Homeಮುಖಪುಟರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ಆದರೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಶಾಂತಿಯುತವಾಗಿ ಹೋರಾಟ ಮುಂದುವರೆಸುವ ಅಚಲ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿವೆ.

- Advertisement -
- Advertisement -

ಕೇಂದ್ರದ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ದೆಹಲಿಯ ಮೂರು ಗಡಿಗಳಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಶಾಂತಿಯುತವಾಗಿ ನಡೆಯುತ್ತ ಬಂದಿರುವ ರೈತ ಪ್ರತಿಭಟನೆಯನ್ನು ಸಂಪೂರ್ಣ ಹಾಳುಗೆಡವಲು ಕೇಂದ್ರ ಸರ್ಕಾರವು ಮೊದಲಿನಿಂದಲು ಸಂಚು ಮಾಡುತ್ತ ಬಂದಿದೆ. ಈಗ ಅದು ದೆಹಲಿಯ ಕೆಂಪುಕೋಟೆಯ ಅಹಿತಕರ ಘಟನೆ ನೆಪವಾಗಿ ಇಟ್ಟುಕೊಂಡು ಅರೆಸೇನಾಪಡೆಗಳು, ಪೊಲೀಸರ ಬಲ ಬಳಸಿ ರೈತರ ಮೆಲೆ ಮುಗಿಬೀಳಲು ಹೊರಟಿದೆ.

ಸಂಕ್ಷಿಪ್ತವಾಗಿ ಈ ಸಂಚಿನ ಕ್ರೊನೊಲಜಿ ಹೀಗಿದೆ.

* ಪಂಜಾಬ್, ಹರಿಯಾಣ, ಉತ್ತರಪ್ರದೇಶ ರಾಜ್ಯಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟಿಸಲು ಹೊರಟಾಗ, ಹೆದ್ದಾರಿಗಳಲ್ಲಿ ಕಂದಕ ತೋಡಲಾಗಿತು. ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಅಡ್ಡ ಹಾಕಲಾಯಿತು. ಜಲಫಿರಂಗಿ, ಆಶ್ರುವಾಯು, ಲಾಠಿ ಚಾರ್ಜ್ ಮೂಲಕ ದೌರ್ಜನ್ಯ ನಡೆಸಿತು.

* ಎಲ್ಲವನ್ನೂ ಭೇದಿಸಿ ರೈತರು ಲಕ್ಷ ಲಕ್ಷ ಸಂಖ್ಯೆಯಲ್ಲಿ ದೆಹಲಿಯ ಸಮೀಪ ಧಾವಿಸುತ್ತಿದ್ದಂತೆ, ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್ ಹೆಸರಿನ ಗೋಡೆಗಳನ್ನು ನಿರ್ಮಿಸಿ ದೆಹಲಿ ಪ್ರವೇಶವನ್ನು ನಿರಾಕರಿಸಿತು.

* ವಿಚಲಿತರಾಗದ ರೈತ ಸಂಘಟನೆಗಳು ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲೇ ಕುಳಿತು ಪ್ರತಿಭಟನೆಗಳನ್ನು ಹಮ್ಮಿಕೊಂಡವು. ದಿನೇ ದಿನೆ ಈ ಹೋರಾಟಕ್ಕೆ ಸಾಮನ್ಯ ನಾಗರಿಕರ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಮಾತುಕತೆಯ ನಾಟಕ ಶುರು ಮಾಡಿತು.

* ಪ್ರತಿ ಮಾತುಕತೆಯಲ್ಲೂ ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ರೈತರನ್ನು ರೊಚ್ಚಿಗೆಬ್ಬಿಸಲು ನೊಡಿತು.

* ಆದರೆ ರೈತರು ಶಾಂತಿ ಕಾಪಾಡಿಕೊಂಡೇ ಬಂದರು. ಗಡಿಗಳಲ್ಲೇ ಕೆಲವರು ಆತ್ಮಹತ್ಯೆ ಮಾಡಿಕೊಂಡರೆ, ಹಲವಾರು ಜನ ಶೀತ ವಾತಾವರಣಕ್ಕೆ ನಲುಗಿ ಪ್ರಾಣ ಬಿಟ್ಟರು. ಅಷ್ಟೊತ್ತಿಗೆ ಕೇಂದ್ರ ಸರ್ಕಾರ ರೈತ ಹೋರಾಟಕ್ಕೆ ಕಳಂಕ ಹಚ್ಚುವ ಕೆಲಸ ಶುರು ಮಾಡಿತ್ತು. ಇದಕ್ಕೆ ಗೋದಿ ಮೀಡಿಯಾಗಳು, ಬಿಜೆಪಿ ಐಟಿ ಸೆಲ್ ಮತ್ತು ಮೋದಿಯ ಅಂಧಭಕ್ತರಾದ ನವ-ಮಧ್ಯಮವರ್ಗ ಸಾಥ್ ನೀಡಿದವು. ರೈತರನ್ನು ಭಯೋತ್ಪಾದಕರು, ಖಾಲಿಸ್ತಾನಿಗಳು, ದೇಶದ್ರೋಹಿಗಳು ಎಂದು ಅಪಪ್ರಚಾರ ಮಾಡುವ ಅಸಹ್ಯ ಅಭಿಯಾನ ನಡೆಯಿತು, ಅದು ಈಗಲೂ ಚಾಲ್ತಿಯಲ್ಲಿದೆ.

