Homeಮುಖಪುಟಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ನಾಯಕರು 2022ರ ಮತ್ತು 2024 ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇಡ್‌ ವೇಳೆ ನಡೆದ ಅಹಿತಕರ ಬೆಳವಣಿಗೆಗಳು ದೇಶದ ರೈತರನ್ನು ಭಾವನಾತ್ಮಕವಾಗಿ ಬಡಿದ್ದೆಬಿಸಿವೆ. ರೈತ ಹೋರಾಟ ಹೊಸ ತಿರುವು ಪಡೆಯುತ್ತಿದ್ದು ಶುಕ್ರವಾರ ಉತ್ತರ ಪ್ರದೇಶದ ಮುಜಫ್ಪರ್‌ ನಗರದಲ್ಲಿ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ನೆರೆದು ಒಕ್ಕೊರಲಿನಿಂದ ರೈತ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ಗುರುವಾರ ರಾತ್ರಿ ಗಾಜಿಪುರ್ ಗಡಿಯಲ್ಲಿ ರೈತರನ್ನು ಒಕ್ಕೊಲೆಬ್ಬಿಸುವ ಪ್ರಯತ್ನ ನಡೆದ ಹಿನ್ನೆಲೆಯಲ್ಲಿ ರೈತ ಮುಖಂಡ, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಸಿಂಗ್‌ ಟಿಕಾಯತ್‌ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಭಾವುಕರಾಗಿ ಮಾತನಾಡಿದ್ದ ರಾಕೇಶ್‌ ಸಿಂಗ್‌ ಅವರ ನೋವು ಜಾಟ್‌ ನೆಲದ ರೈತರ ಮನಸ್ಸನ್ನು ತಟ್ಟಿತ್ತು. ಈ ಹಿನ್ನೆಲೆಯಲ್ಲಿ ತೀವ್ರವಾಗಿ ಸ್ಪಂದಿಸಿದ ಉತ್ತರ ಪ್ರದೇಶದ ರೈತರು ಗಾಜಿಪುರದ ರೈತ ಹೋರಾಟಕ್ಕೆ ಹೊರಟಿದ್ದಾರೆ.

ರಾಜಕೀಯ ಇಂಟರ್‌ ಕಾಲೇಜ್‌ ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಟ್ರ್ಯಾಕ್ಟರ್‌ನಲ್ಲಿ ತಲುಪಿದ ರೈತರ ಸಂಖ್ಯೆ ಮಧ್ಯಾಹ್ನದ ಹೊತ್ತಿಗೆ ಹೆಚ್ಚಿತು. ರಾಷ್ಟ್ರೀಯ ಲೋಕ್‌ ದಳದ ನಾಯಕ ಜಯಂತ್‌ ಚೌಧರಿ ಕೂಡ ಸಭೆಗೆ ಅಗಮಿಸಿದ್ದು, ಪಂಚಾಯತ್‌ ಸಮಾವೇಶದ ಹುರುಪು ಹೆಚ್ಚಿಸಿತು. 100ಕ್ಕೂ ಹೆಚ್ಚು ರೈತ ನಾಯಕರು ಪಂಚಾಯತ್‌ ಸಭೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ನಾಯಕರು 2022ರ ಮತ್ತು 2024 ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ನೀಡಿದರು. ಭಾರತ್‌ ಕಿಸಾನ್‌ ಯೂನಿಯನ್‌ನ ನಾಯಕ ಚಂದರ್‌ಬೀರ್‌ ಫೌಜಿ, ರಾಕೇಶ್ ಟೀಕಾಯತ್‌‌ ಅವರು ಹಾಕಿದ ಒಂದೊಂದು ಹನಿ ಕಣ್ಣೀರಿಗೆ ಸರ್ಕಾರದಿಂದ ಲೆಕ್ಕ ಪಡೆಯುತ್ತೇವೆ ಎಂದು ಭಾವುಕವಾಗಿ ನುಡಿದರು.

ರೈತನಾಯಕರು ಗಾಜೀಪುರದ ಒಬ್ಬೇ ಒಬ್ಬ ರೈತನ ಮೇಲೆ ಸಣ್ಣ ಗಾಯವೊಂದಾದರು ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆ ನೀಡಿದರು. ಭಾರತೀಯ ಕಿಸಾನ್‌ ಯೂನಿಯನ್‌ ಜೊತೆಗೆ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕದಳ, ಕಾಂಗ್ರೆಸ್‌ ಪಕ್ಷಗಳು ಬೆಂಬಲ ಸೂಚಿಸಿದವು.

ಟ್ರ್ಯಾಕ್ಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪಶ್ಚಿಮ ಮುಜಫ್ಫರ್‌ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಯಿತು. ಅಂಗಡಿಮುಗ್ಗಟ್ಟುಗಳು ಸೇರಿದಂತೆ ಮೂರು ಪೊಲೀಸ್‌ ಸ್ಟೇಷನ್‌ಗಳ ರಸ್ತೆಗಳು ತುಂಬಿಹೋಗಿವೆ.


ಇದನ್ನೂ ಓದಿ: ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...