Homeಚಳವಳಿಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

- Advertisement -
- Advertisement -

ಶುಕ್ರವಾರ ದೆಹಲಿಯ ಸಿಂಘು ಗಡಿಯ ಒಂದು ಭಾಗದಲ್ಲಿ ರೈತರ ಮೇಲೆ ದಾಳಿ ನಡೆಸಿದವರ ಬಗ್ಗೆ ಅಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು, ದಾಂಧಲೆ ನೇತೃತ್ವ ವಹಿಸಿದ ಇಬ್ಬರು ಪಕ್ಕಾ ಬಿಜೆಪಿ ಕಾರ್ಯಕರ್ತರು ಎಂದು ಸಾಬೀತಾಗಿದೆ. ಅದರಲ್ಲಿ ಒಬ್ಬಾತನಂತೂ ಅಮಿತ್ ಶಾ ಜೊತೆ ಪಕ್ಷದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವ ಫೋಟೋಗಳು ವೈರಲಾಗಿದೆ.

ಸಿಂಘು ಗಡಿಯ ಪ್ರತಿಭಟನಾಕಾರರ ಮೇಲೆ ದಾಳಿ ಕುರಿತ ವರದಿಗಳಲ್ಲಿ ಬಹುತೇಕ ಮಾಧ್ಯಮಗಳು , ಸ್ಥಳೀಯರು ಎಂದೋ, ’ಸ್ಥಳೀಯರು ಎಂದು ಕರೆದುಕೊಂಡವರು’ ಎಂದೋ ಹೇಳಿವೆ. ಆದರೆ, ಅಲ್ಟ್‌ನ್ಯೂಸ್ ಹಲವಾರು ವಿಡಿಯೋ, ಫೇಸ್‌ಬುಕ್ ಪ್ರೊಫೈಲ್, ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಗಿರುವ ಫೋಟೋ ಇತ್ಯಾದಿ ಆಧಾರದಲ್ಲಿ, “ದಾಳಿಯ ನೇತೃತ್ವ ವಹಿಸಿದ್ದು ಇಬ್ಬರು ಪ್ರಮುಖ ಬಿಜೆಪಿ ಕಾರ್ಯಕರ್ತರು” ಎಂದು ಸಾಬೀತು ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

 

ಆಜ್‌ತಕ್ ವರದಿಯಲ್ಲಿ, ಸ್ಥಳೀಯರು ಎಂದು ಕರೆದುಕೊಂಡ ಗುಂಪಿನ ಸದಸ್ಯರು, “ಈ ಮೊದಲು ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೆವು, ಜನವರಿ 26 ರ ಘಟನೆ ನಂತರ ನಾವು ಪ್ರತಿಭಟನೆ ವಿರೋಧಿಸುತ್ತಿದ್ದೇವೆ” ಎಂದಿದ್ದರು. ಆಜ್‌ತಕ್ ಪ್ರಸಾರ ಮಾಡಿದ ವಿಡಿಯೋದಲ್ಲಿ, ನೀಲಿ-ಬಿಳಿ-ಹಸಿರು ಪಟ್ಟಿಗಳ ಶರ್ಟ್ ತೊಟ್ಟು ತ್ರಿವರ್ಣ ಧ್ವಜ ಹಿಡಿದು, ಪೊಲೀಸರ ಎದುರು ಕಾಣಿಸುವ ವ್ಯಕ್ತಿ ಅಬನ್ ದಾಬಸ್ ಎಂದು ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಗುರುತಿಸಿದ್ದಾರೆ.

ಅಬನ್ ದಾಬಸ್ ಯಾರು?

