Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...