Homeಮುಖಪುಟಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ಪೊಲೀಸರ ಗುಂಡೇಟಿನಿಂದ ತೀರಿಕೊಂಡಿದ್ದಾನೆ ಎಂದು ರೈತನ ಕುಟುಂಬದವರು ಆರೋಪಿಸಿರುವ ವರದಿ ಉಲ್ಲೇಖಿಸಿ ಮಾಡಿದ ಟ್ವೀಟ್ ಅನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

- Advertisement -
- Advertisement -

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ದಿ ವೈರ್ ವರದಿಯನ್ನು ಟ್ವೀಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಭಾನುವಾರ ರಾಂಪುರ್ ಜಿಲ್ಲೆಯಲ್ಲಿ ದಿ ವೈರ್ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದರಾಜನ್ ಶನಿವಾರ ದಿ ವೈರ್‌ನ ವರದಿಯೊಂದನ್ನು ಟ್ವೀಟ್ ಮಾಡಿದ್ದು, ಅದರ ಪ್ರಕಾರ, ಸಿಂಗ್ ಕುಟುಂಬವು ತನ್ನ ಟ್ರ್ಯಾಕ್ಟರ್ ಪಲ್ಟಿಯಾಗಿರುವುದರಿಂದ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ ಎಂಬ ದೆಹಲಿ ಪೊಲೀಸರ ಹೇಳಿಕೆಗೆ ತಕರಾರು ತೆಗೆದಿದೆ.

‘ಗುಂಡು ತಗುಲಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ನವರೀತ್‌ಸಿಂಗ್ ಚಾಲನೆ ಮಾಡಲಾಗದೇ ಇದ್ದುದರಿಂದ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಇದರಿಂದ ತಲೆಗೆ ಗಾಯವಾಗಿ ಮೃತನಾಗಿದ್ದಾನೆ’ ಎಂದು ಕುಟುಂಬವು ಆರೋಪಿಸಿದೆ.

ಸಿಂಗ್ ಅವರ ಅಜ್ಜ ಕೊಟ್ಟ ಹೇಳಿಕೆಯನ್ನು ವರದರಾಜನ್ ಉಲ್ಲೇಖಿಸಿದ್ದಾರೆ, “ಶವಪರೀಕ್ಷೆಯ ಭಾಗವಾಗಿದ್ದ ವೈದ್ಯರೊಬ್ಬರು ಗುಂಡಿನ ಗಾಯಗಳಾಗಿವೆ ಎಂದು ಹೇಳಿದರು. ಆದರೆ ನನ್ನ ಕೈಗಳನ್ನು ಕಟ್ಟಲಾಗಿದೆ ಎಂದು ಆ ವೈದ್ಯರು ತಿಳಿಸಿದರು” ಎಂದು ಮೃತನ ಅಜ್ಜ ಹೇಳಿರುವುದಾಗಿ ವೈರ್ ವರದಿ ತಿಳಿಸಿದೆ.

ರಾಂಪುರ್ ನಿವಾಸಿ ಸಂಜು ತುರಾಹಾ ಅವರ ದೂರಿನ ಆಧಾರದ ಮೇಲೆ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ (ಪ್ರಚೋದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಶನಿವಾರದ ವರದರಾಜನ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿದೆ. ಟ್ವೀಟ್‌ನಲ್ಲಿ ಪ್ರಸ್ತಾಪಿತ ವರದಿಯನ್ನು, ಶವಪರೀಕ್ಷೆ ವೈದ್ಯರಿಂದಲೇ ಹೇಳಲಾಗಿದೆ ಎಂದು ತೋರುವ ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ, ಇದು ಗೊಂದಲಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ.

“ಇದರ ಪರಿಣಾಮವಾಗಿ, ರಾಂಪುರದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ಉದ್ವಿಗ್ನತೆ ಹೆಚ್ಚಾಗಿದೆ” ಎಂದು ಎಫ್‌ಐಆರ್ ಹೇಳಿದೆ. “ಈ ಪೋಸ್ಟ್ ಖಂಡಿತವಾಗಿಯೂ ಸಾರ್ವಜನಿಕರಿಗೆ ಹಾನಿ ಮಾಡುವ ಮೂಲಕ ಹಿಂಸೆಯನ್ನು ಪ್ರಚೋದಿಸುವ ಪಿತೂರಿಯ ಒಂದು ಭಾಗವೆಂದು ತೋರುತ್ತದೆ’ ಎಂದು ವಿವರಿಸಲಾಗಿದೆ.

ನವರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯನ್ನು ಮೂವರು ಪ್ಯಾನಲ್ ವೈದ್ಯರು ನಡೆಸಿದ್ದಾರೆ ಮತ್ತು ಅದನ್ನು ಸರಿಯಾಗಿ ವಿಡಿಯೋಗ್ರಾಫ್ ಮಾಡಲಾಗಿದೆ ಎಂದು ಎಫ್‌ಐಆರ್ ಪ್ರತಿಪಾದಿಸಿದೆ. ದಿ ವೈರ್‌ನ ವರದಿಯಲ್ಲಿ ಪ್ರತಿಪಾದಿಸಲ್ಪಟ್ಟಂತೆ, ಮೂವರು ವೈದ್ಯರಲ್ಲಿ ಯಾರೂ ಅಂತಹ ಯಾವುದೇ ಹೇಳಿಕೆಯನ್ನು ಯಾರಿಗೂ ನೀಡಿದ್ದನ್ನು ನಿರಾಕರಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.

“ಇದರ ಹೊರತಾಗಿಯೂ, ಟ್ವೀಟ್ ಅನ್ನು ಇನ್ನೂ ತೆಗೆದುಹಾಕಲಾಗಿಲ್ಲ” ಎಂದು ಎಫ್‌ಐಆರ್ ಆಕ್ಷೇಪಿಸಿದೆ. “ಸರಿಯಾದ ಸಂಗತಿಗಳನ್ನು ತಿಳಿಯದೆ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮ- ಟ್ವಿಟ್ಟರ್ ಮೂಲಕ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡುವ ಮೂಲಕ” ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಉದ್ದೇಶವನ್ನು ಟ್ವೀಟ್ ಹೊಂದಿದೆ ಎಂದು ಆರೋಪಿಸಲಾಗಿದೆ.

ಸಾರ್ವಜನಿಕರನ್ನು “ಪ್ರಚೋದಿಸುವ” ಸಲುವಾಗಿ, ಗುಂಡೇಟಿನಿಂದ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಹೇಳಲು ಸರ್ಕಾರಿ ವೈದ್ಯಕೀಯ ಅಧಿಕಾರಿಯನ್ನು ಪೋಸ್ಟ್ ತಪ್ಪಾಗಿ ಉಲ್ಲೇಖಿಸಿದೆ ಎಂದು ತಿಳಿಸಲಾಗಿದೆ.

ಈ ವಿಷಯದ ಬಗ್ಗೆ ಉತ್ತರ ಪ್ರದೇಶದಲ್ಲಿ ಕಳೆದ ವಾರದಲ್ಲಿ ಪತ್ರಕರ್ತರು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ ಎರಡನೆ ಪ್ರಕರಣವಿದು. ಮಂಗಳವಾರ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾವಿಗೀಡಾದ ನವರೀತ್ ಸಿಂಗ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದ ಆರು ಜನ ಪತ್ರಕರ್ತರು ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಆರರಲ್ಲಿ ಮೃಣಾಲ್ ಪಾಂಡೆ, ರಾಜ್‌ದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಆಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಸೇರಿದ್ದಾರೆ.

