Homeಮುಖಪುಟಟಿಕ್ರಿ ಗಡಿಯಲ್ಲಿ ಗೌರಿ ಮೀಡಿಯಾ ತಂಡಕ್ಕೆ ಪಿಸ್ತೂಲ್‌ ತೋರಿಸಿ ಹಲ್ಲೆ ನಡೆಸುವ ಬೆದರಿಕೆ!

ಟಿಕ್ರಿ ಗಡಿಯಲ್ಲಿ ಗೌರಿ ಮೀಡಿಯಾ ತಂಡಕ್ಕೆ ಪಿಸ್ತೂಲ್‌ ತೋರಿಸಿ ಹಲ್ಲೆ ನಡೆಸುವ ಬೆದರಿಕೆ!

- Advertisement -
- Advertisement -

ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಚಿತ್ರ ತಂಡವೊಂದನ್ನು ಸಂದರ್ಶನ ಮಾಡಲು ಹೋಗಿದ್ದ ಗೌರಿ ಮೀಡಿಯಾ ತಂಡದ ಸದಸ್ಯರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆಸುವ ಬೆದರಿಕೆ ಒಡ್ಡಲಾಗಿದೆ.

ರೈತ ಹೋರಾಟದ ಸಾಕ್ಷ್ಯಚಿತ್ರ ನಿರ್ಮಿಸಲೆಂದು ದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಪೆಡೆಸ್ಟ್ರಿಯನ್‌ ಪಿಕ್ಚರ್ಸ್‌ ತಂಡ ಗಣರಾಜ್ಯೋತ್ಸವದ ದಿನ ಕೆಂಪು ಕೋಟೆಯ ಬಳಿ ಹಲ್ಲೆಗೆ ಒಳಗಾಗಿತ್ತು. ಇವರನ್ನು ಸಂದರ್ಶನ ಮಾಡಲು ತೆರಳಿದ್ದ ಗೌರಿ ಮೀಡಿಯಾ ತಂಡದ ಸ್ವಾತಿ, ಮಮತ, ಕಾವ್ಯ ಮತ್ತು ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರಿಗೆ ಬೆದರಿಕೆ ಒಡ್ಡಲಾಗಿದೆ.

ಕಳೆದ 25 ದಿನಗಳಿಂದ ದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಪೆಡಿಸ್ಟ್ರಿಯನ್‌ ಪಿಕ್ಚರ್ಸ್‌ ತಂಡ ಗಾಯಗೊಂಡ ಬಳಿಕ, ಹರ್ಯಾಣ ಗಡಿಯಲ್ಲಿರುವ ನಯಾ ಗಾಂವ್‌ನಲ್ಲಿ ತಂಗಿದ್ದರು. ಗೌರಿ ಮೀಡಿಯಾ ತಂಡ ಅವರ ಸಂದರ್ಶನ ಮುಗಿಸಿ ಹೊರಡುವಾಗ ಅಲ್ಲಿಗೆ ಧಾವಿಸಿದ ಗೂಂಡಾಗಳ ಗುಂಪು ಪಿಸ್ತೂಲು ತೋರಿಸಿ ತಂಡದ ಸದಸ್ಯರು, ಕುಟುಂಬದ ಸದಸ್ಯರಿಗೆ ಬೆದರಿಕೆ ಒಡ್ಡಿದ್ದಾರೆ.

ತಂಡದಲ್ಲಿದ್ದ ಗೌರಿಲಂಕೇಶ್‌ನ್ಯೂಸ್‌.ಕಾಂನ ಸ್ವಾತಿ ಶುಕ್ಲಾ, ‘ಕೋಣೆಯೊಳಗೆ ನುಗ್ಗಿದ 5-6 ಗೂಂಡಾಗಳು ಬೆದರಿಸಿದೆರು. ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ನೇಣು ಹಾಕಿಕೊಂಡು ಸಾಯಿರಿ ಎಂದರು. ಜೊತೆಗೆ ಇದ್ದ ಭಾರತ್ ಕಿಸಾನ್‌ ಯೂನಿಯನ್‌ನ ಮಾಧ್ಯಮದ ಸದಸ್ಯರು ಅವರೊಂದಿಗೆ ಮಾತನಾಡಲು ಯತ್ನಿಸಿದರು. ಆದರೆ, ಬೆದರಿಸಲು ಬಂದವರು ಮಾತಿಗೆ ಅವಕಾಶ ನೀಡಲಿಲ್ಲ ಎಂದು ಘಟನೆ ವಿವರಿಸಿದರು.

ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸಂಯುಕ್ತ ಕಿಸಾನ್‌ ಮೋರ್ಚಾ ಸದಸ್ಯರು ಸ್ಥಳಕ್ಕೆ ಆಗಮಿಸಿ ಮಾಧ್ಯಮ ತಂಡಕ್ಕೆ ರಕ್ಷಣೆ ಒದಗಿಸಿದರು.

ಗಣರಾಜ್ಯೊತ್ಸವ ದಿನದಂದು ಬಿಜೆಪಿ-ಸಂಘ ಪರಿವಾರ ಪ್ರೇರಿತ ಪಿತೂರಿಯಿಂದಾಗಿ ಹಿಂಸಾಚಾರ ನಡೆದಿದ್ದು, ಮಾಧ್ಯಮಗಳ ಮೂಲಕ ರೈತ ಹೋರಾಟಕ್ಕೆ ಮಸಿ ಬಳಿಸುವ, ದೇಶದ ಜನರಲ್ಲಿ ತಪ್ಪು ಮಾಹಿತಿ ಹರಡುವ ಪ್ರಯತ್ನ ಮಾಡುತ್ತಲೇ ಇದೆ. ಪರ್ಯಾಯ ಮಾಧ್ಯಮಗಳು, ಮುಖ್ಯವಾಹಿನಿ ಮಾಧ್ಯಮಗಳ ಪಕ್ಷಪಾತ ಧೋರಣೆಯನ್ನು ಅನಾವರಣ ಮಾಡುತ್ತಿರುವ ಪರ್ಯಾಯ ಮಾಧ್ಯಮಗಳನ್ನು ಬೆದರಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂಬ ಅಭಿಪ್ರಾಯ ರೈತ ನಾಯಕರು ವ್ಯಕ್ತಪಡಿಸಿದರು.


ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...