Homeಅಂತರಾಷ್ಟ್ರೀಯಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

ಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |

ಯಾವುದೇ ಆರೆಸ್ಸೆಸ್ ಕಾರ್ಯಕರ್ತನಿಗೆ ಕೇಳಿ ನೋಡಿ- ಗೋಡ್ಸೆ ಗಾಂಧೀಜಿಯನ್ನು ಕೊಲ್ಲಲು ಕಾರಣವೇನು ಎಂದು.  ಪ್ರತಿಯೊಬ್ಬ ಆರೆಸ್ಸೆಸ್ಸ್ ಕಾರ್ಯಕರ್ತನೂ ಒಂದೇ ತರದ ಉತ್ತರ ಕೊಡುತ್ತಾನೆ – ಗಾಂಧೀಜಿ ಭಾರತದ ವಿಭಜನೆ ಆಗಲು ಕಾರಣ, ಅದಕ್ಕಾಗಿ ಗೋಡ್ಸೆ ದೇಶದ ಮೇಲಿನ ಪ್ರೇಮದಿಂದ ಗಾಂಧೀಜಿಯನ್ನು ಕೊಂದಿದ್ದು ಎಂದು.  ಆರೆಸ್ಸೆಸ್ಸಿನವರು ಕೊಡುವ ಈ ಕಾರಣ ನಿಜವಲ್ಲವಾದರೂ ಒಂದು ಕ್ಷಣ ಈ ಕಾರಣವನ್ನು ಹಿಮ್ಮುಖವಾಗಿ ಸಾಗಿ ವಿಶ್ಲೇಶಿಸುವುದು ಒಳಿತು.  ಒಂದು ವೇಳೆ 1947 ರಲ್ಲಿ ಭಾರತದ ವಿಭಜನೆ ಆಗಿರದಿದ್ದರೆ ಇಂದಿನ ಅಖಂಡ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿ ಹೇಗಿರುತ್ತಿತ್ತು ಎಂದು ಸ್ವಲ್ಪ ಕಲ್ಪಿಸಿಕೊಳ್ಳಿ.

ಭಾರತದ 130 ಕೋಟಿ, ಬಾಂಗ್ಲಾದೇಶದ 16 ಕೋಟಿ ಮತ್ತು ಪಾಕಿಸ್ತಾನದ 14 ಕೋಟಿ ಜನಸಂಖ್ಯೆ ಕೂಡಿ ಒಟ್ಟು ಜನ ಸಂಖ್ಯೆ ಒಟ್ಟು 160 ಕೋಟಿ ಆಗುತ್ತಿತ್ತು. ಭೌಗೋಳಿಕ ವಿಸ್ತಾರದಲ್ಲಿ ಚೀನಾ ನಮಗಿಂತ ಎರಡು ಪಟ್ಟು ದೊಡ್ಡದಿದ್ದರೂ ಜನಸಂಖ್ಯೆಯಲ್ಲಿ ನಾವು ವಿಶ್ವಗುರು ಆಗಿರುತ್ತಿದ್ದೆವು. ಇನ್ನು ಧರ್ಮವಾರು ಜನಸಂಖ್ಯೆ ನೋಡಿದರೆ, 160 ಕೋಟಿ ಜನಸಂಖ್ಯೆಯಲ್ಲಿ ಮುಸ್ಲಿಮರ ಸಂಖ್ಯೆ 50 ಕೋಟಿಗೂ ಹೆಚ್ಚಿರುತ್ತಿತ್ತು. ಇಂತಹಾ ಸನ್ನಿವೇಶದಲ್ಲಿ ಒಂದು ವೇಳೆ ಅಡ್ವಾಣಿ ರಾಮ ಜನ್ಮಭೂಮಿ ರಥಯಾತ್ರಾ ಹೊರಡಿಸುತ್ತಿದ್ದರೆ ಅವರ ಗತಿ ಎನಾಗುತ್ತಿತ್ತು ಊಹಿಸಿ.

