Homeಮುಖಪುಟʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? - ಗ್ರೌಂಡ್‌ ರಿಪೋರ್ಟ್‌

ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

- Advertisement -
- Advertisement -

(ಗೌರಿ ಮೀಡಿಯಾದ ಮೂವರು ಪತ್ರಕರ್ತೆಯರ – ಸ್ವಾತಿ, ಮಮತಾ ಮತ್ತು ಕಾವ್ಯ – ತಂಡ ಮತ್ತು ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದ ಕಡೆಯಿಂದ ಬಂದಿರುವ ನೇರ ಮಾಹಿತಿ)

1. ಸಿಂಘುವಿನಲ್ಲಿ ಏನಾಯಿತು?
ಸುಮಾರು 30 ಜನ (ಸ್ಥಳೀಯರೆಂದು ಗೋದಿ ಮೀಡಿಯಾ ಹೇಳಿದ್ದು) ಪೊಲೀಸ್ ಪ್ರೊಟೆಕ್ಷನ್‌ನಲ್ಲಿ ಟಿವಿ ಕ್ಯಾಮೆರಾಗಳನ್ನೂ ಕರೆತಂದು ಸುಮಾರು ಒಂದು ಕಿ.ಮೀ ದೂರದಲ್ಲಿ ಒಂದು ಪ್ರೊಟೆಸ್ಟ್ ಪೋಸ್ ಕೊಟ್ಟು ಹೋಗಿದ್ದಾರೆ. ಅಲ್ಲಿರುವ ಸುಮಾರು 50,000 ಜನರಿಗೆ ಇದರ ಸುಳಿವೇ ಇಲ್ಲ. ಯಾವ ಸ್ಥಳೀಯರೂ ಇದನ್ನು ವಿರೋಧಿಸಿಲ್ಲ. ಏಕೆಂದರೆ ಸುಮಾರು 12 ಕಿ.ಮೀ.ವರೆಗೆ ಈ ಪ್ರತಿಭಟನಾಕಾರರು ಗುಂಪಾಗಿ ಇದ್ದಾರೆ. ವಾಸ್ತವವೇನೆಂದರೆ ಇಲ್ಲಿಗೆ ಬಂದು ಇದರ ವಿರುದ್ಧವೇ ಪ್ರತಿಭಟನೆ ಮಾಡಲು ಹೆದರುವಷ್ಟು ಇಲ್ಲಿನ ಸಂಖ್ಯೆ ಇದೆ. ಪಂಜಾಬಿ ಯುವಜನರಿಂದ ಈ ಪ್ರದೇಶ ತುಂಬಿ ಹೋಗಿದೆ.

ಇದನ್ನೂ ಓದಿ: ಹರಿಯಾಣದ ಹಳ್ಳಿ ಹಳ್ಳಿಯಿಂದ ತೀರ್ಮಾನ: ರಾತ್ರಿಯೇ ದೆಹಲಿ ಗಡಿಗಳಿಗೆ ಹೋಗಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧಾರ

2. ಟಿಕ್ರಿಯಲ್ಲಿ ಏನಾಯಿತು?
ಇಲ್ಲಿಯೂ 40,000ದಷ್ಟು ಜನರಿದ್ದಾರಾದರೂ ಅವರು 25 ಕಿ.ಮೀ.ಗಳಷ್ಟು ಜಾಗದಲ್ಲಿ ಚದುರಿ ಹೋಗಿದ್ದಾರೆ. ಹಾಗಾಗಿ ಅಲ್ಲಲ್ಲಿ ಅವರ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. (ಸ್ವತಃ ನಮ್ಮ ತಂಡ ಸಂದರ್ಶನಕ್ಕಾಗಿ ಟಿಕ್ರಿ ಬಾರ್ಡರ್ ಮೆಟ್ರೋ ಸ್ಟೇಷನ್‌ನಿಂದ ಸ್ವಲ್ಪ ದೂರದ ಒಂದು ಮನೆಗೆ ತೆರಳಿದ್ದರು. ಅಲ್ಲಿ ಬಂದೂಕುಧಾರಿ ಗೂಂಡಾಗಳು ಹೋಗಿ ಹೆದರಿಸಿದ್ದರು. ಈ ಬಗ್ಗೆ ಪ್ರತ್ಯೇಕ ಸ್ಟೋರಿ ಬರಲಿದೆ). ಆದರೆ ಅಂಥದ್ದೇನೂ ಆಗಿಲ್ಲ. ಇಡೀ ಟಿಕ್ರಿ ಬಾರ್ಡರ್ ಸುರಕ್ಷಿತವಾಗಿದೆ.

