Homeಮುಖಪುಟಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಾಪಸ್ ಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಜನಪರ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಸಮಿತಿ ನೇತೃತ್ವದಲ್ಲಿ ಸಂಘರ್ಷದ ಸಂಕಲ್ಪದಿನ ಹೆಸರಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಯಿತು.

ಲೇಖಕಿ ಡಾ.ಅರುಂಧತಿ ಮಾತನಾಡಿ, ಗಾಂಧೀಜಿ ಕೊಂದ ಶಕ್ತಿಗಳೇ ಇಂದು ಕೇಂದ್ರದ ಆಡಳಿತ ಚುಕ್ಕಾಣಿ ಹಿಡಿದಿವೆ. ಕುಟಿಲತೆ, ವಾಮಮಾರ್ಗದಿಂದ ಅಧಿಕಾರ ಹಿಡಿದು ಜನರನ್ನು ಹಿಂಸಿಸುತ್ತಿದೆ. ಇವರಿಗೆ ಅಧಿಕಾರ ಬೇಕೇ ಹೊರತು ರೈತರ ಹಿತ ಬೇಕಾಗಿಲ್ಲ. ಎರಡು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಅವರ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಕೇಂದ್ರ ಸರ್ಕಾರ ಜನರನ್ನು ಜೀವಂತ ಶವಗಳಾಗಿ ಮಾಡಲು ಹೊರಟಿದೆ. ಕುಟಿಲತೆ, ಹಠಮಾರಿತನವೇ ಕೇಂದ್ರದ ನಡೆಯಾಗಿದೆ. ಇಂತಹ ನೀತಿಯನ್ನು ಬಿಟ್ಟು ಜನರ ಸಮಸ್ಯೆಗಳಿಗೆ  ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತ ಹೋರಾಟ ಹತ್ತಿಕ್ಕಲು ಕುಟಿಲ ಮಾರ್ಗ ಅನುಸರಿಸುತ್ತಿದೆ.. ಸರ್ಕಾರವನ್ನು ಪ್ರಶ್ನಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಆರ್.ಎಸ್.ಎಸ್ ಬೆಂಬಲಿಗರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಲು ಬಿಟ್ಟು ರೈತರನ್ನು ಕ್ರಿಮಿನಲ್ ಗಳು ಎಂಬಂತೆ ಬಿಂಬಿಸಲು ಹೊರಟಿದೆ. ಮಾಧ್ಯಮಗಳು ಕೂಡ ಕೇಂದ್ರದ ತಾಳಕ್ಕೆ ಕುಣಿಯುತ್ತಿವೆ ಎಂದು ಪ್ರಗತಿಪರರು ಆಕ್ರೋಶ ಹೊರಹಾಕಿದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ರೈತರ ಪ್ರತಿಭಟನೆಗೆ ಸರ್ಕಾರ ಇದುವರೆಗೂ ಸ್ಪಂದಿಸಿಲ್ಲ. ಇದು ಸರ್ವಾಧಿಕಾರದ ಧೋರಣೆ. ಇದನ್ನು ಸರ್ಕಾರ ಕೈಬಿಡಬೇಕು. ಜನಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಕಾರ್ಪೋರೇಟ್ ವ್ಯವಸ್ಥೆಯನ್ನು ಬಲಪಡಿಸಲು ಹೊರಟಿದೆ. ಇದು ಸರಿಯಲ್ಲ. ಪ್ರಜಾಪ್ರಭುತ್ವ ಮಾದರಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಲ್ಳುತ್ತಿದೆ ಎಂದು ಆರೋಪಿಸಿದರು.

ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ರೈತರು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೆ ಪ್ರಧಾನಿ ಮೋದಿ ಅತ್ತ ಕಿವಿಗೊಡುತ್ತಿಲ್ಲ. ಸರ್ವಾಧಿಕಾರಿ ಆಡಳಿತದಲ್ಲಿ ಎಲ್ಲವೂ ಅಯೋಮಯವಾಗುತ್ತಿದೆ. ಭೀಮಾ ಕೋರೇಗಾಂವ್ ಹೆಸರಿನಲ್ಲಿ ಪ್ರಗತಿಪರರನ್ನು ಬಂಧಿಸಿ ಜೈಲಲ್ಲಿ ಇಡಲಾಗಿದೆ. ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರು ಹೊರಬರದಂತಹ UAPA ಕಾಯ್ದೆಯನ್ನು ಬಳಸಿದೆ ಎಂದು ಕಿಡಿಕಾರಿದರು.

ಪ್ರಗತಿಪರರು, ಪತ್ರಕರ್ತರು ಸೇರಿ ಸರ್ಕಾರ ಮತ್ತು ಜನವಿರೋಧಿ ಕಾಯ್ದೆಗಳ ವಿರುದ್ಧ ಮಾತನಾಡುವವರನ್ನು ದೇಶದ್ರೋಹಿಗಳೆಂದು ಕರೆದು ಜನರನ್ನು ದಿಕ್ಕುತಪ್ಪಿಸುವ ಕೆಲಸ ನಡೆಯುತ್ತಿದೆ. ಬಂಧಿತರಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ರೈತರು, ಪ್ರಗತಿಪರರೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಬೆಂಬಲಿಗರನ್ನು ಬಿಟ್ಟು ಎಲ್ಲರನ್ನು ದೇಶದ್ರೋಹಿಗಳೆಂದು ಬಿಂಬಿಸಲು ಹೊರಟಿದೆ. ಹೀಗಾಗಿ ಈ ಸರ್ಕಾರ ಬೇಗ ತೊಲಗಬೇಕು. ಅಖಂಡತೆ, ಏಕತೆಗೆ ಪ್ರಜಾಪ್ರಭುತ್ವಕ್ಕೆ ಈ ಸರ್ಕಾರದಿಂದ ಧಕ್ಕೆ ಬಂದಿದೆ ಎಂದು ಕಿಡಿಕಾರಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕಲು ಹೊರಟಿದೆ. ಬಿಜೆಪಿ ಜನರನ್ನು ಛೂ ಬಿಟ್ಟು ಹೋರಾಟದ ದಿಕ್ಕುತಪ್ಪುವಂತೆ ಮಾಡುತ್ತಿದೆ. ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಉತ್ತರ ಪ್ರದೇಶ ಸರ್ಕಾರ ಚಳವಳಿಗೆ ಅಡ್ಡಿಪಡಿಸಲು ಹೋರಾಟ ಸ್ಥಳದಲ್ಲಿ ಒದಗಿಸಿದ್ದ ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಕಡಿತಗೊಳಿಸಿದೆ. ಅಮಾನವೀಯತೆಯಿಂದ ವರ್ತಿಸಿದೆ. ಇದು ಖಂಡನೀಯ. ಅದೇ ದೆಹಲಿ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬಿಜೆಪಿ ರೈತ ಸಂಘಟನೆಗಳಲ್ಲೇ ಬಿರುಕು ಮೂಡಿಸಿ ಒಡೆಯುವ ವ್ಯವಸ್ಥಿತ ಯತ್ನ ನಡೆದಿದೆ. ಇದು ಫಲಿಸುವುದಿಲ್ಲ. ಹೋರಾಟ ನಡೆದೇ ತೀರುತ್ತದೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಹಿತಿ ಡಾ. ನಟರಾಜ್ ಬೂದಾಳ್, ರೈತ ಮುಖಂಡ ಅಜ್ಜಪ್ಪ, ಯುವಜನ ಸಂಘಟನೆಯ ಮಂಜುಳ, ಆಶ್ವಿನಿ, ನವೀನ್ ಇದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...