Homeಮುಖಪುಟ'ರೈತರ ನರಮೇಧ ನಡೆಸುತ್ತಿರುವ ಮೋದಿ' - ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ- ಟ್ವಿಟರ್ ಬಳಕೆದಾರ ಧೀರಜ್

- Advertisement -
- Advertisement -

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದರು.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆ. ಇದು ಸರ್ಕಾರವೇ ಪಿತೂರಿ ನಡೆಸಿ ಕಳುಹಿಸಿರುವ ಗುಂಪು ಎಂದು ಹಲವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ಇದರ ಭಾಗವಾಗಿ ಟ್ವಿಟರ್‌ನಲ್ಲಿ #ModiPlanningFarmerGenocide (ರೈತರ ನರಮೇಧ ನಡೆಸಲು ಯೋಜಿಸುತ್ತಿರುವ ಮೋದಿ) ಎಂದು ಆಕ್ರೋಶ ಭುಗಿಲೆದ್ದಿದೆ. ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು.

ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ನಡೆಸಿದ ಹಲ್ಲೆಯಿಂದ ಗಾಯಗೊಂಡವರ ಚಿತ್ರವನ್ನು ಹಂಚಿಕೊಂಡಿರುವ ಧೀರಜ್, “ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ದೆಹಲಿ ಪೊಲೀಸರು ರೈತರ ಟ್ರ್ಯಾಕ್ಟರ್ ಮೇಲಿರುವ ರಾಷ್ಟ್ರಧ್ವಜವನ್ನು ಕಿತ್ತುಹಾಕುತ್ತಿರುವ ವೀಡಿಯೋವನ್ನು ಹಂಚಿಕೊಂಡಿರುವ ಕುಲ್ವೀರ್ ತಿವಾನಾ, “ದೆಹಲಿ ಪೊಲೀಸರು ರಾಷ್ಟ್ರಧ್ವಜವನ್ನು ಏನು ಮಾಡುತ್ತಿದ್ದಾರೆ? ರೈತರನ್ನು ದೂಷಿಸಲಾಗಿತ್ತಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿರುವ ರೈತರ ವೀಡಿಯೋವನ್ನು ಹಂಚಿಕೊಂಡಿರುವ ದವಿಂದರ್ ಸಿಂಗ್, “ಪೆಟ್ರೋಲ್ ಬಾಂಬ್‌ಗಳಿಗೆ, ಅಶ್ರುವಾಯು ದಾಳಿಗೆ ಮತ್ತು ಮತ್ತು ಕಲ್ಲೇಟಿಗೆ ಸಾಕ್ಷಿಯಾದ ರೈತರು” ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಸಿಎಎ-ಎನ್‌ಆರ್‌ಸಿ ಪ್ರತಿಭಟನಾಕಾರರ ವಿರುದ್ಧ ಬಂದೂಕು ಹಿಡಿದಿರುವ ಚಿತ್ರ ಮತ್ತು ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ಎಸೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ಡಿ ಎನ್‌ ಯಾದವ್, “ಎರಡೂ ಚಿತ್ರಗಳಲ್ಲಿಯೂ ನೀವು ದೆಹಲಿ ಪೊಲೀಸರನ್ನು ನೋಡಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ರೈತರ ಮೇಲಿನ ಈ ಹಲ್ಲೆಯು ಸರ್ಕಾರಿ ಪ್ರಾಯೋಜಿತ ಎಂಬುದು ಇಂತಹ ಚಿತ್ರಗಳಿಂದ ತಿಳಿದುಬರುತ್ತದೆ ಎಂದು ಟ್ವಿಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರದಲ್ಲಿ ವ್ಯಕ್ತಿಯೊಬ್ಬ ರೈತರ ಕಡೆ ಕಲ್ಲು ಬೀಸುತ್ತಿದ್ದಾನೆ. ಆದರೆ ಅವನ ಹಿಂದೆಯೇ ಪೊಲೀಸರು ಇದನ್ನು ನೋಡುತ್ತಾ ನಿಂತಿದ್ದಾರೆ.

ರೈತರ ಉತ್ಸಾಹದ ಮಾತುಗಳನ್ನು ಉಲ್ಲೇಖಿಸುವ ವೀಡಿಯೋವನ್ನು ಹಂಚಿಕೊಂಡಿರುವ ಮಂದೀಪ್ ಜಸ್ಸಿ, “ನಮ್ಮ  ಹಿರಿಯರ ಉತ್ಸಾಹ ಮತ್ತು ಸ್ಪೂರ್ತಿಯನ್ನು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೆಂಬಲಿಸಿ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...