Homeಕರ್ನಾಟಕತುಮಕೂರಿನಲ್ಲಿ 'ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ' ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

- Advertisement -
- Advertisement -
‘ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರೈತರ ನೆರವಿಗೆ ಶಕ್ತಿ ಬರುತ್ತಿಲ್ಲ. ಹೀಗಾಗಿ ರೈತರು, ಅಲೆಮಾರಿಗಳು, ಬುಡಕಟ್ಟುಗಳು, ಮಹಿಳೆಯರು ಮತ್ತು ಇಡೀ ದಕ್ಷಿಣ ಭಾರತವೇ ಅಲ್ಪಸಂಖ್ಯಾತವಾಗಿದ್ದು ಇವರ ನೆರವಿಗೆ ಯಾರೂ ಬರುತ್ತಿಲ್ಲ’ ಎಂದು ಹಿರಿಯ ವಿಮರ್ಶಕ ಡಾ. ನಟರಾಜ್ ಬೂದಾಳ್ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಜನರ ದನಿಗೆ ದನಿಗೂಡುತ್ತಿಲ್ಲ. ಮಹಿಳೆಯರು ಅಲ್ಪಸಂಖ್ಯಾತರಾಗಿಯೇ ಉಳಿದಿದ್ದಾರೆ. ಹಾಗೆಯೇ ಅವರು ಮಾತನಾಡುವ ಭಾಷೆ, ಅಭಿವ್ಯಕ್ತಿ ಲೆಕ್ಕಕ್ಕೇ ಇಲ್ಲದಂತಹ ಪರಿಸ್ಥಿತಿ ಇದೆ. ಲೆಕ್ಕಕ್ಕೆ ಸಿಗದಂತೆ ನೋಡಿ ಕೊಳ್ಳುವ ಜಾಣ್ಮೆಯೂ ಮುಂದುವರಿದಿದೆ. ಅಲ್ಪಸಂಖ್ಯಾತ ದಕ್ಷಿಣ ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಯಾರ ಗಮನವೂ ಇತ್ತ ಕಡೆ ಇಲ್ಲವಾಗಿದೆ ಎಂದು ಹೇಳಿದರು.
ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ರವಿಕುಮಾರ್ ನೀಹ ಅವರು ಬರೆದಿರುವ ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾವು ಓದುವ ಓದು ನಮ್ಮ ದಾಗಿಲ್ಲ. ನಾವು ಓದುತ್ತಿರುವುದು ನಮ್ಮದಲ್ಲದ ಬೇರೆ ಪಠ್ಯ. ಹಾಗಾಗಿ ಕಣ್ಣು ಧರಿಸಿಕೊಂಡು ಓದಬೇಕಾದ ಅನಿವಾರ್ಯತೆ ಇದೆ. ಮಂಟೇಸ್ವಾಮಿ, ಮಲೆ ಮಹಾದೇಶ್ವರ, ಜುಂಜಪ್ಪ ಕಾವ್ಯ ನಮ್ಮದಾದರೂ ಇವುಗಳನ್ನು ಓದುವ ಕ್ರಮ ನಮ್ಮದಾಗಿಲ್ಲ. ಇಂತಹ ಸಂದರ್ಭದಲ್ಲಿ  ನಮ್ಮದೇ ಕ್ರಮದಲ್ಲಿ ಓದಬೇಕು ಎಂದು ಸಲಹೆ ನೀಡಿದರು.
ಇಲ್ಲಿ ನಮ್ಮದೇ ಅಕ್ಷರ, ನಮ್ಮದೇ ಪಠ್ಯವನ್ನು ನಮ್ಮದೇ ರೀತಿಯಲ್ಲಿ ಓದುತ್ತಿಲ್ಲ. ಅಕ್ಷರ ಮತ್ತು ಪಠ್ಯ ಮತ್ತು ಓದನ್ನು ನಿಯಂತ್ರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಾಗಾಗಿ ಓದು ನಮ್ಮದಾಗಬೇಕು. ಆಗ ಪಠ್ಯ ಮತ್ತು ಅಕ್ಷರ ನಮ್ಮದಾಗುತ್ತದೆ. ಮಂಟೇಸ್ವಾಮಿ, ಕಾವ್ಯದಲ್ಲಿ ಬರುವ ನಾಯಕ ತನ್ನದೇ ಲೋಕ ನಿರ್ಮಿಸಿ ದೇವರನ್ನು ಸೃಷ್ಟಿಸುತ್ತಾರೆ. ಅವರಿಗೆ ವಿವಾಹವನ್ನು ಮಾಡುತ್ತಾರೆ. ತಾನೇ ಧರಗೆ ದೊಡ್ಡವನಾಗಿ ಮೆರೆಯುತ್ತಾನೆ. ಇಂತಹ ಕ್ರಿಯೆಗಳು ನಡೆಯಬೇಕು. ಆಗ ಲೋಕ ನಮ್ಮದಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆ ಅತ್ಯಂತ ಪ್ರಮುಖ ಲೇಖಕರು ಮತ್ತು ಗಟ್ಟಿ ಸಾಹಿತ್ಯವನ್ನು ನೀಡಿದೆ ಎಂದು ಬೇರೆ ಕಡೆ ಹೇಳುವುದು ರೂಢಿಯಲ್ಲಿದೆ. ಹಾಗೆಯೇ ಇಲ್ಲಿ ಅಷ್ಟೇ ಭಿನ್ನಧ್ವನಿಯೂ ಇದೆ. ಕೆ.ಬಿ.ಸಿದ್ದಯ್ಯ ಕಾವ್ಯ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅದು ಕನ್ನಡ ಸಾಹಿತ್ಯ ಲೋಕದಲ್ಲಿ ಬಹುಮುಖ್ಯ ಕಾವ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಜನಪರ ಚಿಂತಕ ಕೆ.ದೊರೈರಾಜ್, ಲೇಖಕ ಡಾ.ರಾಜಪ್ಪ ದಳವಾಯಿ, ಲೇಖಕಿ ಮಲ್ಲಿಕಾ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಉಪನ್ಯಾಸಕ ಕೊಟ್ಟಶಂಕರ್, ಗುಬ್ಬಚ್ಚಿ ಸತೀಶ್, ಕೃತಿಕಾರ ಡಾ. ರವಿಕುಮಾರ್ ನೀಹ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...