* ಇದ್ಯಾವುದೂ ರೈತ ಹೋರಾಟವನ್ನು ವಿಚಲಿತಗೊಲಿಸಲಿಲ್ಲ ಮತ್ತು ಹೋರಾಟಕ್ಕೆ ಜನರ ಬೆಂಬಲವು ಹೆಚ್ಚುತ್ತಲೇ ಹೋಗಿತು.

* 9 ಸುತ್ತು ಮತುಕತೆಗಳ ನಾಟಕದ ಬಳಿಕ, ಸುಪ್ರಿಂಕೋರ್ಟ್ ಅಂಗಳಕ್ಕೆ ಚೆಂಡನ್ನು ದಬ್ಬಿ ತನ್ನ ಪರ ಆದೇಶ ನಿರೀಕ್ಷೆ ಮಾಡಿತು. ಆದರೆ ಸುಪ್ರಿಂಕೋರ್ಟ್ ಕಾಯ್ದೆಗಳನ್ನು 8 ವಾರ ಅಮಾನತ್ತಿನಲ್ಲಿಡಲು ಸೂಚಿಸಿ, 4 ಜನರ ಸಮಿತಿಯನ್ನು ಸಮಾಲೋಚನೆಗೆ ನೇಮಿಸಿತು. ಕೇಂದ್ರ ಸೂಚಿಸಿದ ಈ ನಾಲ್ವರೂ ಕಾಯ್ದೆ ಪರ ಬ್ಯಾಟಿಂಗ್ ಮಾಡಿದವರೇ ಆಗಿದ್ದರಿಂದ ರೈತರು ಮಾತುಕತೆಗೆ ಒಪ್ಪಲಿಲ್ಲ.

* 10 ಮತ್ತು 11 ಸುತ್ತಿನಲ್ಲಿ, ವಿದ್ಯುತ್ ಕಾಯ್ದೆ ಮತ್ತು ತ್ಯಾಜ್ಯ ಸುಡುವ ಕಾಯ್ದೆ ಕೈ ಬಿಡಲು ಕೇಂದ್ರ ಒಪ್ಪಿತು. ಅಂತಿಮವಾಗಿ 18 ತಿಂಗಳುಗಳ ಕಾಲ ಕಾಯ್ದೆಗಳನ್ನು ಅಮಾನತಿನಲ್ಲಿಡುವ ಮಾತಾಡಿತು.

* ಸರ್ಕಾರದ ಈ ಹುನ್ನಾರ ಸ್ಪಷ್ಟವಾಗುತ್ತಿದ್ದಂತೆ, ರೈತ ಸಂಘಟನೆಗಳು ಜನವರಿ 26ರಂದು ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ತೀರ್ಮಾನಕ್ಕೆ ಗಟ್ಟಿಯಾಗಿ ಅಂಟಿಕೊಂಡವು. ಆಗ ಅದನ್ನು ತಡೆಯಲು ಮತ್ತೆ ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಅಲ್ಲೂ ನಿರಾಶೆಯಾಗಿತು.

* ದೆಹಲಿ ಪೊಲೀಸರು ಹೇಗಾದರೂ ರ‍್ಯಾಲಿ ತಡೆಯಲು ಹಲವಾರು ಷರತ್ತು ವಿಧಿಸಿದರು, ರೈತ ಒಕ್ಕೂಟ ಅದಕ್ಕೆ ಒಪ್ಪಿ ರ‍್ಯಾಲಿಗೆ ಸಿದ್ಧತೆ ಮಾಡಿಕೊಳ್ಳತೊಡಗಿತ್ತು.

