Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...