Homeಮುಖಪುಟಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಇಂದು ಮುಂಜಾನೆ ಮತ್ತೆ ನೀರು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗಿದೆ. ರೈತರು ಎಂದಿನಂತೆ ತಮ್ಮ ನಿತ್ಯ ಕರ್ಮಗಳಲ್ಲಿ ತೊಡಗಿಕೊಂಡಿದ್ದಾರೆ. ಅಡುಗೆ ಮಾಡುವುದು, ಸಣ್ಣ ಸಣ್ಣ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ.

- Advertisement -
- Advertisement -

ಭಾರಿ ಭದ್ರತಾ ಪಡೆ, ಪೊಲೀಸರ ಜಮಾವಣೆಯ ನಂತರವೂ ರೈತರು ಹಿಂದಕ್ಕೆ ಹೋಗಲು ನಿರಾಕರಿಸಿದ ಪರಿಣಾಮ, ನಿನ್ನೆ ಹೆಚ್ಚುವರಿಯಾಗಿ ನಿಯೋಜನೆಗೊಂಡಿದ್ದ ಪೊಲೀಸರು ಶುಕ್ರವಾರ ಮುಂಜಾನೆ ಸ್ಥಳ ಖಾಲಿ ಮಾಡಿದರು ಎಂದು ದಿ ವೈರ್ ಪ್ರತ್ಯಕ್ಷದರ್ಶಿ ವರದಿ ತಿಳಿಸಿದೆ.

ಇದರಿಂದಾಗಿ, ಗುರುವಾರ ರಾತ್ರಿಯೊಳಗೆ ಗಾಜಿಪುರ ಗಡಿಯಿಂದ ಪ್ರತಿಭಟನಾಕಾರರು ಜಾಗ ಖಾಲಿ ಮಾಡಲು ಉತ್ತರಪ್ರದೇಶ ಸರ್ಕಾರ ನೀಡಿದ್ದ ಮೌಖಿಕ ಗಡುವು ವಿಫಲಗೊಂಡಿದೆ. ಲಿಖಿತ ಆದೇಶ ಹೊರಡಿಸಲು ಸುಪ್ರೀಂಕೋರ್ಟ್ ಭಯ ಕಾರಣವಿರಬಹುದು, ಹೀಗಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಬೆದರಿಸುವ ತಂತ್ರ ಹೂಡಲಾಗಿತ್ತು ಎನಿಸುತ್ತದೆ.

ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಗಾಜಿಪುರ ಜಿಲ್ಲಾಧಿಕಾರಿ ನಿನ್ನೆ ಸಾಯಂಕಾಲ ಮೌಖಿಕ ಆದೇಶ ಹೊರಡಿಸಿ, ಗುರುವಾರ ರಾತ್ರಿಯೊಳಗೆ ಜಾಗ ಖಾಲಿ ಮಾಡಲು ರೈತರಿಗೆ ಗಡುವು ನಿಡಿದ್ದರು, ಭಾರಿ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಿ, 144 ಸೆಕ್ಷನ್ ವಿಧಿಸಿದ್ದರು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಭಾಷಣ ಮತ್ತು ಅವರ ಕಣ್ಣೀರು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಗಡಿಗಳತ್ತ ತೆರಳಲು ಪ್ರೇರಣೆಯಾಗಿದೆ.

ರಾತ್ರಿಯಿಡಿ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ವಿದ್ಯುತ್, ನೀರು ಏನಾದರೂ ಕಟ್ ಮಾಡಲಿ, ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಮೂರು ಕಾಯ್ದೆಗಳು ರದ್ದು ಮಾಡುವವರೆಗೂ ನಾವಿಲ್ಲಿಂದ ಕದಲುವುದಿಲ್ಲ ಎಂದು ರೈತ ಪ್ರತಿಭಟನಾಕಾರರು ತಮ್ಮ ಬಿಗಿ ಪಟ್ಟನ್ನು ಸಡಿಲಿಸದ ಪರಿಣಾಮ ಹೆಚ್ಚುವರಿಯಾಗಿ ನಿಯೋಜಿತಗೊಂಡಿದ್ದ ಭದ್ರತಾ ಪಡೆಗಳು, ಪೊಲೀಸರು ಇವತ್ತು ಮುಂಜಾನೆ ಸ್ಥಳ ಖಾಲಿ ಮಾಡಲು ಶುರು ಮಾಡಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ನನ್ನತ್ರ ಯಾವುದು ಜಮೀನ್ ಇಲ್ಲ. ಆದರೆ ನನ್ನ ಆತ್ಮಾಭಿಮಾನಕ್ಕಾಗಿ ನಾನಿಲ್ಲಿರುವೆ. ಹೋರಾಟದ ಕೊನೆಯವರೆಗೂ ನಾನು ಇಲ್ಲೇ ಇರುವೆ ಎಂದು ಮಹೇಂದರ್ ಸಿಂಗ್, (ಗೊರ್ನೆಕುರ್ದ್, ಪಂಜಾಬ್) ತಿಳಿಸಿದ್ದಾರೆ.

ಇಂದು ಮುಂಜಾನೆ ಮತ್ತೆ ನೀರು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗಿದೆ. ರೈತರು ಎಂದಿನಂತೆ ತಮ್ಮ ನಿತ್ಯ ಕರ್ಮಗಳಲ್ಲಿ ತೊಡಗಿಕೊಂಡಿದ್ದಾರೆ. ಅಡುಗೆ ಮಾಡುವುದು, ಸಣ್ಣ ಸಣ್ಣ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ರೈತರು “ಗೋದಿ ಮೀಡಿಯಾಗಳು ಮೋದಿ ಹೇಳಿದಂತೆ ಕೇಳಿ ಸುಳ್ಳು ವರದಿ ಮಾಡುತ್ತಿದ್ದಾರೆ. ಆದರೆ ನಾವು ಇಲ್ಲಿಂದ ಕದಲುವುದಿಲ್ಲ. ನಮ್ಮ ಹಕ್ಕುಗಳನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...