* ಜನವರಿ 26 ರಂದು ಟ್ರ್ಯಾಕ್ಟರ್ ರ್ಯಾಲಿ ಶಾಂತಿಯುತವಾಗಿ ಆರಂಭವಾಗಿತ್ತು. ಆದರೆ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಭಿನ್ನಾಭಿಪ್ರಾಯವಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ದೀಪ್ ಸಿಧು ಮತ್ತು ಸಿದಾನ ಲಖಾನ ಎಂಬುವವರು ಪೊಲೀಸ್ ಬ್ಯಾರಿಕೇಡ್ ಮುರಿದು ಕೆಂಪು ಕೋಟೆಯತ್ತ ತೆರಳಿದರು. ಅವರು ಬಿಜೆಪಿಯೊಂದಿಗೆ ಬಹಳ ಹತ್ತಿರದ ಸಂಪರ್ಕ ಹೊಂದಿರುವುದು ಜಗಜಾಹೀರಾಯಿತು.

*  ಅವರು ನಿಗದಿತ ಮಾರ್ಗ ಬಿಟ್ಟು ರ‍್ಯಾಲಿ ಮಾಡುವುದಾಗಿ, ಕೆಂಪುಕೋಟೆ ತಲುಪುವುದಾಗಿ ತಿಳಿಸಿದವು. ಕೇಂದ್ರದ ಅಪೇಕ್ಷೆಯೂ ಇದೇ ಆಗಿತ್ತು. ಹೀಗೆ ಭಿನ್ನ ಹಾದಿ ತುಳಿದವರಿಗೆ ಹೆಚ್ಚಿನ ಅಡೆತಡೆ ಇಲ್ಲದಂತೆ ದೆಹಲಿ ಮತ್ತು ಕೆಂಪುಕೋಟೆಗೆ ಪ್ರವೇಶ ಸಿಗುವಂತೆ ಸಹಕರಿಸಲಾಯಿತು. ಅವರು ಕೆಂಪುಕೊಟೆಯಲ್ಲಿ ಸಿಖ್ ಧ್ವಜ ಮತ್ತು ರೈತ ಧ್ವಜ ಹಾರಿಸಿದ್ದನ್ನು ಸರ್ಕಾರದ ಗೋದಿ ಮಾಧ್ಯಮಗಳು ದೇಶದ್ರೋಹ ಎಂಬಂತೆ ಬಿಂಬಿಸಿದವು. ಅಲ್ಲಿ ಪೊಲೀಸರು ಮತ್ತು ಕೆಲವು ಪ್ರತಿಭಟನಾಕಾರರ ನಡುವಿನ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದನ್ನು ಬಳಸಿಕೊಂಡು, ಇಡೀ ರ‍್ಯಾಲಿಯೇ ಹಿಂಸಾತ್ಮಕವಾಗಿತ್ತು ಎಂದು ಬಿಂಬಿಸಲು ಹೆಣಗಾಡಲಾಯಿತು. ಎರಡು ತಿಂಗಳು ಕಾಲ ಒಂದು ಐತಿಹಾಸಿಕ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ನಡೆದಾಗ ಅದರ ಬಗ್ಗೆ ದೇಶದ ಜನರಿಗೆ ತಿಳಿಸದ ಗೋದಿ ಮೀಡಿಯಾ ಜ.26ರಿಂದ ಸಕ್ರಿಯವಾಗಿತು.

* ಸಂಯುಕ್ತ್ ಕಿಸಾನ್ ಮೋರ್ಚಾ ಅಡಿ ಶಾಂತಿಯುತವಾಗಿ ನಡೆದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿಯನ್ನು ಪ್ರಸಾರ ಮಾಡದೇ ವೃತ್ತಿದ್ರೋಹ ಎಸಗಿದವು. ಇದೆಲ್ಲವೂ ಕ್ರೊನೊಲಜಿಯ ಭಾಗವೇ.

* ಕೆಂಪುಕೋಟೆ ಘಟನೆಗೆ ಪ್ರಮುಖ ಕಾರಣವಾದ ದೀಪ್ ಸಿಧು ಬಿಜೆಪಿ ಮನುಷ್ಯ ಎಂದು ಸಾಬೀತಾದೊಡನೆ ಸರ್ಕಾರ, ಗೋದಿ ಮಿಡಿಯಾ ಕೊಂಚ ಮುಜುಗರಕ್ಕೆ ಈಡಾದವು. ಜನರ ಗಮನ ಬೇರೆಡೆ ಸೆಳೆಯಲು ಮತ್ತೆ ಹಲವಾರು ಯತ್ನ ಶುರುವಾದವು.

