Homeಮುಖಪುಟಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಯಿತು.

- Advertisement -
- Advertisement -

ತಮ್ಮ ಚುನಾಯಿತ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಸಲುವಾಗಿಯೇ ದೇಶದ ಎಲ್ಲಾ ಮೂಲೆಗಳಿಂದ ರೈತರು ದೆಹಲಿಯ ಗಡಿಗಳಿಗೆ ಬಂದಿದ್ದಾರೆ. ಆದ್ದರಿಂದ, ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳು ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

‘ಕೃಷಿ ಕಾನೂನುಗಳ ಅನುಷ್ಠಾನವನ್ನು 18 ತಿಂಗಳುಗಳ ಕಾಲ ಅಮಾನತಿನಲ್ಲಿರಿಸುವ ತಮ್ಮ ಸರ್ಕಾರದ ಪ್ರಸ್ತಾವನೆ ಹಾಗೆ ಇದೆ. ಕೋಪಗೊಂಡ ರೈತರೊಂದಿಗೆ ವಾರಗಳ ಕಾಲ ಸ್ಥಗಿತಗೊಂಡಿರುವ ಮಾತುಕತೆ ಮುಂದುವರೆಸುವ ಪ್ರಯತ್ನ ಸಾಗಿವೆ’ ಎಂದು ನಿನ್ನೆ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರೈತ ಮುಖಂಡರು ಮೂರು ಕಾನೂನುಗಳನ್ನು ರದ್ದುಗೊಳಿಸುವವರೆಗೂ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಜಾರಿಗೊಳಿಸುವವರೆಗೂ ಮಾತುಕತೆ ಮತ್ತು ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಹೋರಾಟದ 67ನೇ ದಿನದ ಪತ್ರಿಕಾ ಹೇಳಿಕೆಯಲ್ಲಿ “ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ಮಹಾತ್ಮ ಗಾಂಧಿ ಮತ್ತು ರೈತ ಚಳವಳಿಯಲ್ಲಿ ಹುತಾತ್ಮಾದವರಿಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸವನ್ನು ಆಚರಿಸಲಾಯಿತು. ಗಾಂಧೀಜಿಯವರ ಜೀವನದಿಂದ ಕಲಿತು ರೈತರು ಈ ಆಂದೋಲನವನ್ನು ಶಾಂತಿಯುತವಾಗಿ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದರು” ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

ಸದ್ಭಾವನಾ ದಿವಾಸ್ ವರದಿಗಳು ದೇಶದಾದ್ಯಂತ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಮುಂಬೈ, ಥಾಣೆ, ಪುಣೆ, ಅಹ್ಮದ್‌ನಗರ, ನಂದೂರ್‌ಬಾರ್, ಸತಾರಾ, ಔರಂಗಾಬಾದ್, ನಾಸಿಕ್ ಇತ್ಯಾದಿಗಳಿಂದ ವರದಿಗಳು ಬಂದಿವೆ. ತಮಿಳುನಾಡಿನಲ್ಲಿ, ಕರೂರ್ ಮತ್ತು ಕಲ್ಲಕುರುಚಿಯಂತಹ ಜಿಲ್ಲೆಗಳಲ್ಲಿ ದಿನವನ್ನು ಆಚರಿಸಲಾಯಿತು. ಕರ್ನಾಟಕದ ಮೈಸೂರು, ಶಿವಮೊಗ್ಗ, ಚಿಕ್ಕಬಲ್ಲಾಪುರ, ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ಸದ್ಭಾವನಾ ದಿವಾಸ್ ಆಚರಿಸಲಾಗಿದೆ. ಗುಜರಾತ್‌ನಲ್ಲೂ ರೈತರು ಇಂದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.  ಸಬೆರ್‌ಕಂತದಲ್ಲಿ ತಮ್ಮ ಎಂದಿನ ದಮನಕಾರಿ ಮನೋಭಾವವನ್ನು ಪ್ರದರ್ಶಿಸಿದ ಗುಜರಾತ್ ಪೊಲೀಸರು ಸತ್ಯಾಗ್ರಹಿಗಳನ್ನು ಬಂಧಿಸಿದ್ದಾರೆ. ಹರಿಯಾಣದಿಂದಲೂ ಉಪವಾಸ ಸತ್ಯಾಗ್ರಹದ ವರದಿಗಳು ಬಂದಿವೆ. ಬಿಹಾರದಲ್ಲಿ, ಮುಜಫರ್ಪುರ್, ನಳಂದ ಮುಂತಾದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ಭಾವನಾ ದಿವಾಸ್ ಅನ್ನು ಉದ್ದನೆಯ ಮಾನವ ಸರಪಳಿಗಳಿಂದ ಆಚರಿಸಲಾಗಿದೆ. ಮಧ್ಯಪ್ರದೇಶದಲ್ಲಿಯೂ ಸಹ ಭೋಪಾಲ್, ಬೆತುಲ್, ಮುಲ್ತೈ ಮತ್ತು ಇತರ ಸ್ಥಳಗಳಲ್ಲಿ ಉಪವಾಸ ಆಚರಿಸಲಾಯಿತು. ಇಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಕಾನೂನುಬಾಹಿರ ಬಳಕೆಯಿಂದ ಈ ಆಂದೋಲನವನ್ನು ದುರ್ಬಲಗೊಳಿಸಲು ಮತ್ತು ನಾಶಪಡಿಸುವ ಪೊಲೀಸರ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ವಿವಿಧ ದಾಳಿಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೋಲಿಸ್ ಮತ್ತು ಬಿಜೆಪಿ ಗೂಂಡಾಗಳ ನಿರಂತರ ಹಿಂಸಾಚಾರವು ಸರ್ಕಾರದೊಳಗಿನ ಸ್ಪಷ್ಟ ಭಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪ್ರತಿಭಟನಾಕಾರರನ್ನು ಮತ್ತು ಪತ್ರಕರ್ತರನ್ನು ಪೊಲೀಸರು ಸಿಕ್ಕಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಎಲ್ಲಾ ಶಾಂತಿಯುತ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಪ್ರತಿಭಟನೆಯನ್ನು ನಿರಂತರವಾಗಿ ವರದಿ ಮಾಡುತ್ತಿರುವ ಪತ್ರಕರ್ತರ ಮೇಲಿನ ಪೊಲೀಸ್ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...