“ವಾಯುವ್ಯ ದೆಹಲಿಯ ಸಾಮಾಜಿಕ ಕಾರ್ಯಕರ್ತ” ಎಂದು ಈತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಹೇಳಿಕೊಂಡಿದ್ದಾನೆ. ’ಅಬನ್ ಕುಮಾರ್ ಸೊಷಿಯಲ್ ವರ್ಕರ್’ ಎಂಬುದು ಈತನ ಫೇಸ್‌ಬುಕ್ ಪೇಜ್. ದಾಬಸ್ ಎಂಬುದು ಜಾಟ್ ಸಮುದಾಯದ ವಂಶಾವಳಿಯ ಹೆಸರು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಬರ್‍ವಾಲಾ ಗ್ರಾಮದ 31 ನೆ ವಾರ್ಡ್ ಪೂರ್ತ್ ಕುರ್‍ದ್‌ನಲ್ಲಿ ಮನೆಮನೆಗೆ ತೆರಳಿ ಸ್ಯಾನಿಟೈಜೇಶನ್ ಮಾಡುವ ಕಾರ್ಯಕ್ರಮದ ಫೋಟೊವನ್ನು ಕಳೆದ ವರ್ಷ ತನ್ನ ಪೇಜ್‌ನಲ್ಲಿ ಅಪ್‌ಲೋಡ್ ಮಾಡಿದ್ದ. ಅಮನ್ ಸ್ಥಳೀಯ (ಬರ್‍ವಾಲಾ) ಬಿಜೆಪಿ ನಾಯಕಿ ಮತ್ತು ವಾರ್ಡ್ 31 ರ ಕೌನ್ಸಿಲರ್ ಅಂಜು ಕುಮಾರ್ ಅಲಿಯಾಸ್ ಅಂಜು ದೇವಿಯ ಪತಿ.

ವಾಯುವ್ಯ ದೆಹಲಿಯ ಬಿಜೆಪಿಯ ಅಧಿಕೃತ ಕಾರ್ಯಕ್ರಮಗಳಲ್ಲೂ ಈತ ಕಾಣಿಸಿಕೊಂಡಿದ್ದಾನೆ. ಮೊದಲಿಗೆ ಅಮನ್, ಅಂಜು ಸ್ಥಳೀಯ ಆಪ್ ನಾಯಕರಾಗಿದ್ದು, 2017 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ಅಮನ್ ಗೃಹ ಸಚಿವ ಅಮಿತ್ ಶಾ ಜೊತೆಗಿರುವ ಪಕ್ಷದ ಅಧಿಕೃತ ಕಾರ್ಯಕ್ರಮದ ಫೋಟೊ ಅಪ್‌ಲೋಡ್ ಮಾಡಿದ್ದಾನೆ.

ಅಮನ್ ಪತ್ನಿ ಅಂಜು ಕುಮಾರ್ ಪೂರ್ತ್ ಖುರ್‍ದ್ ನಿವಾಸಿ. ಪೂರ್ತ್ ಖುರ್‍ದ್ ಸಿಂಘು ಗಡಿಯಿಂದ 15 ಕಿಮೀ ದೂರದಲ್ಲಿದೆ. ಸ್ಥಳೀಯರು ಎಂದು ಹೇಳಿಕೊಂಡ ದಾಂಧಲೆಕೋರರು, ಪ್ರತಿಭಟನೆಯಿಂದ ವಾಹನ ದಟ್ಟಣೆ ಹೆಚ್ಚಾಗಿ ತಾವು ಅಂಗಡಿ-ಮುಗ್ಗಟ್ಟು ತೆಗೆಯಲಾಗುತ್ತಿಲ್ಲ ಎಂದಿದ್ದರು. ಆದರೆ 15 ಕಿಮೀ ದೂರದ ಒಂದು ಗ್ರಾಮವನ್ನು ನೆರೆಹೊರೆಯ ಪ್ರದೇಶ ಎನ್ನಲಾಗುವುದಿಲ್ಲ ಎಂಬುವುದು ಸಾಮಾನ್ಯ ಜ್ಞಾನವಾಗಿದೆ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಇನ್ನೊಬ್ಬ ಪ್ರಮುಖ ಬಿಜೆಪಿ ಕಾರ್ಯಕರ್ತ

ಕಿಶನ್ ದಾಬಸ್ ಎನ್ನುವಾತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಸಿಂಘು ಗಡಿಯಲ್ಲಿನ ಹಿಂಸಾಚಾರದ ಫೋಟೊವನ್ನು ಅಪ್‌ಲೋಡ್ ಮಾಡಿದ್ದ. ಒಂದೆರಡು ಗಂಟೆಗಳಲ್ಲಿ ಆತ ಪೋಸ್ಟ್ ಅನ್ನು ಡಿಲಿಟ್ ಮಾಡುವ ಮುನ್ನ ಅಲ್ಟ್‌ನ್ಯೂಸ್ ಅದರ ಸ್ಕ್ರೀನ್‌ಶಾಟ್ ಪಡೆದುಕೊಂಡಿತ್ತು. ಅದರಲ್ಲಿ ಬಿಜೆಪಿ ನಾಯಕರಾದ ಸಂದೀಪ್ ಶೆರಾವತ್ ಮತ್ತು ರವೀಂದರ್‌ಕುಮಾರ್ ಅವರನ್ನು ಟ್ಯಾಗ್ ಮಾಡಲಾಗಿತ್ತು. ಇವರಿಬ್ಬರೂ ಕಿಶನ್‌ಗೆ ತುಂಬ ಪರಿಚಯ ಎಂದೆನಿಸುತ್ತದೆ.

