Homeಮುಖಪುಟ'ರೈತರ ನರಮೇಧ ನಡೆಸುತ್ತಿರುವ ಮೋದಿ' - ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ- ಟ್ವಿಟರ್ ಬಳಕೆದಾರ ಧೀರಜ್

- Advertisement -
- Advertisement -

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದರು.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆ. ಇದು ಸರ್ಕಾರವೇ ಪಿತೂರಿ ನಡೆಸಿ ಕಳುಹಿಸಿರುವ ಗುಂಪು ಎಂದು ಹಲವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ಇದರ ಭಾಗವಾಗಿ ಟ್ವಿಟರ್‌ನಲ್ಲಿ #ModiPlanningFarmerGenocide (ರೈತರ ನರಮೇಧ ನಡೆಸಲು ಯೋಜಿಸುತ್ತಿರುವ ಮೋದಿ) ಎಂದು ಆಕ್ರೋಶ ಭುಗಿಲೆದ್ದಿದೆ. ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು.

ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ನಡೆಸಿದ ಹಲ್ಲೆಯಿಂದ ಗಾಯಗೊಂಡವರ ಚಿತ್ರವನ್ನು ಹಂಚಿಕೊಂಡಿರುವ ಧೀರಜ್, “ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ದೆಹಲಿ ಪೊಲೀಸರು ರೈತರ ಟ್ರ್ಯಾಕ್ಟರ್ ಮೇಲಿರುವ ರಾಷ್ಟ್ರಧ್ವಜವನ್ನು ಕಿತ್ತುಹಾಕುತ್ತಿರುವ ವೀಡಿಯೋವನ್ನು ಹಂಚಿಕೊಂಡಿರುವ ಕುಲ್ವೀರ್ ತಿವಾನಾ, “ದೆಹಲಿ ಪೊಲೀಸರು ರಾಷ್ಟ್ರಧ್ವಜವನ್ನು ಏನು ಮಾಡುತ್ತಿದ್ದಾರೆ? ರೈತರನ್ನು ದೂಷಿಸಲಾಗಿತ್ತಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿರುವ ರೈತರ ವೀಡಿಯೋವನ್ನು ಹಂಚಿಕೊಂಡಿರುವ ದವಿಂದರ್ ಸಿಂಗ್, “ಪೆಟ್ರೋಲ್ ಬಾಂಬ್‌ಗಳಿಗೆ, ಅಶ್ರುವಾಯು ದಾಳಿಗೆ ಮತ್ತು ಮತ್ತು ಕಲ್ಲೇಟಿಗೆ ಸಾಕ್ಷಿಯಾದ ರೈತರು” ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಸಿಎಎ-ಎನ್‌ಆರ್‌ಸಿ ಪ್ರತಿಭಟನಾಕಾರರ ವಿರುದ್ಧ ಬಂದೂಕು ಹಿಡಿದಿರುವ ಚಿತ್ರ ಮತ್ತು ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ಎಸೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ಡಿ ಎನ್‌ ಯಾದವ್, “ಎರಡೂ ಚಿತ್ರಗಳಲ್ಲಿಯೂ ನೀವು ದೆಹಲಿ ಪೊಲೀಸರನ್ನು ನೋಡಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ರೈತರ ಮೇಲಿನ ಈ ಹಲ್ಲೆಯು ಸರ್ಕಾರಿ ಪ್ರಾಯೋಜಿತ ಎಂಬುದು ಇಂತಹ ಚಿತ್ರಗಳಿಂದ ತಿಳಿದುಬರುತ್ತದೆ ಎಂದು ಟ್ವಿಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರದಲ್ಲಿ ವ್ಯಕ್ತಿಯೊಬ್ಬ ರೈತರ ಕಡೆ ಕಲ್ಲು ಬೀಸುತ್ತಿದ್ದಾನೆ. ಆದರೆ ಅವನ ಹಿಂದೆಯೇ ಪೊಲೀಸರು ಇದನ್ನು ನೋಡುತ್ತಾ ನಿಂತಿದ್ದಾರೆ.

ರೈತರ ಉತ್ಸಾಹದ ಮಾತುಗಳನ್ನು ಉಲ್ಲೇಖಿಸುವ ವೀಡಿಯೋವನ್ನು ಹಂಚಿಕೊಂಡಿರುವ ಮಂದೀಪ್ ಜಸ್ಸಿ, “ನಮ್ಮ  ಹಿರಿಯರ ಉತ್ಸಾಹ ಮತ್ತು ಸ್ಪೂರ್ತಿಯನ್ನು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೆಂಬಲಿಸಿ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...