Homeಮುಖಪುಟಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಬಂಧನಕ್ಕೂ ಮುನ್ನ ಪತ್ರಕರ್ತ ಮಂದೀಪ್ ಪುನಿಯಾ ’ಬಿಜೆಪಿಯು ದೆಹಲಿ ಪೊಲೀಸರೊಂದಿಗೆ ಸೇರಿಕೊಂಡು ಹಿಂಸಾಚಾರ ನಡೆಸಲು ಸಿದ್ದತೆ ನಡೆಸಿದೆ ಎಂದು ಆರೋಪಿಸಿದ್ದರು. ಇದರ ಕುರಿತು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸತ್ಯಕ್ಕೆ ಹೆದರುವವರು ನಿಜವಾದ ಪತ್ರಕರ್ತರನ್ನು ಬಂಧಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದೇ ರೀತಿಯಲ್ಲಿ ಧರ್ಮೇಂಧರ್ ಸಿಂಗ್ ಎಂಬುವವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದು ಆ ನಂತರ ಆತ ತನ್ನ ಗುರುತಿನ ಚೀಟಿ ತೋರಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸಿಂಘು ಗಡಿಯಲ್ಲಿ ದೆಹಲಿಯ ಭಾಗಕ್ಕೆ ಬರುವ ಮತ್ತು ಕೆಲವೇ ಸಾವಿರ ಸಂಖ್ಯೆಯಲ್ಲಿರುವ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರು ಪ್ರತಿಭಟನೆ ನಡೆಸುವ ಸ್ಥಳಕ್ಕೆ 50-60 ಜನರ ಗುಂಪೊಂದು ಘೋಷಣೆ ಕೂಗುತ್ತಾ ಬಂದಿತು. 5000-6000 ಸಂಖ್ಯೆಯಲ್ಲಿ ಪೊಲೀಸರು ನೆರೆದಿದ್ದರೂ ಅವರು ಪ್ರತಿಭಟನಾಕಾರರನ್ನು ಒಳಕೆ ಬಿಟ್ಟರು. ನಂತರ ಅವರು ರೈತರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಮುಖ ಪ್ರೇಕ್ಷಕರಾಗಿದ್ದರು ಎಂದು ಮಂದೀಪ್ ಪುನಿಯಾ ಆರೋಪಿಸಿದ್ದರು.

ಈ ಕಾರಣಕ್ಕಾಗಿಯೇ ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಿಂಘು ಗಡಿಯಲ್ಲಿನ ಸ್ಟೇಷನ್ ಹೌಸ್ ಆಫೀಸರ್ ಜೊತೆ ಪತ್ರಕರ್ತ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಯುಂಟುಮಾಡುವುದು), 332 (ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡುವುದು) ಅಡಿಯಲ್ಲಿ ಮಂದೀಪ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾವು ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕಾರವಾನ್ ನಿಯತಕಾಲಿಕೆಯ ರಾಜಕೀಯ ಸಂಪಾದಕ ಹರ್ತೋಶ್ ಸಿಂಗ್ ಬಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...