Homeಕರ್ನಾಟಕತುಮಕೂರಿನಲ್ಲಿ 'ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ' ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

- Advertisement -
- Advertisement -
‘ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರೈತರ ನೆರವಿಗೆ ಶಕ್ತಿ ಬರುತ್ತಿಲ್ಲ. ಹೀಗಾಗಿ ರೈತರು, ಅಲೆಮಾರಿಗಳು, ಬುಡಕಟ್ಟುಗಳು, ಮಹಿಳೆಯರು ಮತ್ತು ಇಡೀ ದಕ್ಷಿಣ ಭಾರತವೇ ಅಲ್ಪಸಂಖ್ಯಾತವಾಗಿದ್ದು ಇವರ ನೆರವಿಗೆ ಯಾರೂ ಬರುತ್ತಿಲ್ಲ’ ಎಂದು ಹಿರಿಯ ವಿಮರ್ಶಕ ಡಾ. ನಟರಾಜ್ ಬೂದಾಳ್ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಜನರ ದನಿಗೆ ದನಿಗೂಡುತ್ತಿಲ್ಲ. ಮಹಿಳೆಯರು ಅಲ್ಪಸಂಖ್ಯಾತರಾಗಿಯೇ ಉಳಿದಿದ್ದಾರೆ. ಹಾಗೆಯೇ ಅವರು ಮಾತನಾಡುವ ಭಾಷೆ, ಅಭಿವ್ಯಕ್ತಿ ಲೆಕ್ಕಕ್ಕೇ ಇಲ್ಲದಂತಹ ಪರಿಸ್ಥಿತಿ ಇದೆ. ಲೆಕ್ಕಕ್ಕೆ ಸಿಗದಂತೆ ನೋಡಿ ಕೊಳ್ಳುವ ಜಾಣ್ಮೆಯೂ ಮುಂದುವರಿದಿದೆ. ಅಲ್ಪಸಂಖ್ಯಾತ ದಕ್ಷಿಣ ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಯಾರ ಗಮನವೂ ಇತ್ತ ಕಡೆ ಇಲ್ಲವಾಗಿದೆ ಎಂದು ಹೇಳಿದರು.
ತುಮಕೂರಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ರವಿಕುಮಾರ್ ನೀಹ ಅವರು ಬರೆದಿರುವ ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾವು ಓದುವ ಓದು ನಮ್ಮ ದಾಗಿಲ್ಲ. ನಾವು ಓದುತ್ತಿರುವುದು ನಮ್ಮದಲ್ಲದ ಬೇರೆ ಪಠ್ಯ. ಹಾಗಾಗಿ ಕಣ್ಣು ಧರಿಸಿಕೊಂಡು ಓದಬೇಕಾದ ಅನಿವಾರ್ಯತೆ ಇದೆ. ಮಂಟೇಸ್ವಾಮಿ, ಮಲೆ ಮಹಾದೇಶ್ವರ, ಜುಂಜಪ್ಪ ಕಾವ್ಯ ನಮ್ಮದಾದರೂ ಇವುಗಳನ್ನು ಓದುವ ಕ್ರಮ ನಮ್ಮದಾಗಿಲ್ಲ. ಇಂತಹ ಸಂದರ್ಭದಲ್ಲಿ  ನಮ್ಮದೇ ಕ್ರಮದಲ್ಲಿ ಓದಬೇಕು ಎಂದು ಸಲಹೆ ನೀಡಿದರು.
ಇಲ್ಲಿ ನಮ್ಮದೇ ಅಕ್ಷರ, ನಮ್ಮದೇ ಪಠ್ಯವನ್ನು ನಮ್ಮದೇ ರೀತಿಯಲ್ಲಿ ಓದುತ್ತಿಲ್ಲ. ಅಕ್ಷರ ಮತ್ತು ಪಠ್ಯ ಮತ್ತು ಓದನ್ನು ನಿಯಂತ್ರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಾಗಾಗಿ ಓದು ನಮ್ಮದಾಗಬೇಕು. ಆಗ ಪಠ್ಯ ಮತ್ತು ಅಕ್ಷರ ನಮ್ಮದಾಗುತ್ತದೆ. ಮಂಟೇಸ್ವಾಮಿ, ಕಾವ್ಯದಲ್ಲಿ ಬರುವ ನಾಯಕ ತನ್ನದೇ ಲೋಕ ನಿರ್ಮಿಸಿ ದೇವರನ್ನು ಸೃಷ್ಟಿಸುತ್ತಾರೆ. ಅವರಿಗೆ ವಿವಾಹವನ್ನು ಮಾಡುತ್ತಾರೆ. ತಾನೇ ಧರಗೆ ದೊಡ್ಡವನಾಗಿ ಮೆರೆಯುತ್ತಾನೆ. ಇಂತಹ ಕ್ರಿಯೆಗಳು ನಡೆಯಬೇಕು. ಆಗ ಲೋಕ ನಮ್ಮದಾಗುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲೆ ಅತ್ಯಂತ ಪ್ರಮುಖ ಲೇಖಕರು ಮತ್ತು ಗಟ್ಟಿ ಸಾಹಿತ್ಯವನ್ನು ನೀಡಿದೆ ಎಂದು ಬೇರೆ ಕಡೆ ಹೇಳುವುದು ರೂಢಿಯಲ್ಲಿದೆ. ಹಾಗೆಯೇ ಇಲ್ಲಿ ಅಷ್ಟೇ ಭಿನ್ನಧ್ವನಿಯೂ ಇದೆ. ಕೆ.ಬಿ.ಸಿದ್ದಯ್ಯ ಕಾವ್ಯ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಅದು ಕನ್ನಡ ಸಾಹಿತ್ಯ ಲೋಕದಲ್ಲಿ ಬಹುಮುಖ್ಯ ಕಾವ್ಯವಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಜನಪರ ಚಿಂತಕ ಕೆ.ದೊರೈರಾಜ್, ಲೇಖಕ ಡಾ.ರಾಜಪ್ಪ ದಳವಾಯಿ, ಲೇಖಕಿ ಮಲ್ಲಿಕಾ ಬಸವರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ, ಯುವ ಮುಖಂಡ ಡ್ಯಾಗೇರಹಳ್ಳಿ ವಿರೂಪಾಕ್ಷ, ಉಪನ್ಯಾಸಕ ಕೊಟ್ಟಶಂಕರ್, ಗುಬ್ಬಚ್ಚಿ ಸತೀಶ್, ಕೃತಿಕಾರ ಡಾ. ರವಿಕುಮಾರ್ ನೀಹ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...