Homeಮುಖಪುಟಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಯಿತು.

- Advertisement -
- Advertisement -

ತಮ್ಮ ಚುನಾಯಿತ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಸಲುವಾಗಿಯೇ ದೇಶದ ಎಲ್ಲಾ ಮೂಲೆಗಳಿಂದ ರೈತರು ದೆಹಲಿಯ ಗಡಿಗಳಿಗೆ ಬಂದಿದ್ದಾರೆ. ಆದ್ದರಿಂದ, ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳು ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

‘ಕೃಷಿ ಕಾನೂನುಗಳ ಅನುಷ್ಠಾನವನ್ನು 18 ತಿಂಗಳುಗಳ ಕಾಲ ಅಮಾನತಿನಲ್ಲಿರಿಸುವ ತಮ್ಮ ಸರ್ಕಾರದ ಪ್ರಸ್ತಾವನೆ ಹಾಗೆ ಇದೆ. ಕೋಪಗೊಂಡ ರೈತರೊಂದಿಗೆ ವಾರಗಳ ಕಾಲ ಸ್ಥಗಿತಗೊಂಡಿರುವ ಮಾತುಕತೆ ಮುಂದುವರೆಸುವ ಪ್ರಯತ್ನ ಸಾಗಿವೆ’ ಎಂದು ನಿನ್ನೆ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರೈತ ಮುಖಂಡರು ಮೂರು ಕಾನೂನುಗಳನ್ನು ರದ್ದುಗೊಳಿಸುವವರೆಗೂ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಜಾರಿಗೊಳಿಸುವವರೆಗೂ ಮಾತುಕತೆ ಮತ್ತು ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಹೋರಾಟದ 67ನೇ ದಿನದ ಪತ್ರಿಕಾ ಹೇಳಿಕೆಯಲ್ಲಿ “ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ಮಹಾತ್ಮ ಗಾಂಧಿ ಮತ್ತು ರೈತ ಚಳವಳಿಯಲ್ಲಿ ಹುತಾತ್ಮಾದವರಿಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸವನ್ನು ಆಚರಿಸಲಾಯಿತು. ಗಾಂಧೀಜಿಯವರ ಜೀವನದಿಂದ ಕಲಿತು ರೈತರು ಈ ಆಂದೋಲನವನ್ನು ಶಾಂತಿಯುತವಾಗಿ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದರು” ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

ಸದ್ಭಾವನಾ ದಿವಾಸ್ ವರದಿಗಳು ದೇಶದಾದ್ಯಂತ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಮುಂಬೈ, ಥಾಣೆ, ಪುಣೆ, ಅಹ್ಮದ್‌ನಗರ, ನಂದೂರ್‌ಬಾರ್, ಸತಾರಾ, ಔರಂಗಾಬಾದ್, ನಾಸಿಕ್ ಇತ್ಯಾದಿಗಳಿಂದ ವರದಿಗಳು ಬಂದಿವೆ. ತಮಿಳುನಾಡಿನಲ್ಲಿ, ಕರೂರ್ ಮತ್ತು ಕಲ್ಲಕುರುಚಿಯಂತಹ ಜಿಲ್ಲೆಗಳಲ್ಲಿ ದಿನವನ್ನು ಆಚರಿಸಲಾಯಿತು. ಕರ್ನಾಟಕದ ಮೈಸೂರು, ಶಿವಮೊಗ್ಗ, ಚಿಕ್ಕಬಲ್ಲಾಪುರ, ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ಸದ್ಭಾವನಾ ದಿವಾಸ್ ಆಚರಿಸಲಾಗಿದೆ. ಗುಜರಾತ್‌ನಲ್ಲೂ ರೈತರು ಇಂದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.  ಸಬೆರ್‌ಕಂತದಲ್ಲಿ ತಮ್ಮ ಎಂದಿನ ದಮನಕಾರಿ ಮನೋಭಾವವನ್ನು ಪ್ರದರ್ಶಿಸಿದ ಗುಜರಾತ್ ಪೊಲೀಸರು ಸತ್ಯಾಗ್ರಹಿಗಳನ್ನು ಬಂಧಿಸಿದ್ದಾರೆ. ಹರಿಯಾಣದಿಂದಲೂ ಉಪವಾಸ ಸತ್ಯಾಗ್ರಹದ ವರದಿಗಳು ಬಂದಿವೆ. ಬಿಹಾರದಲ್ಲಿ, ಮುಜಫರ್ಪುರ್, ನಳಂದ ಮುಂತಾದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ಭಾವನಾ ದಿವಾಸ್ ಅನ್ನು ಉದ್ದನೆಯ ಮಾನವ ಸರಪಳಿಗಳಿಂದ ಆಚರಿಸಲಾಗಿದೆ. ಮಧ್ಯಪ್ರದೇಶದಲ್ಲಿಯೂ ಸಹ ಭೋಪಾಲ್, ಬೆತುಲ್, ಮುಲ್ತೈ ಮತ್ತು ಇತರ ಸ್ಥಳಗಳಲ್ಲಿ ಉಪವಾಸ ಆಚರಿಸಲಾಯಿತು. ಇಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಕಾನೂನುಬಾಹಿರ ಬಳಕೆಯಿಂದ ಈ ಆಂದೋಲನವನ್ನು ದುರ್ಬಲಗೊಳಿಸಲು ಮತ್ತು ನಾಶಪಡಿಸುವ ಪೊಲೀಸರ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ವಿವಿಧ ದಾಳಿಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೋಲಿಸ್ ಮತ್ತು ಬಿಜೆಪಿ ಗೂಂಡಾಗಳ ನಿರಂತರ ಹಿಂಸಾಚಾರವು ಸರ್ಕಾರದೊಳಗಿನ ಸ್ಪಷ್ಟ ಭಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪ್ರತಿಭಟನಾಕಾರರನ್ನು ಮತ್ತು ಪತ್ರಕರ್ತರನ್ನು ಪೊಲೀಸರು ಸಿಕ್ಕಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಎಲ್ಲಾ ಶಾಂತಿಯುತ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಪ್ರತಿಭಟನೆಯನ್ನು ನಿರಂತರವಾಗಿ ವರದಿ ಮಾಡುತ್ತಿರುವ ಪತ್ರಕರ್ತರ ಮೇಲಿನ ಪೊಲೀಸ್ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...