2002 ರಲ್ಲಿ ಮೋದಿ ಗೋಧ್ರಾದಲ್ಲಿ ತನ್ನವರಿಂದಲೇ ಕರಸೇವಕರ ರೈಲಿಗೆ ಬೆಂಕಿ ಹಾಕಿಸಿ ನಂತರ ಭೀಕರ ಕೋಮು ಗಲಭೆ ಹಬ್ಬಿಸಿದ್ದರೆ ಮೋದಿ ಸಹಿತ ಎಲ್ಲಾ ಬನಿಯಾ ಮತ್ತು ಜೈನರು ಗುಜರಾತ್ ಬಿಟ್ಟು ಓಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜನಾಂಗೀಯ ಯುದ್ಧ ನಡೆಯುತ್ತಿತ್ತು, ಬ್ರಿಟಿಷರು ಮುಸ್ಲಿಮರನ್ನು “ಮಾರ್ಷಿಯಲ್ ರೇಸ್” ಎಂದು ವರ್ಗೀಕರಿಸಿದ್ದು ಸುಮ್ಮನೆ ಅಲ್ಲ. ಗುಜರಾತಿಗಳು ಬಾಲ ಬಿಚ್ಚಿದ್ದರೆ ಬಲೂಚಿಸ್ತಾನದ ಪಠಾಣರು ಗುಜರಾತಿಗೆ ನುಗ್ಗಿ ಬುದ್ದಿ ಕಲಿಸಿ ಮೋದಿ ಅಮಿತ್ ಶಾ ಇಬ್ಬರನ್ನೂ ಗುಜರಾತಿನಿಂದ ಓಡಿಸುತ್ತಿದ್ದರು. ಅಖ್ಲಾಕ್ ಮುಂತಾದವರನ್ನು ಗೋಮಾಂಸದ ಹೆಸರಲ್ಲಿ ಬಜರಂಗಿಗಳು ಚಚ್ಚಿ ಕೊಂದಾಗ ಅದಕ್ಕೆ ಪ್ರತಿಕಾರವನ್ನು ಉತ್ತರ ಪ್ರದೇಶದ ಮುಸ್ಲಿಮರೇ ತೀರಿಸಿಕೊಳ್ಳುತ್ತಿದ್ದರು. ಬೀಫ್-ಗೋಮೂತ್ರದ ಹೆಸರಲ್ಲಿ ಮುಸ್ಲಿಮರ ರಕ್ತಪಾತ ಮಾಡಿದ್ದರೆ ಅವರೂ ತಿರುಗಿ ಸೇಡು ತೀರಿಸಿಕೊಳ್ಳುತ್ತಿದ್ದರು. ಯೋಗಿಯಂತವರು ಎಂದೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಮೋದಿಗಂತೂ ಆರು ತಿಂಗಳೂ ಗುಜರಾತ್ ಮುಖ್ಯಮಂತ್ರಿ ಆಗಿರಲು ಕೇಂದ್ರ ಸರಕಾರ ಬಿಡುತ್ತಿರಲಿಲ್ಲ. ಆರೆಸ್ಸೆಸ್ಸಿನ ನಾಗಪುರ ಹೆಡ್ ಆಫೀಸ್ ಪಕೋಡಾ ಮಾರುವ ಕೇಂದ್ರವಾಗಿರುತ್ತಿತ್ತು. ಮುಸ್ಲಿಮರ ಹೆಸರಲ್ಲಿ ದ್ವೇಷ ಸಾಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ಮೋದಿಯಂತಹಾ ಗುಜರಾತಿ ವ್ಯಾಪಾರಿ ಭಾರತದ ಜನತೆಗೆ ಅತ್ತ ಪಾಕಿಸ್ತಾನ ತೋರಿಸಿ ಇತ್ತ ದೇಶದ ಖನಿಜ ಸಂಪತ್ತನ್ನು ಹಾಗೂ ಸಾರ್ವಜನಿಕ  ಉದ್ಯಮಗಳನ್ನು ಕವಡೆ ಕಾಸಿಗೆ ತನ್ನ ಬನಿಯಾ ಉದ್ಯಮಿಗಳಿಗೆ ಮಾರಲು ಸಾಧ್ಯ ಆಗುತ್ತಲೇ ಇರಲಿಲ್ಲ.