ಎಫ್‌ಐಆರ್‌ಗೂ ಮೊದಲು ಡಿಸಿ ಟ್ವೀಟ್

ವರದರಾಜನ್ ವಿರುದ್ಧದ ಎಫ್‌ಐಆರ್‌ಗೆ ಮೊದಲು ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ರಾಂಪುರ್ ಜಿಲ್ಲಾಧಿಕಾರಿಯ ಅಧಿಕೃತ ಟ್ವಿಟರ್ ಖಾತೆಯ ನಡುವೆ ಟ್ವೀಟ್ ಸಂಭಾಷಣೆ ನಡೆದಿದೆ.
ಟ್ವಿಟರ್‌ನಲ್ಲಿ ಇನ್ನೂ ಇರುವ ವರದರಾಜನ್ ಅವರ ಮೂಲ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ರಾಂಪುರ್ ಜಿಲ್ಲಾಧಿಕಾರಿ ಅವರ ಅಧಿಕೃತ ಖಾತೆಯು ಪ್ರತಿಕ್ರಿಯಿಸಿ, “ದಯವಿಟ್ಟು ನಾವು ನಿಮಗೆ ಸತ್ಯಕ್ಕೆ ಮಾತ್ರ ಅಂಟಿಕೊಳ್ಳಬೇಕೆಂದು ವಿನಂತಿಸುತ್ತೇವೆ. ನಮ್ಮ ವಿನಂತಿಗೆ ತಮ್ಮ ಪ್ರತಿಕ್ರಿಯೆಯನ್ನು ನಿಮ್ಮಿಂದ ಪ್ರಾಮಾಣಿಕವಾಗಿ ನಿರೀಕ್ಷಿಸುತ್ತೇವೆ. ಧನ್ಯವಾದ.” ಈ ಟ್ವೀಟ್ ಜೊತೆಗೆ ಪೋಸ್ಟ್ ಮಾರ್ಟಮ್ ನಡೆಸಿದ ಮೂವರು ಸರ್ಕಾರಿ ವೈದ್ಯಕೀಯ ಅಧಿಕಾರಿಗಳು ಹೇಳಿಕೆ ನೀಡಿದ್ದನ್ನು ನಿರಾಕರಿಸಿದ ಟಿಪ್ಪಣಿ ಲಗತ್ತಿಸಲಾಗಿದೆ. ಅವರಲ್ಲಿ ಯಾರೂ ಮಾಧ್ಯಮದ ಯಾರೊಂದಿಗೂ ಮಾತನಾಡಿಲ್ಲ ಮತ್ತು ಶವಪರೀಕ್ಷೆಯ ಬಗ್ಗೆ ಯಾವುದೇ ಪತ್ರಕರ್ತರಿಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ವರದರಾಜನ್ ಅವರು, ಮೂವರು ವೈದ್ಯರ ಅಧಿಕೃತ ಘೋಷಣೆಯನ್ನು ಸೇರಿಸಿ ದಿ ವೈರ್ ವರದಿಯನ್ನು ಅಪ್ಡೇಟ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಜಿಲ್ಲಾಧಿಕಾರಿ, “ನಿಮ್ಮ ಸ್ಟೋರಿ ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಉಂಟುಮಾಡಬಹುದು ಎಂದು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇವೆ. ಇದು ಈಗಾಗಲೇ ಇಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಯಾರು ಜವಾಬ್ದಾರಿ?’ ಎಫ್‌ಐಆರ್ ದಾಖಲಾದ ಗಂಟೆಗಳ ನಂತರ ವರದರಾಜ್‌ನ್ ಅವರಿಗೆ ಟ್ವೀಟ್ ಮಾಡಿದ್ದಾರೆ.

ಭಾನುವಾರ ಬೆಳಿಗ್ಗೆ ಎಫ್‌ಐಆರ್‌ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ವರದರಾಜನ್ ಇದನ್ನು “ದುರುದ್ದೇಶಪೂರಿತ ಕಾನೂನು ಕ್ರಮ” ಎಂದು ಕರೆದಿದ್ದಾರೆ. “ಈ ದುರುದ್ದೇಶಪೂರಿತ ಕಾನೂನು ಕ್ರಮಕ್ಕಾಗಿ ಐಪಿಸಿಯ ಯಾವ ನಿಬಂಧನೆ ಅವಕಾಶ ಮಾಡಿಕೊಡುತ್ತದೆ? ಟ್ರ‍್ಯಾಕ್ಟರ್ ಪೆರೇಡ್‌ನಲ್ಲಿ ಮೃತಪಟ್ಟ ರೈತನ ಅಜ್ಜ ದಾಖಲೆಯಲ್ಲಿ ಏನು ಹೇಳಿದ್ದಾರೆಂಬುದನ್ನು ಟ್ವೀಟ್ ಮಾಡಿದ್ದಕ್ಕಾಗಿ ಯುಪಿ ಪೊಲೀಸರು ಈ ಕ್ರಮ ಕೈಗೊಳ್ಳುತ್ತಿದ್ದಾರೆ. ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ! ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...