 

ಕಿಶನ್ ಅಪ್‌ಲೋಡ್ ಮಾಡಿರುವ ದಾಂಧಲೆಯ ವಿಡೀಯೋಗಳಲ್ಲಿ ಒಂದರಲ್ಲಿ ಅಮನ್ ಮತ್ತು ಕಿಶನ್ ಇಬ್ಬರೂ ಜೊತೆಗಿದ್ದರೆ, ಪಕ್ಕದಲ್ಲೆ ದೊಡ್ಡ ಸಂಖ್ಯೆಯಲ್ಲಿ ಪೊಲೀಸರಿದ್ದಾರೆ. ಇನ್ನೊಂದರಲ್ಲಿ, ಪೊಲೀಸ್ ಎದುರು ನಿಂತಿರುವ ದಾಂಧಲೆಕೋರರ ಗುಂಪಿನಲ್ಲಿ ಅಮನ್ ಮುಂದಿನ ಸಾಲಿನಲ್ಲಿದ್ದಾನೆ. ಆಜ್‌ತಕ್ ವಿಡಿಯೋದಲ್ಲೂ ಇದನ್ನು ನೊಡಬಹುದು. ಈ ವಿಡಿಯೋದಲ್ಲೂ ಇಬ್ಬರೂ ಜೊತೆಯಲ್ಲಿ ಇರುವುದನ್ನು ನೋಡಬಹುದು. ಕಳೆದ ವರ್ಷ ಕಿಶನ್ ಮಾಡಿದ ಪೋಸ್ಟ್‌ನಲ್ಲಿ ವಾರ್ಡ್ 31 ರ ಕೌನ್ಸಿಲರ್ (ಇನ್ನೊಬ್ಬ ದಾಂಧಲೆಕೋರ ಅಮನ್ ಪತ್ನಿ) ಜೊತೆ ಕಿಶನ್ ಇದ್ದಾನೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಎಲ್ಲಕ್ಕಿಂತ ಮುಖ್ಯವಾಗಿ, ಇತ್ತೀಚಿನ ಫೋಟೊವೊಂದರಲ್ಲಿ ಅಮನ್ ಮತ್ತು ಕಿಶನ್ ಬಿಜೆಪಿ ದೆಹಲಿ ಘಟಕದ ಬ್ಯಾನರ್‌ನಡಿ ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವುದನ್ನು ನೊಡಬಹುದಾಗಿದೆ.

ಮಾಧ್ಯಮಗಳು ಹೇಳುತ್ತಿರುವಂತೆ ಸಿಂಘು ಗಡಿಯಲ್ಲಿ ದಾಂಧಲೆ ಆಗಿದೆಯೆ?

ಸಿಂಘು ಗಡಿಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ರೈತರನ್ನು ತೆರವುಗೊಳಿಸುವಂತೆ ಪ್ರತಿಭಟನೆ ಮಾಡಿದ್ದಾರೆ ಎಂಬುದು ಅರ್ಧ ಸತ್ಯ. ಮೊದಲಿಗೆ ಅವರು ಸ್ಥಳೀಯರಲ್ಲ ಬದಲಿಗೆ ಬಿಜೆಪಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಎಂದು ಆಲ್ಟ್‌ನ್ಯೂಸ್ ನಡೆಸಿರುವ ಫ್ಯಾಕ್ಟ್‌ಚೆಕ್ ಮೇಲಿನ ವರದಿಯ ಮೂಲಕ ತಿಳಿಯಬಹುದು. ಎರಡನೇದಾಗಿ ಅವರು ಸಿಂಘು ಗಡಿಯ ಒಂದು ಮೂಲೆಯಲ್ಲಿ ಚಿಕ್ಕ ಪ್ರತಿಭಟನೆಯ ಪ್ರಹಸನವಷ್ಟೇ ನಡೆಸಿದ್ದಾರೆ. ANI ಸೇರಿದಂತೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನೆ ದೊಡ್ಡದು ಮಾಡಿ ತೋರಿಸಿ ಇಡೀ ಸಿಂಘು ಗಡಿಗೆ ಸ್ಥಳೀಯರು ನುಗ್ಗಿಬಂದಿದ್ದಾರೆ ಎಂದು ಸುಳ್ಳು ವರದಿ ಮಾಡಿವೆ.

