Homeಮುಖಪುಟರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

ರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

- Advertisement -
- Advertisement -

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರೊಡನೆ ಮಾತನಾಡುತ್ತಿರಬೇಕಾದರೆ, ಅವರ ತಲೆ, ಕಿವಿಯ ಮೇಲಿನ ಭಾಗಗಳಲ್ಲಿ ಲೇಸರ್ ಲೈಟ್‍ನಿಂದ ಹೊರಡುವ ರೀತಿಯ ಬೆಳಕು ಬಿದ್ದಿದೆ. ಅತೀ ಸಣ್ಣ ಅವಧಿಯಲ್ಲೇ 7 ಬಾರಿ ಈ ರೀತಿಯ ಬೆಳಕು ಓಡಾಡಿದೆ. ಆ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಪಡೆಯುತ್ತಿದ್ದ ಕ್ಯಾಮೆರಾಗಳಲ್ಲಿ ಇದು ಸ್ಪಷ್ಟವಾಗಿ ಕಂಡಿದೆ. ಇದು ಸ್ನೈಪರ್ ಗನ್‍ನಿಂದ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಆ ರೀತಿಯ ಬೆಳಕು ಬರುತ್ತದೆ ಎಂದು ರಕ್ಷಣಾ ಕೆಲಸದಲ್ಲಿರುವ ಕೆಲವರೂ ಹೇಳಿದ್ದಾರೆಂದು ಉಲ್ಲೇಖಿಸಿ, ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಸುರ್ಜೇವಾಲಾ ಮತ್ತು ಜೈರಾಂ ರಮೇಶ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಹುಲ್ ಗಾಂಧಿಯವರನ್ನು ಹತ್ಯೆಗೈಯ್ಯುವ ಸಂಚು ಆಗಿರಬಹುದು. ಹಾಗಾಗಿ ಅದರ ಕುರಿತು ಉನ್ನತ ಮಟ್ಟದ ತನಿಖೆ ನಡೆದು ಅಂತಹ ಅಪಾಯ ಇಲ್ಲದಂತೆ ಮಾಡಬೇಕು ಎಂದು ಈ ಪತ್ರ ಕೇಳಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯು, ಎಸ್‍ಪಿಜಿ ಮುಖ್ಯಸ್ಥರ ಜೊತೆ ಈ ಕುರಿತು ಚರ್ಚೆ ನಡೆದಿದೆಯೆಂತಲೂ, ಅದು ಯಾರದ್ದೋ ಮೊಬೈಲ್ ಫೋನ್‍ನಿಂದ ಹೊರಟಿರುವ ಬೆಳಕು ಅಷ್ಟೇ ಆಗಿದೆಯೆಂಬ ಅಭಿಪ್ರಾಯವಿದೆ ಎಂದು ಹೇಳಿದೆಯೆಂದು ಎನ್‍ಡಿಟಿವಿ ವರದಿ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ಭದ್ರತೆಯಲ್ಲಿ ತೋರಿಸುತ್ತಿರುವ ಲೋಪದ ಕಾರಣಕ್ಕೇ ಹೀಗೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್‍ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅವಘಡ ಸಂಭವಿಸಿತ್ತು. ವಿಮಾನವು ಸರಿಯಾಗಿ ಲ್ಯಾಂಡ್ ಆಗದೇ, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೂ ಸಹಾ ಹತ್ಯೆಯ ಪ್ರಯತ್ನ ಇರಬಹುದೇ ಎಂಬ ಸಂದೇಹವನ್ನು ಹಲವರು ವ್ಯಕ್ತಪಡಿಸಿದ್ದರು. ನಂತರ ನಾಗರಿಕ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ, ಅದನ್ನು ಅಲ್ಲಗಳೆದಿತ್ತು. ಆಟೋ ಪೈಲಟ್ ಮೋಡ್‍ಗೆ ವಿಮಾನವನ್ನು ಹಾಕಲಾಗಿತ್ತೆಂದೂ, ನಂತರ ಚಾಲಕ ಅದನ್ನು ಮ್ಯಾನ್ಯುಯೆಲ್ ಮೋಡ್‍ಗೆ ಹಾಕಿ ನಿಭಾಯಿಸಿದರೆಂದೂ, ಇದು ಮಾಮೂಲಿಯೆಂತಲೂ ಅದು ಹೇಳಿತ್ತು.

ವಿಡಿಯೋ ನೋಡಿ

ರಾಹುಲ್‍ಗಾಂಧಿಯವರ ತಂದೆ ರಾಜೀವ್‍ಗಾಂಧಿ ಮತ್ತು ಅವರ ಅಜ್ಜಿ ಇಂದಿರಾಗಾಂಧಿಯವರೂ ಅವರ ಮೇಲೆ ನಡೆದ ಹತ್ಯಾಪ್ರಯತ್ನಗಳಿಂದಲೇ ಜೀವ ಕಳೆದುಕೊಂಡಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅವರು ರಾಜಕಾರಣದಿಂದಲೇ ಹೊರಗುಳಿದರೂ ಪರವಾಗಿಲ್ಲ, ವಿದೇಶಕ್ಕೆ ಹೋದರೂ ಪರವಾಗಿಲ್ಲ, ಅವರ ಸುರಕ್ಷತೆ ಮುಖ್ಯ. ಆ ಕುಟುಂಬದಲ್ಲಿ ಮತ್ತೊಂದು ದುರಂತ ನಡೆಯದಿರಲಿ ಎಂಬ ಚರ್ಚೆಯನ್ನು ಹಲವರು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...