Homeಮುಖಪುಟಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

- Advertisement -
- Advertisement -

ಕಳೆದ ಕೆಲವು ದಿನಗಳಲ್ಲಿ ಲೈಂಗಿಕ ದೌರ್ಜನ್ಯಗಳ ಕುರಿತು ಎರಡು ವಿವಾದಾತ್ಮಕ ಆದೇಶಗಳನ್ನು ಜಾರಿಗೊಳಿಸಿದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ಶಾಶ್ವತ ಸ್ಥಾನಮಾನದ ದೃಢಿಕರಣದ ಕುರಿತು ತಾನು ಮಾಡಿದ್ದ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲ್ಜಿಯಂ ಹಿಂತೆಗೆದುಕೊಂಡಿದೆ. ಅಂತಹ ಪ್ರಕರಣಗಳಲ್ಲಿ “ಹೆಚ್ಚಿನ ಮಾನ್ಯತೆ” ನೀಡುವ ಅಗತ್ಯವನ್ನು ಆಧರಿಸಿ ಶಾಶ್ವತ ಸ್ಥಾನಮಾನವನ್ನು ನೀಡದಿರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ ನ್ಯಾಯಾಲಯದ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

“ಆ ನ್ಯಾಯಾಧೀಶೆಯ ವಿರುದ್ಧ ವೈಯಕ್ತಿಕವಾಗಿ ಏನೂ ಇಲ್ಲ. ಅವರಿಗೆ ಇನ್ನೂ ಅನುಭವ ಬೇಕು ಮತ್ತು ಅವರು ವಕೀಲರಾಗಿದ್ದಾಗ ಈ ರೀತಿಯ ಪ್ರಕರಣಗಳನ್ನು ಎದುರಿಸದಿರಬಹುದು… ಅವರಿಗೆ ತರಬೇತಿ ಬೇಕು” ಎಂದು ಕೊಲೆಜಿಯಂ ಅಭಿಪ್ರಾಯ ಪಟ್ಟಿದ್ದಾಗಿ ಸುಪ್ರೀಂ ಕೋರ್ಟ್‌ನ ಮೂಲಗಳು ಉಲ್ಲೇಖಿಸಿವೆ.

ಖಾಯಂ ನ್ಯಾಯಾಧೀಶರನ್ನು ನೇಮಿಸುವ ಅಥವಾ ನ್ಯಾಯಾಧೀಶರನ್ನು ಶಾಶ್ವತಗೊಳಿಸುವ ಕುರಿತು ಕೊಲೆಜಿಯಂ ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳಿಸುತ್ತದೆ ಮತ್ತು ನಂತರ ಕೇಂದ್ರ ಅದನ್ನು ಅನುಮೋದಿಸುತ್ತದೆ. ಕೆಲವೊಮ್ಮೆ, ಶಿಫಾರಸುಗಳನ್ನು ಪ್ರಶ್ನೆಗಳೊಂದಿಗೆ ಕೊಲೆಜಿಯಂಗೆ ಹಿಂತಿರುಗಿಸಲಾಗುತ್ತದೆ.

ಜನವರಿ 20 ರಂದು, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಖಾಯಂ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ಹೆಸರನ್ನು ದೃಢಿಕರಿಸಲು ಕೊಲೆಜಿಯಂ ಶಿಫಾರಸು ಮಾಡಿತ್ತು.

ನ್ಯಾಯಾಧೀಶೆ ಇತ್ತೀಚೆಗೆ ಲೈಂಗಿಕ ದೌರ್ಜನ್ಯದ ಕುರಿತು ಎರಡು ತೀರ್ಪುಗಳನ್ನು ಜಾರಿಗೊಳಿಸಿದರು, ಅದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಈಗ ಅದೇ ಅವರಿಗೆ ಮುಳುವಾಗಿದೆ.

ಜನವರಿ 19 ರ ತೀರ್ಪಿನಲ್ಲಿ, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅಪ್ರಾಪ್ತ ವಯಸ್ಕಳ ಸ್ತನವನ್ನು ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಅವರು ವಿವಾದಾತ್ಮಕ ತೀರ್ಪು ನೀಡಿದ್ದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಬುಧವಾರ ಆ ಆದೇಶವನ್ನು ತಡೆಹಿಡಿದಿದೆ. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಗುರುವಾರ, ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಗಣದೇವಾಲಾ ಅವರು ‘ ಅಪ್ರಾಪ್ತ ವಯಸ್ಕಳ ಕೈಗಳನ್ನು ಹಿಡಿದಿಟ್ಟುಕೊಳ್ಳುವ ಕ್ರಿಯೆಗಳು, ಅಥವಾ ಅವಳ ಎದುರು ಪ್ಯಾಂಟ್ ಜಿಪ್ ತೆರೆಯುವುದು ‘ಲೈಂಗಿಕ ದೌರ್ಜನ್ಯ’ದ ವ್ಯಾಖ್ಯಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ತೀರ್ಪು ನೀಡಿದ್ದರು. ಈ ಆಧಾರದಲ್ಲಿ ಆರೋಪಿಯೊಬ್ಬನಿಗೆ ಪೋಕ್ಸೋ ಅಡಿಯಲ್ಲಿ ನೀಡಿದ ಶಿಕ್ಷೆಯನ್ನು ರದ್ದುಪಡಿಸಿದ್ದರು. ಈ ಪ್ರಕರಣದಲ್ಲಿ ಬಲಿಪಶು, ಐದು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯಾಗಿದ್ದಳು.

ಈ ತೀರ್ಪುಗಳ ನಂತರ, ಕೊಲೆಜಿಯಂ ನ್ಯಾಯಮೂರ್ತಿಗಳು ಗಣದೇವಾಲಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಶಿಫಾರಸು ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆದರು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...