Homeಮುಖಪುಟ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

ಜೆಜೆಪಿ ನಾಯಕ, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಕೂಡ ರೈತರಿಗೆ ಬೆಂಬಲವಾಗಿ ಬಹಿರಂಗವಾಗಿ ಹೊರಬರಬೇಕು ಎಂದು ಮಜ್ರಾ ಒತ್ತಾಯಿಸಿದ್ದಾರೆ.

- Advertisement -
- Advertisement -

ಹರಿಯಾಣ ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯ ಸಂಸದೀಯ ಕಾರ್ಯದರ್ಶಿ ರಾಂಪಾಲ್ ಮಜ್ರಾ ಅವರು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಮತ್ತು ರೈತ ಹೋರಾಟವನ್ನು ಬೆಂಬಲಿಸಿ ಗುರುವಾರ ಪಕ್ಷ ತೊರೆದಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರೊಂದಿಗೆ ನಾನು ಸಂಪೂರ್ಣವಾಗಿ ನಿಲ್ಲುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮಾತ್ರವಲ್ಲ, ಜಾರಿಗೆ ಬಂದಾಗ ಸಮಾಜದ ಇತರ ವರ್ಗಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಹೇಳಿದ್ದಾರೆ.

ಮೂರು ಬಾರಿ ಶಾಸಕರಾಗಿದ್ದ ಮಜ್ರಾ ಅವರು 2019 ರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಐಎನ್‌ಎಲ್‌ಡಿಯಿಂದ ಬಿಜೆಪಿಗೆ ಸೇರಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲೇ ಅವರು ಕೇಂದ್ರದ ಕೃಷಿ ಮಸೂದೆಗಳನ್ನು “ರೈತ ವಿರೋಧಿ” ಎಂದು ಜರಿದಿದ್ದರು. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಬಗ್ಗೆ ಆತಂಕಗಳು ಶುರುವಾಗಿವೆ ಎಂದಿದ್ದರು.

ಜನವರಿ 26 ರಂದು ರೈತರ ಟ್ರಾಕ್ಟರ್ ರ‍್ಯಾಲಿಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಕೇಂದ್ರ ಸರ್ಕಾರವನ್ನು ದೂಷಿಸಿದ ಮಜ್ರಾ, ರೈತರ ಶಾಂತಿಯುತ ಪ್ರತಿಭಟನೆಯನ್ನು ಹಾಳುಮಾಡಲು ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಹೃದಯಾಘಾತ ಮತ್ತು ರಸ್ತೆ ಅಪಘಾತಗಳು ಸೇರಿದಂತೆ ರೈತರ ಆಂದೋಲನದಲ್ಲಿ 150 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರ ಈವರೆಗೆ ಅವರ ಬಗ್ಗೆ ಒಂದು ಮಾತನ್ನೂ ಹೇಳಿಲ್ಲ ಎಂದು ಮಜ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರಿಗೆ ಬೆಂಬಲವಾಗಿ ನಿಲ್ಲುವ ಐಎನ್‌ಎಲ್‌ಡಿ ಮುಖಂಡ ಅಭಯ್ ಸಿಂಗ್ ಚೌತಲಾ ಅವರ ನಿರ್ಧಾರವನ್ನು ಮಜ್ರಾ ಶ್ಲಾಘಿಸಿದರು.

‘ಇದು ಅಭಯ್ ಅವರ ಧೈರ್ಯಶಾಲಿ ನಿರ್ಧಾರ, ಇದು ರೈತರ ಆಂದೋಲನಕ್ಕೆ ಉತ್ತೇಜನ ನೀಡುತ್ತದೆ. ಅವರ ನಿರ್ಧಾರವನ್ನು ಶ್ಲಾಘಿಸಬೇಕಾಗಿದೆ. ಏಕೆಂದರೆ ಪ್ರಸ್ತುತ ಕಾಲದಲ್ಲಿ ಜನರು ಸರಪಂಚ್ ಅಥವಾ ಜಿಲ್ಲಾ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಸಹ ಸಿದ್ಧರಿಲ್ಲ’ ಎಂದು ಅವರು ಹೇಳಿದರು.

ಸರ್ಕಾರದಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿರುವ ಜೆಜೆಪಿ ನಾಯಕ, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಕೂಡ ಆಂದೋಲನದ ರೈತರಿಗೆ ಬೆಂಬಲವಾಗಿ ಬಹಿರಂಗವಾಗಿ ಹೊರಬರಬೇಕು ಎಂದು ಮಜ್ರಾ ಒತ್ತಾಯಿಸಿದ್ದಾರೆ.

ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಹೊಂದಿರುವ ಮತ್ತು ಹರಿಯಾಣದ ಹಿರಿಯ ನಾಯಕರಲ್ಲಿ ಒಬ್ಬರಾದ ಮಜ್ರಾ, ಯಾವ ಪಕ್ಷಕ್ಕೆ ಸೇರಬೇಕು ಎಂದು ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಹೇಳಿದರು.

ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ನನ್ನ ಬೆಂಬಲಿಗರು, ಸ್ನೇಹಿತರು ಮತ್ತು ಹಿತೈಷಿಗಳನ್ನು ಸಂಪರ್ಕಿಸುತ್ತೇನೆ ಎಂದು ಅವರು ಹೇಳಿದರು.


ಇದನ್ನೂ ಓದಿ: ‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....