Homeಕರ್ನಾಟಕರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಕೆಂಪುಕೋಟೆ ಬಳಿ ನಡೆದಿರುವ ಅಹಿತಕರ ಘಟನೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನು ಇಲ್ಲವಾಗಿಸುವ ಕೆಲಸ ಮಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

- Advertisement -
- Advertisement -

ಜನವರಿ 26 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿರುವ ಅಹಿತಕರ ಘಟನೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನು ಇಲ್ಲವಾಗಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ​ ರಮೇಶ್​ ಕುಮಾರ್​ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. “ರೈತರು ಹಾಗೂ ಸೈನಿಕರನ್ನು ಗೌರವಿಸದ ದೇಶ ದೇಶವೇ ಅಲ್ಲ. ಭಾರತದಲ್ಲಿ ಇದೀಗ ಇಂತಹ ಪರಿಸ್ಥಿತಿ ಬಂದೊದಗಿದೆ. ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದರೆ ಮಾಧ್ಯಮಗಳು ಅದನ್ನೆ ತೋರಿಸುತ್ತಿದ್ದಾರೆ” ಎಂದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ಗಾಜಿಪುರ್‌ ಗಡಿಯಲ್ಲಿ ನೀರು, ವಿದ್ಯುತ್ ಕಡಿತ ಮಾಡಿದ ಯುಪಿ ಸರ್ಕಾರ: ನೀರಿನ ವ್ಯವಸ್ಥೆ ಮಾಡಿದ ದೆಹಲಿ ಸರ್ಕಾರ

ಘಟನೆಯ ಕುರಿತು ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್​, “​ದೆಹಲಿ ಹೊರ ವಲಯದಲ್ಲಿ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟದಲ್ಲಿ ಲಕ್ಷಗಟ್ಟಲೆ ಜನರು ಟ್ರಾಕ್ಟರ್‌ನಲ್ಲಿ ಬಂದು ಹೋರಾಟದ ಭಾಗವಾಗಿದ್ದಾರೆ. ಅಷ್ಟೊಂದು ಸಂಖ್ಯೆಯ ಜನ ರೈತ ಹೋರಾಟದ ಕಣಕ್ಕೆ ಧುಮುಕಿದ್ದಾರೆ ಎಂದರೆ ಅವರ ಆಕ್ರೋಶ ಎಷ್ಟಿರಬಹುದು? ಈ ವೇಳೆ ಕೆಲ ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೇ ತೋರಿಸುತ್ತಿವೆ. ಈ ಮೂಲಕ ರೈತರ ಹೋರಾಟವನ್ನು ಮರೆಮಾಚುವ ಕೆಲಸ ನಡೆಯುತ್ತಿದೆ. ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ರೈತರು ನಮಗಾಗಿ ಅಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾವು ಇಲ್ಲಿ ಸುಮ್ಮನಿದ್ದೀವಿ. ನಮಗೆ ಲಜ್ಜೆ-ಪಜ್ಜೆ ಏನಿಲ್ಲ. ಆದರೆ, ರೈತರ ಹೋರಾಟದ ಫಲ ಎಲ್ಲರಿಗೂ ಸಿಗುತ್ತದೆ. ನಾಳೆಯೊಳಗೆ ದೆಹಲಿಯ ಗಾಜೀಪುರ ಗಡಿಯಲ್ಲಿ 10 ಲಕ್ಷ ರೈತರು ಜಮಾಯಿಸಲಿದ್ದಾರೆ. ನಾವೇನು ಪುಗಸಟ್ಟೆ ಬೆಳೆಯುತ್ತೀವಾ, ಬೆಲೆ ನಿಗದಿ ಬೇರೆಯವರು ಮಾಡಿದರೆ ಹೇಗೆ. ಹೇಳುವವರು ಗಂಜಲ, ಸಗಣಿ ಎತ್ತುತ್ತಾರ? ನಮ್ಮ ಹೆಣ್ಣು ಮಕ್ಕಳು ಎಲ್ಲಾ ಕೆಲಸ ಮಾಡುತ್ತಾರೆ. ಸ್ವಲ್ಪ ಬೆವರು ಬಂದರೂ ಪೌಡರ್ ಹಾಕ್ಕೋಳ್ಳುವವರು ಇದ್ದಾರೆ. ಅಂತದ್ದರಲ್ಲಿ ರೈತರು ತಮ್ಮ ಹಕ್ಕನ್ನು ಕೇಳೋದು ತಪ್ಪಾ?” ಎಂದು ರಮೇಶ್​ ಕುಮಾರ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...