Homeಮುಖಪುಟ'#ಮೋದಿ ಒಬ್ಬ ಹೇಡಿ' - ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

- Advertisement -
- Advertisement -

ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿರುವ ಬೆನ್ನಲ್ಲೆ, ಗುರುವಾರ ಮಧ್ಯರಾತ್ರಿಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಮೋದಿಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಟ್ವಿಟರ್‌ನಲ್ಲಿ #FarmerTikaitVsModiDakait, #Modi_Khayar_Hy ಎಂದು ಟ್ರೆಂಡಿಂಗ್ ಆಗುತ್ತಿದೆ.

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಈ ಎರಡೂ ಹ್ಯಾಶ್‌ಟ್ಯಾಗ್‌ಗಳು ಮೊದಲ ಸ್ಥಾನದಲ್ಲಿವೆ. #मोदी_कायर_हैं ಎನ್ನುವ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 9 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು. ಇದನ್ನು ಕೂಡಲೆ ಟ್ವಿಟರ್‌ನಿಂದ ಮರೆಮಾಚಲಾಗಿದೆ. ಆದರೆ ಇದು 6 ಲಕ್ಷ ಇದ್ದಾಗ ತೆಗೆದ ಸ್ಕ್ರೀನ್‌ಶಾಟ್ ಇಲ್ಲಿದೆ.

ಈ ವರದಿ ಬರೆಯುವ ವೇಳೆಗೆ #FarmerTikaitVsModiDakait ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು “ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ” ಎಂದು ಗುರುವಾರ ರಾತ್ರಿ ಘೋಷಿಸಿದ್ದರು.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಈ ಘಟನೆಯಿಂದ ಟ್ವಿಟರ್‌ನಲ್ಲಿ ರಾಕೇಶ್‌ ಟಿಕಾಯತ್ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೋಮ ರಾಮ್ ಮಲ್ಯ ಎಂಬುವವರು ಟ್ವೀಟ್ ಮಾಡಿ, “ನನ್ನ ಹಳ್ಳಿಯವರು ನೀರು ತಂದುಕೊಡುವವರೆಗೆ ನಾನು ನೀರನ್ನೂ ಕುಡಿಯುವುದಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದು ಭಾರತೀಯ ರೈತರಿಗೆ ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ.

ಮಯಂಕ್ ಎಂಬುವವರು ಟ್ವೀಟ್ ಮಾಡಿ, “ಕೆಂಪುಕೋಟೆಯ ಬಳಿ ನಡೆದ ಯೋಜಿತ ಪಿತೂರಿಯಿಂದ ರೈತರ ಹೋರಾಟವನ್ನು ಮಣಿಸಬಹುದು ಎಂದು ಅವರು ಭಾವಿಸಿದ್ದರು. ಈಗ ಅವರಿಗೆ ಒಗ್ಗಟ್ಟಿನ ಅರ್ಥ ಮತ್ತು ರೈತರ ಶಕ್ತಿಯ ಬಗ್ಗೆ ತಿಳಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ರಾಮ್ ಲಖನ್ ಸೆಹ್ರಾ ಟ್ವೀಟ್ ಮಾಡಿ, “ನೀನು ಇಂದು ಊಟ ಮಾಡುತ್ತಿದ್ದೀಯ ಎಂದರೆ ರೈತರಿಗೆ ಧನ್ಯವಾದ ಹೇಳು” ಎಂದು ಬರೆದುಕೊಂಡಿದ್ದಾರೆ.

ರವ್‌ನೀತ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಪೂರ್ವಜರು ಈ ದೇಶಕ್ಕಾಗಿ ನಿರ್ಮಿಸಿದ್ದವುಗಳನ್ನೆಲ್ಲಾ ಮೋದಿ ‘ಸ್ವಾಹ’ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಸುಭಮ್ ವರ್ಮಾ ಟ್ವೀಟ್ ಮಾಡಿ, “ಗೋದಿ ಮೀಡಿಯಾಗಳು ಇಂತಹ ವೀಡಿಯೋಗಳನ್ನು ತೋರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಡುತ್ತಿರುವವರಿಗೆ ಹೂಗಳಿಂದ ಸ್ವಾಗತ ಕೋರುತ್ತಿರುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...