Homeಮುಖಪುಟಗಾಂಧಿ ಮಾರ್ಗಕ್ಕಿಂತ ಶಕ್ತಿಯುತವಾದ ಪರ್ಯಾಯ ಮತ್ತೊಂದಿಲ್ಲ: ನಟ ಕಮಲ ಹಾಸನ್

ಗಾಂಧಿ ಮಾರ್ಗಕ್ಕಿಂತ ಶಕ್ತಿಯುತವಾದ ಪರ್ಯಾಯ ಮತ್ತೊಂದಿಲ್ಲ: ನಟ ಕಮಲ ಹಾಸನ್

- Advertisement -
- Advertisement -

“ಉನ್ನತ ಗುರಿ ಸಾಧನೆಗೆ ಗಾಂಧಿ ಮಾರ್ಗಕ್ಕಿಂತ ಉತ್ತಮವಾದುದು ಮತ್ತೊಂದಿಲ್ಲ” ಎಂದು ತಮಿಳು ನಟ ಮತ್ತು ರಾಜಕಾರಣಿ ಕಮಲ ಹಾಸನ್ ಹೇಳಿದ್ದಾರೆ. ಮಹಾತ್ಮ ಗಾಂಧಿಯ ಹುತಾತ್ಮ ದಿನದಂದು (ಜನವರಿ 30) ಅವರನ್ನು ಸ್ಮರಿಸಿರುವ ಕಮಲ ಹಾಸನ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಜೀವನವೇ ನನ್ನ ಸಂದೇಶ ಎಂದು ಬದುಕಿ, ಅದನ್ನು ಜಗತ್ತಿಗೆ ಸಾರಿದ ಗಾಂಧೀಜಿಯವರನ್ನು ಸ್ಮರಿಸೋಣ. ಉನ್ನತವಾದದನ್ನು ಸಾಧಿಸಲು ಗಾಂಧಿ ಮಾರ್ಗಕ್ಕಿಂತ ಬಲವಾದ ಮತ್ತೊಂದು ಪರ್ಯಾಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಬಗ್ಗೆ ಸಂಘಪರಿವಾರ ಮತ್ತು ಜರ್ಮನಿಯ ಗೊಬೆಲ್ಸ್‌ಗೆ ಒಂದೇ ತರಹದ ಅಸಹನೆ ಏಕಿತ್ತು?

ಗಾಂಧೀಜಿಯವರ ಹುತಾತ್ಮ ದಿನವನ್ನು ಸ್ಮರಿಸುತ್ತಾ ಹಲವು ನಾಯಕರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ವಿರುದ್ಧ ಕರಪತ್ರ ಹಂಚಿಲು ಹೋಗಿ ಸಿಕ್ಕಿಬಿದ್ದ ನಾಲ್ವರು ಹಿಂದೂ ಮಹಾಸಭಾದ ಕಾರ್ಯಕರ್ತರು.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ಗಾಂಧೀಜಿಗೆ ಅವರ ಪುಣ್ಯತಿಥಿಯಂದು ನನ್ನ ನಮನಗಳು. ಅವರ ಆದರ್ಶಗಳು ಲಕ್ಷಾಂತರ ಜನರಿಗೆ ಸ್ಪೂರ್ತಿ. ಹುತಾತ್ಮರ ದಿನದಂದು, ಭಾರತದ ಸ್ವಾಂತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಎಲ್ಲ ಮಹಿಳೆಯರು ಮತ್ತು ಪುರಷರನ್ನು ಸ್ಮರಿಸಬೇಕಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ, “ಜನರ ಬೆಂಬಲವಿಲ್ಲದೆ ಸತ್ಯ ಇನ್ನೂ ನಿಂತಿದೆ. ಈಗ ಅದು ಆತ್ಮನಿರ್ಭರವಾಗಿದೆ” ಎಂದು ಸಂಗೀತ ಸಾಮ್ರಾಜ್ಞೆ ಎಂ ಎಸ್ ಸುಬ್ಬಲಕ್ಷ್ಮಿಯವರ ಹಾಡಿನ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಕೋಮು ಸೌಹಾರ್ದತೆಗಾಗಿ ತನ್ನ ಜೀವವನ್ನು ಬಲಿದಾನಗೈದ ಮಹಾತ್ಮ ಗಾಂಧೀಜಿ ಬದುಕಿನಲ್ಲಿ ಮಾತ್ರವಲ್ಲ ಸಾವಿನಲ್ಲಿಯೂ ಹೇಳಿಹೋಗಿರುವ ಪಾಠವನ್ನು ಮರೆಯದಿರೋಣ. ಗಾಂಧೀಜಿ ಎಂಬ ಜಗದ್ಗರುವಿನ ತತ್ವಾದರ್ಶಗಳ ಅನುಷ್ಠಾನ ನಮ್ಮ ಗುರಿಯಾಗಿರಲಿ. ರಾಷ್ಟ್ರಪಿತನಿಗೆ ಗೌರವದ ಶ್ರದ್ಧಾಂಜಲಿ” ಎಂದು ನಮನ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ, “ಸತ್ಯ, ಅಹಿಂಸೆಯ ಆದರ್ಶಗಳ ಸಾಕಾರ ಮೂರ್ತಿಯಂತಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿಯಂದು ಅವರಿಗೆ ಭಕ್ತಿಪೂರ್ವಕ ಪ್ರಣಾಮಗಳು. ನಮ್ಮನ್ನು ಸದಾ ಎಚ್ಚರಿಸುವ ಗಾಂಧೀಜಿಯವರ ಜೀವನ, ಅವರ ನಡೆ ಮತ್ತು ನುಡಿಗಳ ಬೆಳಕಿನಲ್ಲಿ ಸಮೃದ್ಧ, ಸಶಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯೋಣ” ಎಂದು ಗೌರವ ಸಲ್ಲಿಸಿದ್ದಾರೆ.


ಇದನ್ನೂ ಓದಿ: ನೀವು ಯುದ್ಧದಲ್ಲಿ ಗೆದ್ದರೂ ಅದು ಸರಿಯೆಂದೇನೂ ಸಾಬೀತಾಗುವುದಿಲ್ಲ: ಹಿಟ್ಲರ್‌ಗೆ ಗಾಂಧಿ ಬರೆದಿದ್ದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...