* ಕ್ರೊನೊಲಜಿಯ ಈ ಹಂತದಲ್ಲಿ, ರೈತ ಒಕ್ಕೂಟದ ನಾಯಕರ ಹೆಸರುಗಳನ್ನು ಎಫ್‌ಐಆರ್‌ಗಳಲ್ಲಿ ಸೇರಿಸಲಾಗಿತು. ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್ ಸೇರಿ ಹಲವರಿಗೆ ಈಗ ನೋಟಿಸ್ ಜಾರಿ ಮಾಡಲಾಗಿದೆ. ಇದರ ಮುಂದುವರೆದ ಭಾಗವಾಗಿ, ತಪ್ಪಾಗಿ ಟ್ವೀಟ್ ಮಾಡಿದ ಕಾರಣಕ್ಕೆ ಶಶಿ ತರೂರ್, ರಾಜದೀಪ್ ಸರ್ದೇಸಾಯಿ ಇತರರ ನೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. (ಭೀಮಾ-ಕೊರೆಗಾಂವ್ ಪ್ರಕರಣ ನೆನಪಿಸಿಕೊಳ್ಳಿ)

* ಕೆಂಪುಕೋಟೆಯ ಅಹಿತಕರ ಘಟನೆ ಬಳಸಿಕೊಂಡು ರೈತ ಪ್ರತಿಭಟನೆಯ ಮೇಲೆ ಪೊಲೀಸ್ ಬಲ ಬಳಸುವ ಕೆಲಸಕ್ಕೆ ಪ್ರಭುತ್ವ ಮುಂದಾಗಿದೆ. ಅದರ ಮೊದಲ ಭಾಗವಾಗಿ ಉತ್ತರಪ್ರದೇಶದ ಯೋಗಿ ಸರ್ಕಾರವನ್ನು ಛೂ ಬಿಡಲಾಗಿದೆ. ಗಾಜಿಪುರ್ ಗಡಿಯಲ್ಲಿ ರೈತರ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಕಣ್ಣೀರು ಸಾವಿರಾರು ರೈತರು ಗಡಗಳತ್ತ ಬಂದು ಪ್ರತಿಭಟನೆಗೆ ಸೇರಲು ಸಹಾಯಕವಾಗಿದೆ.

ಸಿಂಘು ಗಡಿಯಲ್ಲಿ ದೆಹಲಿ ಕಡೆ ಕುಳಿತಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ರೈತರ ಮೇಲೆ ನಿನ್ನೆ ಮತ್ತು ಇಂದು ಸ್ಥಳೀಯರ ಹೆಸರಿನಲ್ಲಿ ಹಿಂದೂ-ಸೇನಾ ಸಂಘಟನ್ ಎಂಬ ಬಿಜೆಪಿ ಆರ್‌ಎಸ್‌ಎಸ್‌ ಪ್ರೇರಿತ ಸಂಘಟನೆಯ ಮುಸುಕುಧಾರಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪೊಲೀಸರು ಯಥಾಪ್ರಕಾರ ಕೈಕಟ್ಟಿಕೊಂಡು ದಾಳಿಗೆ ಅವಕಾಶ ಕೊಟ್ಟಿದ್ದಾರೆ. ಇದು ಇಡೀ ಸಿಂಘು ಹೋರಾಟಗಾರರ ಮೇಲಿನ ದಾಳಿ, ಟೆಂಟ್‌ಗಳನ್ನು ಕಿತ್ತರು ಎಂದು ತಪ್ಪು ಹರಡಲಾಗುತ್ತಿದೆ. ಸಿಂಘು ಗಡಿ ತೆರವುಗೊಳಿಸಲು ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ ಎಂದು ಸುದ್ದಿ ಹರಡಲಾಗುತ್ತಿದೆ.

ಆದರೆ ಸಿಂಘು ಗಡಿಯಲ್ಲಿ ಹರಿಯಾಣದ ಕಡೆಗೆ ಕಾಯ್ದೆ ವಿರೋಧಿಸಿ ಸಂಯುಕ್ತ್ ಕಿಸಾನ್ ಮೋರ್ಚಾ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಅಲ್ಲಿ ಯಾವುದೇ ದಾಳಿ ಆಗಿಲ್ಲ, ಸುರಕ್ಷಿತವಾಗಿ ಮತ್ತು ಶಾಂತಿಯುತವಾಗಿ ಹೋರಾಟ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಆದರೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಶಾಂತಿಯುತವಾಗಿ ಹೋರಾಟ ಮುಂದುವರೆಸುವ ಅಚಲ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿವೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ಲಕ್ಷಾಂತರ ಜನರು ಪ್ರತಿಭಟನೆಗೆ ಹರಿದು ಬರುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...