3. ಘಾಜಿಪುರ ಬಾರ್ಡರ್’ನಲ್ಲಿ ಏನಾಯಿತು?
ಇದು ಉತ್ತರ ಪ್ರದೇಶದ ಭಾಗ. ಇಲ್ಲಿ ಪೊಲೀಸರು ಖಾಲಿ ಮಾಡಬೇಕೆಂದು ಅಲ್ಟಿಮೇಟಂ ಕೊಟ್ಟಿದ್ದಲ್ಲದೇ ನೀರು ಕಟ್ ಮಾಡಿದ್ದರು. ಮೊಬೈಲ್ ಟಾಯ್ಲೆಟ್‌ಗಳನ್ನು ಎತ್ತಿಕೊಂಡು ಹೋಗಿಬಿಟ್ಟರು. ಒಂದು ಹಂತದಲ್ಲಿ ಶಾಂತಿಯುತವಾಗಿ ಎಲ್ಲರೂ ಬಂಧನಕ್ಕೊಳಗಾಗೋಣ ಎಂಬ ನಿಲುವಿಗೆ ಬರಬಹುದು ಎಂದು ಕಾಣುತ್ತಿತ್ತು. ಆದರೆ ಯಾವಾಗ ಸ್ಥಳೀಯ ಬಿಜೆಪಿ ಎಂಎಲ್‌ಎ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಬಂದು ನೇರವಾಗಿ ಪ್ರತಿಭಟನಾಕಾರರನ್ನು ಎಬ್ಬಿಸಲು ಪ್ರಯತ್ನಿಸಿದರೋ, ಹಾಗೂ ಕೆಲವರು ನೇರವಾಗಿ ವೇದಿಕೆ ಏರಲು ಹೊರಟರೋ ಇಡೀ ಸನ್ನಿವೇಶ ಬದಲಾಯಿತು. ಬಿಕೆಯು ಟಿಕಾಯಿತ್ ನಾಯಕ ರಾಕೇಶ್ ಟಿಕಾಯಿತ್ ಮೈಕ್ ಎತ್ತಿಕೊಂಡು ಮಾಡಿದ 30 ನಿಮಿಷಗಳ ಭಾಷಣ ಇದೀಗ ವೈರಲ್.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಮ್ಮ ಮೇಲೆ ಗುಂಡು ಹಾರಿಸಲಿ, ನಾನಿಲ್ಲೇ ನೇಣು ಹಾಕಿಕೊಳ್ಳುತ್ತೇನೆ, ಆದರೆ ಸತ್ಯಾಗ್ರಹದ ಜಾಗ ಖಾಲಿ ಮಾಡಲ್ಲ ಎಂದು ರಾಕೇಶ್ ಮಾಡಿದ ಭಾಷಣ ಸಂಚಲನ ಮೂಡಿಸಿತು. ಸ್ವಲ್ಪ ಹೊತ್ತಿನಲ್ಲಿ ರಾಕೇಶ್ ಟಿಕಾಯಿತ್ ಅವರ ಊರಿನ ಮನೆಯ ಮುಂದೆ ಸಾವಿರಾರು ಜನರು ಸೇರಿದರು ಮತ್ತು 10.45ರ ಹೊತ್ತಿಗೆ ಅವರ ಮೊದಲ ಗುಂಪು ಘಾಜಿಪುರ ಸೇರಿಯಾಗಿತ್ತು. ಬೆಳಗಿನ ಹೊತ್ತಿಗೆ 10,000 ಜನರಾದರೂ ಸೇರಬೇಕು ಎಂದು ಕರೆ ನೀಡಿದ್ದಾರೆ.

ಒಂದೆರಡು ಕಡೆ ನಡೆಯುತ್ತಿದ್ದ ನಿರಂತರ ಸತ್ಯಾಗ್ರಹ ನಿಂತಿದೆ ಎಂಬ ಸುದ್ದಿ ಇದೆ, ಅದೇ ಸಂದರ್ಭದಲ್ಲಿ ಪಂಜಾಬಿನಾದ್ಯAತ ನಡೆಯುತ್ತಿದ್ದ ಧರಣಿ ಸತ್ಯಾಗ್ರಹಗಳಲ್ಲಿ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ತೀರ್ಮಾನ ಮಾಡಿದ್ದಾರೆ. ಹರಿಯಾಣದ ವಿವಿಧ ಹಳ್ಳಿಗಳ ಪಂಚಾಯತ್‌ಗಳಲ್ಲಿ ದೆಹಲಿಗೆ ತೆರಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಚಳವಳಿಯ ತೀವ್ರತೆ ಉತ್ತರ ಪ್ರದೇಶದ ಕಡೆಯೂ ಹೆಚ್ಚುತ್ತಿದೆ. ಸ್ವಲ್ಪ ಹೊತ್ತಿನಲ್ಲಿ ಸಂಪೂರ್ಣ ಸುದ್ದಿ ನೀಡಲಾಗುತ್ತದೆ.


ಇದನ್ನೂ ಓದಿ: ರೈತರ ಹೋರಾಟ; ಜ. 30ರಂದು ರಾಜ್ಯದಲ್ಲೂ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...