ಪಾಕಿಸ್ತಾನವೇ ಇರದಿದ್ದರೆ ತನ್ನ ವಿಫಲತೆಗೆ ಮೋದಿ ಯಾರನ್ನು ಹೊಣೆ ಮಾಡಿ ಬಯ್ಯುತ್ತಿದ್ದರು? “ಘರ್ ಮೆ ಗುಸ್ ಕೆ ಮಾರೇಂಗೆ” ಎಂದು ಯಾರ ಮುಂದೆ ಮೋದಿ ಬಡಾಯಿ ಕೊಚ್ಚಲು ಸಾಧ್ಯವಾಗುತ್ತಿತ್ತು? ಭಾರತದ ಸೇನೆಯಲ್ಲಿ ಅರ್ಧಕರ್ಧ ಮುಸ್ಲಿಮರೇ ಇರುತ್ತಿದ್ದರು. ಕಾರಣ ಉತ್ತಮ ದೇಹ ಧಾರ್ಢ್ಯ ಹೊಂದಿರುವ ಮ್ಜುಸ್ಲಿಮರೇ ಮಿಲಿಟರಿಯಲ್ಲಿ  ಹೆಚ್ಚಿರುತ್ತಿದ್ದರು. 1947 ರಲ್ಲಿ ಭಾರತ ವಿಭಜನೆ ಆಗಿರದಿದ್ದರೆ ಯಾರ ವಿರುದ್ಧ ದ್ವೇಷ ಭೋಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತು? ಭಾರತದಲ್ಲಿ ಯಾವುದೇ ಹಿಂದುತ್ವವಾದಿ ಸರಕಾರ ಎಂದೂ ಅಧಿಕಾರಕ್ಕೆ ಬರುತ್ತಿರಲಿಲ್ಲ.

1857ರಲ್ಲಿ ಝಾನ್ಸಿ ಲಕ್ಷ್ಮೀಬಾಯಿ ಮತ್ತು ಮೋಘಲರ ಕೊನೆಯ ದೊರೆ ಬಹದೂರ್ ಶಾ ಜಫರ್ ಬ್ರಿಟಿಷರ ವಿರುದ್ಧ ಎದ್ದ ಬಂಡಾಯ ಹಾಗೂ ಸಿಪಾಯಿ ದಂಗೆಯನ್ನು “ಮೊದಲನೇ ಸ್ವಾತಂತ್ರ್ಯ ಯುದ್ಧ” ಎಂದು ಕರೆಯಲಾಗುತ್ತದೆ. ಒಂದು ವೇಳೆ ಅಂದು ಝಾನ್ಸಿ ಲಕ್ಷ್ಮೀಬಾಯಿ, ಮೋಘಲರು ಮತ್ತು ಇತರ ರಾಜರ-ನವಾಬರ ಒಕ್ಕೂಟ ಬ್ರಿಟಿಷರ ವಿರುದ್ಧ ಗೆದ್ದು ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ್ದರೆ ಎನಾಗುತ್ತಿತ್ತು ಊಹಿಸಿ. ಝಾನ್ಸಿ ಲಕ್ಷ್ಮಿ ಅಥವಾ ಮೋಘಲರು ಅಂದು ಬ್ರಿಟಿಷರ ವಿರುದ್ಧ ಬಂಡಾಯ ಎದ್ದಿದ್ದು ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿ ಪ್ರಜಾಪ್ರಭುತ್ವ ಸ್ಥಾಪಿಸಲು ಅಲ್ಲವೇ ಅಲ್ಲ. ಅವರು ಬಂಡಾಯ ಎದ್ದಿದ್ದು ತಮ್ಮ ತಮ್ಮ ರಾಜ್ಯಗಳನ್ನು ಬ್ರಿಟಿಷರಿಂದ ಉಳಿಸಿಕೊಳ್ಳಲು. ಅಂದು ಈ ರಾಜರು-ನವಾಬರು