Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...