Homeಮುಖಪುಟಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಹಿಂಸೆಗೆ ಕರೆ ನೀಡಿದ್ದಾರೆ: ಸ್ಮೃತಿ ಇರಾನಿ

ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಹಿಂಸೆಗೆ ಕರೆ ನೀಡಿದ್ದಾರೆ: ಸ್ಮೃತಿ ಇರಾನಿ

- Advertisement -
- Advertisement -

ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಭಾರತೀಯರ ವಿರುದ್ಧ ಯುದ್ಧ ಸಾರಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಶೀಘ್ರವೇ ರದ್ದುಗೊಳಿಸದಿದ್ದರೆ ರೈತರ ಪ್ರತಿಭಟನೆ ದೇಶವ್ಯಾಪಿ ಹರಡಲಿದೆ ಎಂದು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಮೃತಿ ಇರಾನಿ, “ರಾಹುಲ್ ಗಾಂಧಿ ಭಾರತೀಯರ ವಿರುದ್ಧ ಯುದ್ಧ ಸಾರಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ ರಾಜಕೀಯ ನಿಲುವುಗಳನ್ನು ಬೆಂಬಲಿಸದಿದ್ದರೆ ನಗರಗಳು ಹೊತ್ತಿ ಉರಿಯುವುದಾಗಿ ಹೇಳಿದ್ದಾರೆ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರು ಶಾಂತಿಗೆ ಬದಲು ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಹಿಂದೆಂದೂ ನಾವು ನೋಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: Israeli embassy | ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಪೋಟ

ಶುಕ್ರವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ರೈತರ ಪ್ರತಿಭಟನೆಯನ್ನು ಒಡೆಯುವ ಪ್ರಯತ್ನ ಮಾಡಬೇಡಿ. ಇಡೀ ದೇಶ ರೈತರೊಂದಿಗೆ ನಿಂತಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಈ ಮೊದಲು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಗಳನ್ನು ಕಸದ ಬುಟ್ಟಿಗೆ ಎಸೆಯುವುದೊಂದೇ ಏಕೈಕ ಪರಿಹಾರ. ಇಲ್ಲವಾದಲ್ಲಿ ಆಂದೋಲನ ದೇಶದೆಲ್ಲೆಡೆ ವ್ಯಾಪಿಸಲಿದೆ ಎಂದು ಎಚ್ಚರಿಸಿದ್ದರು.

ರೈತರ ಹೋರಾಟದ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ರೈತರು ಪ್ರತಿಭಟನೆಯನ್ನು ಕೈಬಿಡುತ್ತಾರೆ ಎಂದುಕೊಂಡಿದೆ. ಆದರೆ ರೈತರು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ. ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದೇ ಸಮಸ್ಯೆಗೆ ಪರಿಹಾರ” ಎಂದು ಹೇಳಿದ್ದಾರೆ.

“ಕೆಂಪು ಕೋಟೆಗೆ ಗೂಂಡಾಗಳನ್ನು ಬಿಟ್ಟಿದ್ದು ಯಾರು ಮತ್ತು ಯಾಕೆ? ಎಂಬ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ರೈತರು ತಮ್ಮ ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದೇ ಡೂಪ್ ರಾಣಿ ರೈತರಿಗೆ ನೀವು ಗುನ್ನ ಹೊಡೆಯುತ್ತಿದ್ದರೆ ನೋಡಿಕೊಂಡು ಸುಮ್ಮನೆ ಕೂರಬೇಕೆ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...