Homeಮುಖಪುಟಹೆಚ್ಚುತ್ತಿರುವ ಬೆಂಬಲ - ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಚೌಧರಿ ಸಾಹಿಬ್ ಅಜಿತ್‌ಸಿಂಗ್

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನಡೆದ ಪಿತೂರಿಯಿಂದ ಕೆಲವು ಅಹಿತಕರ ಘಟನೆಗಳು ನಡೆದಿತ್ತು. ಇದರಿಂದ ಹೋರಾಟಕ್ಕೆ ಹಿನ್ನಡೆಯಾಗಿದೆಯೆಂದು ಕೆಲವರು ಭಾವಿಸಿದ್ದರು. ಆದರೆ ಇದು ಸುಳ್ಳು ಎಂಬುದನ್ನು ದೇಶಕ್ಕೆ ತಿಳಿಸಲು ರೈತರಿಗೆ ಹೆಚ್ಚಿನ ಸಮಯ ಬೇಕಾಗಲಿಲ್ಲ.

ಉತ್ತರಪ್ರದೇಶ ಮತ್ತು ದೆಹಲಿ ಗಡಿಗಳಲ್ಲಿರುವ ರೈತರನ್ನು ಖಾಲಿ ಮಾಡಿಸಲು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡಿದ್ದರು. ಆದರೆ, ರೈತರ ಹೋರಾಟ ದೆಹಲಿ ಗಡಿಗಳಲ್ಲಿ ಇನ್ನೂ ತೀವ್ರಗೊಳ್ಳುತ್ತಿದ್ದು, ಬೆಂಬಲದ ಮಹಾಪೂರವೇ ಹರಿದು ಬರುತ್ತಿದೆ. ಗುರುವಾರ ಮಧ್ಯರಾತ್ರಿಯೇ ಹರಿಯಾಣ ಮತ್ತು ಉತ್ತರಪ್ರದೇಶದ ಹತ್ತಾರು ಹಳ್ಳಿಯ ಜನರು ಗಡಿಗಳಿಗೆ ಆಗಮಿಸಿ ರೈತ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ ಎಂದು ಘೋಷಿಸಿದ್ದಾರೆ.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ…

“ಸುಪ್ರೀಂ ಕೋರ್ಟ್ ಶಾಂತಿಯುತ ಧರಣಿಯನ್ನು ಸಮರ್ಥಿಸಿದೆ. ಗಾಜಿಪುರ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಇದರ ಹೊರತಾಗಿಯೂ, ಸರ್ಕಾರವು ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ಇದು ಉತ್ತರ ಪ್ರದೇಶ ಸರ್ಕಾರದ ಮುಖ” ಎಂದು ರಾಕೇಶ್ ಟಿಕಾಯತ್‌ ಕಿಡಿಕಾರಿದ್ದಾರೆ.

ಇನ್ನು, ಮಾಜಿ ಕೇಂದ್ರ ಸಚಿವ, ರಾಷ್ಟ್ರೀಯ ಲೋಕದಳ್ ಮುಖ್ಯಸ್ಥ ಅಜಿತ್‌ಸಿಂಗ್ ಚೌಧರಿ ಬಿಕೆಯು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಿತ್‌ಸಿಂಗ್ ಪುತ್ರ ಮತ್ತು ಆರ್‌ಎಲ್‌ಡಿ ಉಪಾಧ್ಯಕ್ಷ ಜಯಂತ್ ಚೌಧರಿ, ಅದರಲ್ಲಿ ಅಜಿತ್‌ಸಿಂಗ್ ಸಂದೇಶವನ್ನು ಹಾಕಿದ್ದಾರೆ. “ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಇದು ಚೌಧರಿ ಸಾಹಿಬ್ (ಅಜಿತ್‌ಸಿಂಗ್) ಅವರ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಅಜಿತ್‌ಸಿಂಗ್ ಅವರು ರಾಕೇಶ್ ಟಿಕಾಯತ್ ಮತ್ತು ಅವರ ಸಹೋದರ ನರೇಶ್ ಟಿಕಾಯತ್ ಅವರೊಂದಿಗೆ ಮಾತನಾಡಿದ್ದು, ಬಿಕೆಯು ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಿನ್ನೆ ಯುಪಿ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಸ್ಥಳದಿಂದ ಎತ್ತಂಗಡಿ ಮಾಡಲು ಯುಪಿ ಸರ್ಕಾರ ಯತ್ನಿಸಿದ ನಂತರ ಉತ್ತರ ಭಾತರದ ಪ್ರಮುಖ ರಾಜ್ಯಗಳಲ್ಲಿ ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್‌ಗಳು ಈಗ ಗಾಜಿಪುರ ಮತ್ತು ಸಿಂಘು ಗಡಿ ತಲುಪಿದ್ದಾರೆ.

ಟಿಕಾಯತ್ ಅವರ ರಾತ್ರಿಯ ಭಾವನಾತ್ಮಕ ಭಾಷಣವು ಸಾಕಷ್ಟು ಜನಪ್ರಿಯವಾಗಿದ್ದು, ರೈತ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...