ವಾಸ್ತವವೆಂದರೆ ಸಿಂಘು ಗಡಿಯಲ್ಲಿ ಎರಡು ಪ್ರತಿಭಟನೆಗಳು ನಡೆಯುತ್ತಿವೆ. ಹರಿಯಾಣಕ್ಕೆ ಹೊಂದಿಕೊಂಡಂತೆ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ನಡೆಯುತ್ತಿರುವುದು ಒಂದು ಬೃಹತ್ ಪ್ರತಿಭಟನೆಯಾದರೆ, ಅಲ್ಲಿಂದ 200 ಮೀಟರ್ ದೂರದಲ್ಲಿ ಅಂದರೆ ದೆಹಲಿ ವ್ಯಾಪ್ತಿಗೆ ಬರುವ ಸ್ಥಳದಲ್ಲಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ನೇತೃತ್ವದಲ್ಲಿ ಸಣ್ಣ ಪ್ರತಿಭಟನೆ ನಡೆಯುತ್ತಿದೆ. (ದೀಪ್ ಸಿಧು ಇದೇ ಸಂಘಟನೆಗೆ ಸೇರಿದ್ದು, ಮುಖ್ಯವಾಗಿ ಗಣರಾಜ್ಯೋತ್ಸವದ ದಿನ ನಿಯೋಜಿತ ಮಾರ್ಗ ಉಲ್ಲಂಘಿಸಿ, ಕೆಂಪು ಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿದ್ದು ಇವರೆ ಎನ್ನಲಾಗಿದೆ)

ಈ ಭಾಗ ದೆಹಲಿ ಪೊಲೀಸರ ವ್ಯಾಪ್ತಿಗೆ ಬರುವುದರಿಂದ, ಜನವರಿ 27 ರಂದು ಸ್ಥಳೀಯರ ಹೆಸರಿನ ಗುಂಪು ಇಲ್ಲಿ ಪ್ರತಿಭಟನೆ ನಡೆಸಿದೆ. ಇದು ಇನ್ನೊಂದು ಹರಿಯಾಣದ ಬದಿಯಲ್ಲಿರುವ ರೈತ ಗುಂಪಿಗೆ ಗೊತ್ತಾಗಿಯೇ ಇಲ್ಲ. ಆದರೆ ಮಾಧ್ಯಮಗಳು ಇಡೀ ಸಿಂಘು ಗಡಿಯಲ್ಲಿ ಪ್ರತಿಭಟನೆ ಎಂದು ತಪ್ಪು ವರದಿ ಮಾಡಿವೆ. ಏಕೆಂದರೆ ಅಲ್ಲಿ 60 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸುತ್ತಿದ್ದು ಯಾವು ಗುಂಪು ಸಹ ಅಲ್ಲಿಗೆ ನುಗ್ಗಿ ಪ್ರತಿಭಟನೆ ನಡೆಸುವ ಧೈರ್ಯ ತೋರುವುದಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಈ ಪ್ರಾಮಾಣಿಕತೆಯ ವಾರ್ತೆಗಾಗಿ ನಾನು ಕಾಯುತ್ತಿರುತ್ತೇನೆ ಏಕೆಂದರೆ ಇವತ್ತಿನ ಮಾಧ್ಯಮ ಟಿ. ವಿ ಅವರು ಕೇವಲ ಒಂದು ಪಕ್ಷದ ಪರವಾಗಿ ಕೆಲಸ ಮಾಡುವುದು ತುಂಬಾ ನೋವಿನ ಪ್ರಸಂಗ. ಕೇವಲ ಟಿ. ಆರ್. ಪಿ ಗಾಗಿ ಕೆಲಸ ಮಾಡುವ ಚಾನೆಲ್ ಗಳು ನಮಗೆ ಬೇಕಿಲ್ಲ ನಮಗೆ ನಿಮ್ಮ ಸತ್ಯ ಸತ್ಯತೆ ಇರುವ ಮಾಹಿತಿಗಾಗಿ ನಾವು ದಿನ ನಿತ್ಯ ಕಾಯುತ್ತಿರುತ್ತೇವೆ. ಧನ್ಯವಾದಗಳು ಗೌರಿ. ಲಂಕೇಶ್. ??

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...