಯಾವುದೇ ನಿಯಂತ್ರಣವಿಲ್ಲ, ಯಾರಾದರೂ ಪ್ರಚೋದನತ್ಮಕವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಒಂದು ತಂಡ ರಚಿಸಲಾಗಿದೆ, ಇದು ಮೇಲ್ವಿಚಾರಣೆ ನಡೆಸುತ್ತಿದೆ ಮತ್ತು ಕ್ರಮ ಕೈಗೊಂಡಿದೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರಸಾರವನ್ನು ನಿಲ್ಲಿಸಿದ್ದೇವೆ “ಎಂದು ತುಷಾರ್ ಮೆಹ್ತಾ ಹೇಳಿದರು.

ಇದನ್ನೂ ಓದಿ: ’ಮೋದಿಯೊಂದಿಗೆ ಯುವಶಕ್ತಿ’ ಹ್ಯಾಶ್‌ಟ್ಯಾಗ್‌ ಟ್ರೆಂಡ್‌‌ ಮಾಡುವಂತೆ ವಿವಿಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...