ಗೆದ್ದಿದ್ದರೆ, ನಂತರ ಅವರು ತಮ್ಮ ತಮ್ಮ ರಾಜಗಳನ್ನು ಪ್ರತ್ಯೇಕವಾಗಿಯೇ ಉಳಿಸಿ ಕೊಳ್ಳುತ್ತಿದ್ದರು. ಆಗ ಭಾರತದಲ್ಲಿ ಸುಮಾರು 550 ಸಂಸ್ಥಾನಗಳು ಹಾಗೂ ನವಾಬರು ಇರುತ್ತಿದ್ದರು. ಒಂದೊಂದು ಸಂಸ್ಥಾನಕ್ಕೆ ಒಂದೊಂದು ಕರೆನ್ಸಿ ಇರುತ್ತಿತ್ತು, ಬೆಂಗಳೂರಿನಿಂದ ಮುಂಬೈ ಗೆ ಹೋಗಲು ಪಾಸ್ಪೋರ್ಟಿನ ಅಗತ್ಯ ಬೀಳುತ್ತಿತ್ತು. ಕಾಶ್ಮೀರ ಎಂದೋ ಪ್ರತ್ಯಕವಾಗಿ ಹೋಗಿರುತ್ತಿತ್ತು. ಪ್ರತಿಯೊಂದು ಸಂಸ್ಥಾನವೂ ತಮ್ಮದೇ ಆದ ಪ್ರತ್ಯೇಕ ಮಿಲಿಟರಿ ಹೊಂದಿರುತ್ತಿದ್ದವು, ಜತೆಗೆ ಗಡಿ ಕಲಹದಿಂದಾಗಿ ಯಾವಾಗಲೂ ಸಂಸ್ಥಾನಗಳ ನಡುವೆ ಯುದ್ಧ ನಡೆಯುತ್ತಲೇ ಇರುತ್ತಿತ್ತು. ಸಮಸ್ತ ಭಾರತ ಸೊಮಾಲಿಯಾಕ್ಕಿಂತ ಕಡೆಯಾಗಿರುತ್ತಿತ್ತು. ಮುಕ್ಕಾಲು ಪಾಲು ಜನತೆ ಹಸಿವಿನಿಂದ ಬಳಲುತ್ತಿತ್ತು. “ಘರ್ ಮೆ ಗುಸ್ ಕೆ ಮಾರೆಂಗೆ” ಅನ್ನುವ ಪುಕ್ಕಲು ಬನಿಯಾ ಎಲ್ಲಿಯೋ ಒಂದು ಸಣ್ಣ ನಗರದಲ್ಲಿ ಪಕೋಡಾ ಅಂಗಡಿ ನಡೆಸುತ್ತಾ ಜನರನ್ನು ಯಾಮಾರಿಸುತ್ತಾ ಜೀವನ ನಡೆಸುತ್ತಿದ್ದ ಅಷ್ಟೇ. 550 ರಾಜ ಸಂಸ್ಥಾನಗಳಿದ್ದ ಇಷ್ಟು ದೊಡ್ಡ ಭಾರತ ದೇಶ ವಿಛಿದ್ರವಾಗದೇ ಇಂದು ಒಂದಾಗಿ ಇದ್ದರೆ ಅದಕ್ಕೆ ನಾವು ಬ್ರಿಟಿಷರಿಗೆ ಹಾಗೂ ಗಾಂಧೀಜಿಗೆ ಋಣಿಯಾಗಿರಬೇಕು. ಗೋಡ್ಸೆ ಭಕ್ತ ಆರೆಸ್ಸೆಸ್ಸಿನವರಿಗೆ ಮತ್ತು ವಾಟ್ಸಪ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ದೂರಗಾಮಿ ವಿಶ್ಲೇಷಣೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ತುಂಬಾ ಉಪಯುಕ್ತ ವಿಚಾರಗಳನ್ನು
    ತಿಳಿಸಿದ್ದೀರಿ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...