Homeಮುಖಪುಟಹೆಚ್ಚುತ್ತಿರುವ ಬೆಂಬಲ - ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಚೌಧರಿ ಸಾಹಿಬ್ ಅಜಿತ್‌ಸಿಂಗ್

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನಡೆದ ಪಿತೂರಿಯಿಂದ ಕೆಲವು ಅಹಿತಕರ ಘಟನೆಗಳು ನಡೆದಿತ್ತು. ಇದರಿಂದ ಹೋರಾಟಕ್ಕೆ ಹಿನ್ನಡೆಯಾಗಿದೆಯೆಂದು ಕೆಲವರು ಭಾವಿಸಿದ್ದರು. ಆದರೆ ಇದು ಸುಳ್ಳು ಎಂಬುದನ್ನು ದೇಶಕ್ಕೆ ತಿಳಿಸಲು ರೈತರಿಗೆ ಹೆಚ್ಚಿನ ಸಮಯ ಬೇಕಾಗಲಿಲ್ಲ.

ಉತ್ತರಪ್ರದೇಶ ಮತ್ತು ದೆಹಲಿ ಗಡಿಗಳಲ್ಲಿರುವ ರೈತರನ್ನು ಖಾಲಿ ಮಾಡಿಸಲು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡಿದ್ದರು. ಆದರೆ, ರೈತರ ಹೋರಾಟ ದೆಹಲಿ ಗಡಿಗಳಲ್ಲಿ ಇನ್ನೂ ತೀವ್ರಗೊಳ್ಳುತ್ತಿದ್ದು, ಬೆಂಬಲದ ಮಹಾಪೂರವೇ ಹರಿದು ಬರುತ್ತಿದೆ. ಗುರುವಾರ ಮಧ್ಯರಾತ್ರಿಯೇ ಹರಿಯಾಣ ಮತ್ತು ಉತ್ತರಪ್ರದೇಶದ ಹತ್ತಾರು ಹಳ್ಳಿಯ ಜನರು ಗಡಿಗಳಿಗೆ ಆಗಮಿಸಿ ರೈತ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ ಎಂದು ಘೋಷಿಸಿದ್ದಾರೆ.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ…

“ಸುಪ್ರೀಂ ಕೋರ್ಟ್ ಶಾಂತಿಯುತ ಧರಣಿಯನ್ನು ಸಮರ್ಥಿಸಿದೆ. ಗಾಜಿಪುರ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಇದರ ಹೊರತಾಗಿಯೂ, ಸರ್ಕಾರವು ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ಇದು ಉತ್ತರ ಪ್ರದೇಶ ಸರ್ಕಾರದ ಮುಖ” ಎಂದು ರಾಕೇಶ್ ಟಿಕಾಯತ್‌ ಕಿಡಿಕಾರಿದ್ದಾರೆ.

ಇನ್ನು, ಮಾಜಿ ಕೇಂದ್ರ ಸಚಿವ, ರಾಷ್ಟ್ರೀಯ ಲೋಕದಳ್ ಮುಖ್ಯಸ್ಥ ಅಜಿತ್‌ಸಿಂಗ್ ಚೌಧರಿ ಬಿಕೆಯು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಿತ್‌ಸಿಂಗ್ ಪುತ್ರ ಮತ್ತು ಆರ್‌ಎಲ್‌ಡಿ ಉಪಾಧ್ಯಕ್ಷ ಜಯಂತ್ ಚೌಧರಿ, ಅದರಲ್ಲಿ ಅಜಿತ್‌ಸಿಂಗ್ ಸಂದೇಶವನ್ನು ಹಾಕಿದ್ದಾರೆ. “ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಇದು ಚೌಧರಿ ಸಾಹಿಬ್ (ಅಜಿತ್‌ಸಿಂಗ್) ಅವರ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಅಜಿತ್‌ಸಿಂಗ್ ಅವರು ರಾಕೇಶ್ ಟಿಕಾಯತ್ ಮತ್ತು ಅವರ ಸಹೋದರ ನರೇಶ್ ಟಿಕಾಯತ್ ಅವರೊಂದಿಗೆ ಮಾತನಾಡಿದ್ದು, ಬಿಕೆಯು ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಿನ್ನೆ ಯುಪಿ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಸ್ಥಳದಿಂದ ಎತ್ತಂಗಡಿ ಮಾಡಲು ಯುಪಿ ಸರ್ಕಾರ ಯತ್ನಿಸಿದ ನಂತರ ಉತ್ತರ ಭಾತರದ ಪ್ರಮುಖ ರಾಜ್ಯಗಳಲ್ಲಿ ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್‌ಗಳು ಈಗ ಗಾಜಿಪುರ ಮತ್ತು ಸಿಂಘು ಗಡಿ ತಲುಪಿದ್ದಾರೆ.

ಟಿಕಾಯತ್ ಅವರ ರಾತ್ರಿಯ ಭಾವನಾತ್ಮಕ ಭಾಷಣವು ಸಾಕಷ್ಟು ಜನಪ್ರಿಯವಾಗಿದ್ದು, ರೈತ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...